<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ನಕಲಿ ಔಷಧಿ ತಯಾರಿಸುವವರು, ಕಲಬೆರಕೆ ಮಾಡುವವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವ ಮತ್ತು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸುವ ಉದ್ದೇಶದ ‘ಔಷಧ ಮತ್ತು ಪ್ರಸಾದನ ಸಾಮಗ್ರಿ ಮಸೂದೆ’ಗೆ ವಿಧಾನಸಭೆ ಅಂಗೀಕಾರ ನೀಡಿತು.</p>.<p>ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಸೂದೆಯನ್ನು ಪರ್ಯಾಲೋಚನೆಗೆ ಮಂಡಿಸಿದರು. ‘ಆದರೆ, ಈ ಮಸೂದೆಯಲ್ಲಿ ಜೀವಾವಧಿ ಶಿಕ್ಷೆಯ ಅಂಶವನ್ನು ಕೈಬಿಡಲಾಗಿದೆ’ ಎಂದು ಅವರು ಹೇಳಿದರು.</p>.<p>ವಿಷಕಾರಿ, ನಕಲಿ, ಕಳಪೆ ಔಷಧ ತಯಾರಿಸುವುದು ಮತ್ತು ಮಾರುವುದು ನಿಷಿದ್ಧ. ಈ ಹಿಂದೆ ನಕಲಿ ಔಷಧಿ ಜಪ್ತಿ ಮಾಡಿ ಪ್ರಕರಣ ದಾಖಲಾದ ಸಂದರ್ಭದಲ್ಲಿ ಮಾರಾಟಗಾರರು ಔಷಧ ಎಲ್ಲಿಂದ ತರಿಸಿದ್ದರು ಎಂಬುದನ್ನು ಆರೋಗ್ಯ ಇಲಾಖೆಯೇ ನ್ಯಾಯಾಲಯದಲ್ಲಿ ನಿರೂಪಿಸಬೇಕಿತ್ತು. ಆದರೆ, ಇನ್ನು ಮುಂದೆ ಮಾರಾಟ ಮಾಡುವವರೇ ಎಲ್ಲಿಂದ ತಂದಿದ್ದು ಎಂಬುದನ್ನು ನಿರೂಪಿಸಬೇಕಾಗುತ್ತದೆ ಎಂದು ಅವರು ಹೇಳಿದರು.</p>.<p>1940 ರ ಔಷಧ ಮತ್ತು ಪ್ರಸಾದನ ಸಾಮಗ್ರಿ ಕೇಂದ್ರ ಅಧಿನಿಯಮ ಕರ್ನಾಟಕಕ್ಕೆ ಅನ್ವಯವಾಗುವಂತೆ, ಕೇಂದ್ರ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ರಾಜ್ಯದಲ್ಲಿ ಕೇಂದ್ರ ಔಷಧ ಪ್ರಯೋಗಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ದಿನೇಶ್ ತಿಳಿಸಿದರು.</p>.<p><strong>ಅಂಗೀಕಾರಗೊಂಡ ಮಸೂದೆಗಳು:</strong></p>.<p>ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಮಸೂದೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಮಸೂದೆ, ಬಾಂಬೆ ಸಾರ್ವಜನಿಕ ನ್ಯಾಸ(ಟ್ರಸ್ಟ್) ತಿದ್ದುಪಡಿ ಮಸೂದೆ, ನಾಡುಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಮಸೂದೆಗೆ ಅಂಗೀಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ನಕಲಿ ಔಷಧಿ ತಯಾರಿಸುವವರು, ಕಲಬೆರಕೆ ಮಾಡುವವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವ ಮತ್ತು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸುವ ಉದ್ದೇಶದ ‘ಔಷಧ ಮತ್ತು ಪ್ರಸಾದನ ಸಾಮಗ್ರಿ ಮಸೂದೆ’ಗೆ ವಿಧಾನಸಭೆ ಅಂಗೀಕಾರ ನೀಡಿತು.</p>.<p>ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಸೂದೆಯನ್ನು ಪರ್ಯಾಲೋಚನೆಗೆ ಮಂಡಿಸಿದರು. ‘ಆದರೆ, ಈ ಮಸೂದೆಯಲ್ಲಿ ಜೀವಾವಧಿ ಶಿಕ್ಷೆಯ ಅಂಶವನ್ನು ಕೈಬಿಡಲಾಗಿದೆ’ ಎಂದು ಅವರು ಹೇಳಿದರು.</p>.<p>ವಿಷಕಾರಿ, ನಕಲಿ, ಕಳಪೆ ಔಷಧ ತಯಾರಿಸುವುದು ಮತ್ತು ಮಾರುವುದು ನಿಷಿದ್ಧ. ಈ ಹಿಂದೆ ನಕಲಿ ಔಷಧಿ ಜಪ್ತಿ ಮಾಡಿ ಪ್ರಕರಣ ದಾಖಲಾದ ಸಂದರ್ಭದಲ್ಲಿ ಮಾರಾಟಗಾರರು ಔಷಧ ಎಲ್ಲಿಂದ ತರಿಸಿದ್ದರು ಎಂಬುದನ್ನು ಆರೋಗ್ಯ ಇಲಾಖೆಯೇ ನ್ಯಾಯಾಲಯದಲ್ಲಿ ನಿರೂಪಿಸಬೇಕಿತ್ತು. ಆದರೆ, ಇನ್ನು ಮುಂದೆ ಮಾರಾಟ ಮಾಡುವವರೇ ಎಲ್ಲಿಂದ ತಂದಿದ್ದು ಎಂಬುದನ್ನು ನಿರೂಪಿಸಬೇಕಾಗುತ್ತದೆ ಎಂದು ಅವರು ಹೇಳಿದರು.</p>.<p>1940 ರ ಔಷಧ ಮತ್ತು ಪ್ರಸಾದನ ಸಾಮಗ್ರಿ ಕೇಂದ್ರ ಅಧಿನಿಯಮ ಕರ್ನಾಟಕಕ್ಕೆ ಅನ್ವಯವಾಗುವಂತೆ, ಕೇಂದ್ರ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ರಾಜ್ಯದಲ್ಲಿ ಕೇಂದ್ರ ಔಷಧ ಪ್ರಯೋಗಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ದಿನೇಶ್ ತಿಳಿಸಿದರು.</p>.<p><strong>ಅಂಗೀಕಾರಗೊಂಡ ಮಸೂದೆಗಳು:</strong></p>.<p>ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಮಸೂದೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಮಸೂದೆ, ಬಾಂಬೆ ಸಾರ್ವಜನಿಕ ನ್ಯಾಸ(ಟ್ರಸ್ಟ್) ತಿದ್ದುಪಡಿ ಮಸೂದೆ, ನಾಡುಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಮಸೂದೆಗೆ ಅಂಗೀಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>