<p><strong>ಬೆಂಗಳೂರು</strong>: ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯದ ಬಳಿ ‘ಕಾವೇರಿ ಆರತಿ’ ಆಯೋಜಿಸುವ ತೀರ್ಮಾನ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ‘ಕಾವೇರಿ ಆರತಿ ಯೋಜನೆಗೆ ತಾಂತ್ರಿಕ ಸಲಹೆ ಪಡೆದಿಲ್ಲ ಎಂಬ ನಿಮ್ಮ ಆಕ್ಷೇಪಣೆಯನ್ನು ದೃಢಪಡಿಸುವ ದಾಖಲೆ ಸಲ್ಲಿಸಿ’ ಎಂದು ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶಿಸಿದೆ.</p>.<p>ಈ ಸಂಬಂಧ ರೈತ ಸಂಘದ ನಾಯಕಿ ಮಂಡ್ಯ ಜಿಲ್ಲೆಯ ಸುನಂದಾ ಜಯರಾಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. </p>.<p>ವಿಚಾರಣೆ ವೇಳೆ ಹೈಕೋರ್ಟ್ನ ಹಿರಿಯ ವಕೀಲ ಎಂ.ಶಿವಪ್ರಕಾಶ್, ‘ಕಾವೇರಿ ಆರತಿಗಾಗಿ ₹100 ಕೋಟಿ ವೆಚ್ಚ ಮಾಡಲಾಗುತ್ತಿದೆ. ಜಲಾಶಯದ 40 ಮೀಟರ್ ಅಂತರದಲ್ಲಿ 20 ಸಾವಿರದಿಂದ 25 ಸಾವಿರ ಜನರು ಜಮಾಯಿಸುವಂತಹ ದೊಡ್ಡ ಸ್ಟೇಡಿಯಂ ನಿರ್ಮಾಣ ಮಾಡಲಾಗುತ್ತಿದೆ. ಕನ್ನಂಬಾಡಿ ಕಟ್ಟೆಯ ಬಳಿಯಲ್ಲೇ 5 ಸಾವಿರ ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದು ಜಲಾಶಯದ ಸುರಕ್ಷತೆ ಮತ್ತು ಭದ್ರತೆಗೆ ಅಪಾಯಕಾರಿ. ಜಲ, ಪರಿಸರ ಹಾಗೂ ವಾಯುಮಾಲಿನ್ಯಕ್ಕೂ ಕಾರಣವಾಗಲಿದೆ. ಅಲ್ಲದೇ, ಸರ್ಕಾರದ ಈ ನಿರ್ಧಾರ 2021ರ ಜಲಾಶಯ ಸುರಕ್ಷತಾ ಕಾಯ್ದೆಗೆ ವಿರುದ್ಧವಾಗಿದೆ’ ಎಂದು ಪ್ರತಿಪಾದಿಸಿದರು. </p>.<p>ವಾದ ಆಲಿಸಿದ ನ್ಯಾಯಪೀಠ, ‘ತಾಂತ್ರಿಕ ವರದಿ ಸಲ್ಲಿಸಿ’ ಎಂದು ಶಿವಪ್ರಕಾಶ್ ಅವರಿಗೆ ನಿರ್ದೇಶಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ (ಜೂನ್ 27) ಮುಂದೂಡಿತು. ಕಾವೇರಿ ನೀರಾವರಿ ನಿಗಮದ ಪರ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ ಅವರು ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯದ ಬಳಿ ‘ಕಾವೇರಿ ಆರತಿ’ ಆಯೋಜಿಸುವ ತೀರ್ಮಾನ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ‘ಕಾವೇರಿ ಆರತಿ ಯೋಜನೆಗೆ ತಾಂತ್ರಿಕ ಸಲಹೆ ಪಡೆದಿಲ್ಲ ಎಂಬ ನಿಮ್ಮ ಆಕ್ಷೇಪಣೆಯನ್ನು ದೃಢಪಡಿಸುವ ದಾಖಲೆ ಸಲ್ಲಿಸಿ’ ಎಂದು ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶಿಸಿದೆ.</p>.<p>ಈ ಸಂಬಂಧ ರೈತ ಸಂಘದ ನಾಯಕಿ ಮಂಡ್ಯ ಜಿಲ್ಲೆಯ ಸುನಂದಾ ಜಯರಾಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. </p>.<p>ವಿಚಾರಣೆ ವೇಳೆ ಹೈಕೋರ್ಟ್ನ ಹಿರಿಯ ವಕೀಲ ಎಂ.ಶಿವಪ್ರಕಾಶ್, ‘ಕಾವೇರಿ ಆರತಿಗಾಗಿ ₹100 ಕೋಟಿ ವೆಚ್ಚ ಮಾಡಲಾಗುತ್ತಿದೆ. ಜಲಾಶಯದ 40 ಮೀಟರ್ ಅಂತರದಲ್ಲಿ 20 ಸಾವಿರದಿಂದ 25 ಸಾವಿರ ಜನರು ಜಮಾಯಿಸುವಂತಹ ದೊಡ್ಡ ಸ್ಟೇಡಿಯಂ ನಿರ್ಮಾಣ ಮಾಡಲಾಗುತ್ತಿದೆ. ಕನ್ನಂಬಾಡಿ ಕಟ್ಟೆಯ ಬಳಿಯಲ್ಲೇ 5 ಸಾವಿರ ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದು ಜಲಾಶಯದ ಸುರಕ್ಷತೆ ಮತ್ತು ಭದ್ರತೆಗೆ ಅಪಾಯಕಾರಿ. ಜಲ, ಪರಿಸರ ಹಾಗೂ ವಾಯುಮಾಲಿನ್ಯಕ್ಕೂ ಕಾರಣವಾಗಲಿದೆ. ಅಲ್ಲದೇ, ಸರ್ಕಾರದ ಈ ನಿರ್ಧಾರ 2021ರ ಜಲಾಶಯ ಸುರಕ್ಷತಾ ಕಾಯ್ದೆಗೆ ವಿರುದ್ಧವಾಗಿದೆ’ ಎಂದು ಪ್ರತಿಪಾದಿಸಿದರು. </p>.<p>ವಾದ ಆಲಿಸಿದ ನ್ಯಾಯಪೀಠ, ‘ತಾಂತ್ರಿಕ ವರದಿ ಸಲ್ಲಿಸಿ’ ಎಂದು ಶಿವಪ್ರಕಾಶ್ ಅವರಿಗೆ ನಿರ್ದೇಶಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ (ಜೂನ್ 27) ಮುಂದೂಡಿತು. ಕಾವೇರಿ ನೀರಾವರಿ ನಿಗಮದ ಪರ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ ಅವರು ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>