<p><strong>ಬೆಂಗಳೂರು</strong>: ‘ಮತದಾರರ ನಕಲಿ ಯಾದಿ ತಯಾರು ಮಾಡುತ್ತಿದ್ದಾರೆ’ ಎಂದು ತಮ್ಮ ವಿರುದ್ಧ ಬಿಜೆಪಿ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 19ಕ್ಕೆ ಮುಂದೂಡಿದೆ.</p>.<p>ಈ ಪ್ರಕರಣವನ್ನು 'ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಶುಕ್ರವಾರ ವಿಚಾರಣೆ ನಡೆಸಿದರು.</p>.<p>ವಿಚಾರಣೆ ವೇಳೆ ರಿಜ್ವಾನ್ ಪರ ಹೈಕೋರ್ಟ್ ವಕೀಲ ಸೂರ್ಯ ಮುಕುಂದರಾಜ್ ಮತ್ತು ಸಂಜಯ್ ಯಾದವ್, ಅರ್ಜಿದಾರರನ್ನು ಪಾಟಿ ಸವಾಲಿಗೆ ಒಳಪಡಿಸುವ ಪ್ರಕ್ರಿಯೆ ಕೈಗೆತ್ತಿಕೊಳ್ಳುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿವಾದಿ ಬಿಜೆಪಿ ಪರ ಹಾಜರಾಗಿದ್ದ ಹಿರಿಯ ವಕೀಲ ಚಲಪತಿ ಶ್ರೀನಿವಾಸ್ ಮತ್ತು ಎನ್.ಗೋಪಿ ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಪ್ರಕರಣವನ್ನು ಅರ್ಜಿದಾರರ ಪಾಟೀ ಸವಾಲಿನ ಪ್ರಕ್ರಿಯೆಗೆ ನಿಗದಿಪಡಿಸಿ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು.</p>.<p><strong>ಪ್ರಕರಣವೇನು?:</strong> ರಿಜ್ವಾನ್ ಅರ್ಷದ್ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ (ಸೆಂಟ್ರಲ್) ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಅವರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಇಬ್ರಾಹಿಂ ಖಲೀಲುಲ್ಲಾ ಅವರನ್ನು ಬಿಜೆಪಿ ಮಾಡಿದ್ದ ಆರೋಪದಡಿ ಬಂಧಿಸಲಾಗಿತ್ತು. </p>.<p>‘ಇಬ್ರಾಹಿಂ ಖಲೀಲುಲ್ಲಾ ಅವರು ರಿಜ್ವಾನ್ ಅರ್ಷದ್ ಪರ ಪ್ರಭಾತ್ ಕಾಂಪ್ಲೆಕ್ಸ್ನ ಮೂರನೇ ಮಹಡಿಯ ಕೊಠಡಿ ಸಂಖ್ಯೆ 507ರಲ್ಲಿ ನಕಲಿ ಮತದಾರರ ಗುರುತಿನ ಚೀಟಿಗಳನ್ನು ಮುದ್ರಿಸುತ್ತಿದ್ದಾರೆ’ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಿಜೆಪಿ ತನ್ನ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿತ್ತರಿಸಿ, ‘ರಿಜ್ವಾನ್ ಅರ್ಷದ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿತ್ತು.</p>.<p>ಇದರ ವಿರುದ್ಧ ರಿಜ್ವಾನ್ ಅರ್ಷದ್ ಖಾಸಗಿ ದೂರು ದಾಖಲಿಸಿದ್ದಾರೆ. ಈ ಖಾಸಗಿ ದೂರಿನಲ್ಲಿ ಬಿಜೆಪಿಯ ರಾಜ್ಯ ಘಟಕದ ಅಂದಿನ ಅಧ್ಯಕ್ಷರು ಹಾಗೂ ಐ.ಟಿ ಸೆಲ್ ವಿಭಾಗದ ಅಧ್ಯಕ್ಷರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮತದಾರರ ನಕಲಿ ಯಾದಿ ತಯಾರು ಮಾಡುತ್ತಿದ್ದಾರೆ’ ಎಂದು ತಮ್ಮ ವಿರುದ್ಧ ಬಿಜೆಪಿ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 19ಕ್ಕೆ ಮುಂದೂಡಿದೆ.</p>.<p>ಈ ಪ್ರಕರಣವನ್ನು 'ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಶುಕ್ರವಾರ ವಿಚಾರಣೆ ನಡೆಸಿದರು.</p>.<p>ವಿಚಾರಣೆ ವೇಳೆ ರಿಜ್ವಾನ್ ಪರ ಹೈಕೋರ್ಟ್ ವಕೀಲ ಸೂರ್ಯ ಮುಕುಂದರಾಜ್ ಮತ್ತು ಸಂಜಯ್ ಯಾದವ್, ಅರ್ಜಿದಾರರನ್ನು ಪಾಟಿ ಸವಾಲಿಗೆ ಒಳಪಡಿಸುವ ಪ್ರಕ್ರಿಯೆ ಕೈಗೆತ್ತಿಕೊಳ್ಳುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿವಾದಿ ಬಿಜೆಪಿ ಪರ ಹಾಜರಾಗಿದ್ದ ಹಿರಿಯ ವಕೀಲ ಚಲಪತಿ ಶ್ರೀನಿವಾಸ್ ಮತ್ತು ಎನ್.ಗೋಪಿ ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಪ್ರಕರಣವನ್ನು ಅರ್ಜಿದಾರರ ಪಾಟೀ ಸವಾಲಿನ ಪ್ರಕ್ರಿಯೆಗೆ ನಿಗದಿಪಡಿಸಿ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು.</p>.<p><strong>ಪ್ರಕರಣವೇನು?:</strong> ರಿಜ್ವಾನ್ ಅರ್ಷದ್ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ (ಸೆಂಟ್ರಲ್) ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ವೇಳೆ ಅವರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಇಬ್ರಾಹಿಂ ಖಲೀಲುಲ್ಲಾ ಅವರನ್ನು ಬಿಜೆಪಿ ಮಾಡಿದ್ದ ಆರೋಪದಡಿ ಬಂಧಿಸಲಾಗಿತ್ತು. </p>.<p>‘ಇಬ್ರಾಹಿಂ ಖಲೀಲುಲ್ಲಾ ಅವರು ರಿಜ್ವಾನ್ ಅರ್ಷದ್ ಪರ ಪ್ರಭಾತ್ ಕಾಂಪ್ಲೆಕ್ಸ್ನ ಮೂರನೇ ಮಹಡಿಯ ಕೊಠಡಿ ಸಂಖ್ಯೆ 507ರಲ್ಲಿ ನಕಲಿ ಮತದಾರರ ಗುರುತಿನ ಚೀಟಿಗಳನ್ನು ಮುದ್ರಿಸುತ್ತಿದ್ದಾರೆ’ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಿಜೆಪಿ ತನ್ನ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿತ್ತರಿಸಿ, ‘ರಿಜ್ವಾನ್ ಅರ್ಷದ್ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿತ್ತು.</p>.<p>ಇದರ ವಿರುದ್ಧ ರಿಜ್ವಾನ್ ಅರ್ಷದ್ ಖಾಸಗಿ ದೂರು ದಾಖಲಿಸಿದ್ದಾರೆ. ಈ ಖಾಸಗಿ ದೂರಿನಲ್ಲಿ ಬಿಜೆಪಿಯ ರಾಜ್ಯ ಘಟಕದ ಅಂದಿನ ಅಧ್ಯಕ್ಷರು ಹಾಗೂ ಐ.ಟಿ ಸೆಲ್ ವಿಭಾಗದ ಅಧ್ಯಕ್ಷರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>