<p><strong>ಬೆಂಗಳೂರು</strong>: ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.</p><p>ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ರೈತರನ್ನು ವಂಚಿಸುವ ಜಾಲಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಜಾಗೃತ ದಳವನ್ನು ರಚಿಸಿ ಎಂದು ಸಲಹೆ ನೀಡಿದ್ದಾರೆ.</p><p>‘ದಾಸ್ತಾನಿದ್ದರೂ ರಾಜ್ಯದ ವಿವಿಧ ಭಾಗಗಳಲ್ಲಿ ಯೂರಿಯಾದ ಕೃತಕ ಅಭಾವವನ್ನು ಸೃಷಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಬೇಜವ್ದಾರಿತನವೂ ಕಾರಣವಾಗಿದೆ. ಇದು ರೈತರಲ್ಲಿ ಭಯ ಹುಟ್ಟಿಸಿದೆ. ಇದರ ವಿರುದ್ಧ ಬಿಜೆಪಿ ರೈತ ಘಟಕ ಸೋಮವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ’ ಎಂದು ಹೇಳಿದರು.</p>.<p>‘ಅನ್ನದಾತನನ್ನು ಸಂಕಷ್ಟಕ್ಕೀಡು ಮಾಡುವ ಹಾಗೂ ಶೋಷಣೆಗೊಳಪಡಿಸುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಲೇ ಇದೆ. ಈ ಬಾರಿ ಆಶಾದಾಯಕ ಮುಂಗಾರಿನ ಹಿನ್ನೆಲೆಯಲ್ಲಿ ಉತ್ತಮ ಬೆಳೆ ಬೆಳೆಯುವ ಉತ್ಸಾಹದಲ್ಲಿರುವ ರೈತ ಸಮುದಾಯವನ್ನು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸುವ ಕಂಪನಿಗಳು ನಕಲಿ ಬೀಜಗಳನ್ನು ಪೂರೈಸುವ ಮೂಲಕ ಕೃಷಿ ಚಟುವಟಿಕೆಯನ್ನು ನಿಷ್ಕ್ರಿಯಗೊಳಿಸುವ ಕೃತ್ಯದಲ್ಲಿ ತೊಡಗಿರುವುದು ಅತ್ಯಂತ ಹೇಯ’ ಎಂದು ಅಸಮಾಧಾನ ಹೊರಹಾಕಿದ್ದಾರೆ.</p><p>ರೈತ ಸಮುದಾಯಕ್ಕೆ ಯಾವುದೇ ತೊಂದರೆಗಳು ಭಾದಿಸದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕಿದೆ. ಸಕಾಲದಲ್ಲಿ ರೈತಸಮೂಹಕ್ಕೆ ಗುಣಮಟ್ಟದ ಬಿತ್ತನೆ ಬೀಜ, ಅಗತ್ಯ ರಸಗೊಬ್ಬರ ದೊರಕಲು ಸಾಧ್ಯವಿರುವ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.</p><p>ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ರೈತರನ್ನು ವಂಚಿಸುವ ಜಾಲಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಜಾಗೃತ ದಳವನ್ನು ರಚಿಸಿ ಎಂದು ಸಲಹೆ ನೀಡಿದ್ದಾರೆ.</p><p>‘ದಾಸ್ತಾನಿದ್ದರೂ ರಾಜ್ಯದ ವಿವಿಧ ಭಾಗಗಳಲ್ಲಿ ಯೂರಿಯಾದ ಕೃತಕ ಅಭಾವವನ್ನು ಸೃಷಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಬೇಜವ್ದಾರಿತನವೂ ಕಾರಣವಾಗಿದೆ. ಇದು ರೈತರಲ್ಲಿ ಭಯ ಹುಟ್ಟಿಸಿದೆ. ಇದರ ವಿರುದ್ಧ ಬಿಜೆಪಿ ರೈತ ಘಟಕ ಸೋಮವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ’ ಎಂದು ಹೇಳಿದರು.</p>.<p>‘ಅನ್ನದಾತನನ್ನು ಸಂಕಷ್ಟಕ್ಕೀಡು ಮಾಡುವ ಹಾಗೂ ಶೋಷಣೆಗೊಳಪಡಿಸುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಲೇ ಇದೆ. ಈ ಬಾರಿ ಆಶಾದಾಯಕ ಮುಂಗಾರಿನ ಹಿನ್ನೆಲೆಯಲ್ಲಿ ಉತ್ತಮ ಬೆಳೆ ಬೆಳೆಯುವ ಉತ್ಸಾಹದಲ್ಲಿರುವ ರೈತ ಸಮುದಾಯವನ್ನು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸುವ ಕಂಪನಿಗಳು ನಕಲಿ ಬೀಜಗಳನ್ನು ಪೂರೈಸುವ ಮೂಲಕ ಕೃಷಿ ಚಟುವಟಿಕೆಯನ್ನು ನಿಷ್ಕ್ರಿಯಗೊಳಿಸುವ ಕೃತ್ಯದಲ್ಲಿ ತೊಡಗಿರುವುದು ಅತ್ಯಂತ ಹೇಯ’ ಎಂದು ಅಸಮಾಧಾನ ಹೊರಹಾಕಿದ್ದಾರೆ.</p><p>ರೈತ ಸಮುದಾಯಕ್ಕೆ ಯಾವುದೇ ತೊಂದರೆಗಳು ಭಾದಿಸದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕಿದೆ. ಸಕಾಲದಲ್ಲಿ ರೈತಸಮೂಹಕ್ಕೆ ಗುಣಮಟ್ಟದ ಬಿತ್ತನೆ ಬೀಜ, ಅಗತ್ಯ ರಸಗೊಬ್ಬರ ದೊರಕಲು ಸಾಧ್ಯವಿರುವ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>