ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ರೈತರ ₹34 ಸಾವಿರ ಕೋಟಿ ಸಾಲ ಮನ್ನಾ ಬಗ್ಗೆ ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದು ಅನುಮಾನ.
ಸಹಕಾರಿ ಬ್ಯಾಂಕ್ಗಳಲ್ಲಿನ ₹9,800 ಕೋಟಿ ಬೆಳೆ ಸಾಲ ಮನ್ನಾಕ್ಕೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮನ್ನಾ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದರು.
‘ಕುಮಾರಸ್ವಾಮಿ ಸಾಲ ಮನ್ನಾದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಶೀಘ್ರದಲ್ಲಿ ಆದೇಶ ಹೊರಡಿಸಲಿದ್ದಾರೆ. ಶುಕ್ರವಾರದ ಸಚಿವ ಸಂಪುಟ ಸಭೆಯ ಅಜೆಂಡಾದಲ್ಲಿ ಈ ವಿಷಯ ಇಲ್ಲ’ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಸುದ್ದಿಗಾರರಿಗೆ ತಿಳಿಸಿದರು.
‘ಕೊಡಗಿನ ಪ್ರವಾಹಕ್ಕೂ ಸಾಲ ಮನ್ನಾಕ್ಕೂ ಸಂಬಂಧ ಇಲ್ಲ. ಈ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ’ ಎಂದೂ ಅವರು ಹೇಳಿದರು.