<p><strong>ಬೆಂಗಳೂರು</strong>: ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ಅನ್ನು ಕರ್ನಾಟಕದಲ್ಲೂ ಯಶಸ್ವಿಗೊಳಿಸಲು ರೈತ ಸಂಘಟನೆಗಳು ಸಜ್ಜಾಗಿವೆ.</p>.<p>ಬೆಂಗಳೂರಿನಲ್ಲಿ ಪ್ರಯಾಣಕ್ಕಾಗಲಿ, ನಿತ್ಯದ ವಹಿವಾಟಿಗಾಗಲಿ ಬಂದ್ನಿಂದ ತೊಂದರೆಯಾಗಲಿಕ್ಕಿಲ್ಲ. ಆದರೆ, ರೈತ ಸಂಘಟನೆಗಳು ಪ್ರಬಲವಾಗಿರುವ ಜಿಲ್ಲೆ ಮತ್ತು ನಗರ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಹಾಗೂ ವ್ಯಾಪಾರ ಚಟುವಟಿಕೆಗೆ ಅಡಚಣೆಯಾಗಬಹುದು ಎಂದು ಹೇಳಲಾಗುತ್ತಿದೆ.</p>.<p>‘ಸೋಮವಾರ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಯಲಿದ್ದು, ಬಸ್, ರೈಲು ಸಂಚಾರ ತಡೆಯಲಾಗುವುದು. ಹೆದ್ದಾರಿಗಳನ್ನೂ ಬಂದ್ ಮಾಡಲಾಗುವುದು’ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.</p>.<p>‘ರಾಜ್ಯ ವ್ಯಾಪಿ ರೈತ ಸಂಘಟನೆಗಳು, ಕಾರ್ಮಿಕ, ದಲಿತ ಮತ್ತು ವಿದ್ಯಾರ್ಥಿ ಸಂಘಟನೆಗಳು, ವರ್ತಕರು, ಕನ್ನಡ ಸಂಘಟನೆಗಳು, ಆಟೋರಿಕ್ಷಾ, ಟ್ಯಾಕ್ಸಿ ಚಾಲಕರ ಸಂಘಗಳುಬೆಂಬಲ ನೀಡಿವೆ. ಇನ್ನೂ ಹಲವು ಸಂಘಟನೆಗಳ ಜೊತೆ ಭಾನುವಾರ ಮಾತುಕತೆ ನಡೆಸಲಾಗುವುದು’ ಎಂದು ಹೇಳಿದರು.</p>.<p>‘ರಾಜ್ಯದಾದ್ಯಂತ ಪ್ರವಾಸ ಮಾಡಿ ಬಂದ್ ಬಗ್ಗೆ ಮನವರಿಕೆ ಮಾಡಲಾಗಿದೆ. ರೈತ ಸಂಘಟನೆಗಳು ಭಾರತ್ ಬಂದ್ ಯಶಸ್ವಿಯಗೊಳಿಸಲಿವೆ’ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.</p>.<p>‘ಬಂದ್ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಬೇಕು’ ಎಂದು ಸೆಂಟರ್ ಆಫ್ ಆಲ್ ಇಂಡಿಯಾ ಟ್ರೇಡ್ ಯೂನಿಯನ್(ಸಿಐಟಿಯು) ಅಧ್ಯಕ್ಷೆ ವರಲಕ್ಷ್ಮಿ ಮನವಿ ಮಾಡಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/bharat-bandh-monday-literature-artists-support-farmeres-protest-870044.html">ಭಾರತ್ ಬಂದ್: ಸಾಹಿತಿಗಳು, ಕಲಾವಿದರ ಬೆಂಬಲ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ಅನ್ನು ಕರ್ನಾಟಕದಲ್ಲೂ ಯಶಸ್ವಿಗೊಳಿಸಲು ರೈತ ಸಂಘಟನೆಗಳು ಸಜ್ಜಾಗಿವೆ.</p>.<p>ಬೆಂಗಳೂರಿನಲ್ಲಿ ಪ್ರಯಾಣಕ್ಕಾಗಲಿ, ನಿತ್ಯದ ವಹಿವಾಟಿಗಾಗಲಿ ಬಂದ್ನಿಂದ ತೊಂದರೆಯಾಗಲಿಕ್ಕಿಲ್ಲ. ಆದರೆ, ರೈತ ಸಂಘಟನೆಗಳು ಪ್ರಬಲವಾಗಿರುವ ಜಿಲ್ಲೆ ಮತ್ತು ನಗರ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಹಾಗೂ ವ್ಯಾಪಾರ ಚಟುವಟಿಕೆಗೆ ಅಡಚಣೆಯಾಗಬಹುದು ಎಂದು ಹೇಳಲಾಗುತ್ತಿದೆ.</p>.<p>‘ಸೋಮವಾರ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಯಲಿದ್ದು, ಬಸ್, ರೈಲು ಸಂಚಾರ ತಡೆಯಲಾಗುವುದು. ಹೆದ್ದಾರಿಗಳನ್ನೂ ಬಂದ್ ಮಾಡಲಾಗುವುದು’ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.</p>.<p>‘ರಾಜ್ಯ ವ್ಯಾಪಿ ರೈತ ಸಂಘಟನೆಗಳು, ಕಾರ್ಮಿಕ, ದಲಿತ ಮತ್ತು ವಿದ್ಯಾರ್ಥಿ ಸಂಘಟನೆಗಳು, ವರ್ತಕರು, ಕನ್ನಡ ಸಂಘಟನೆಗಳು, ಆಟೋರಿಕ್ಷಾ, ಟ್ಯಾಕ್ಸಿ ಚಾಲಕರ ಸಂಘಗಳುಬೆಂಬಲ ನೀಡಿವೆ. ಇನ್ನೂ ಹಲವು ಸಂಘಟನೆಗಳ ಜೊತೆ ಭಾನುವಾರ ಮಾತುಕತೆ ನಡೆಸಲಾಗುವುದು’ ಎಂದು ಹೇಳಿದರು.</p>.<p>‘ರಾಜ್ಯದಾದ್ಯಂತ ಪ್ರವಾಸ ಮಾಡಿ ಬಂದ್ ಬಗ್ಗೆ ಮನವರಿಕೆ ಮಾಡಲಾಗಿದೆ. ರೈತ ಸಂಘಟನೆಗಳು ಭಾರತ್ ಬಂದ್ ಯಶಸ್ವಿಯಗೊಳಿಸಲಿವೆ’ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.</p>.<p>‘ಬಂದ್ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಬೇಕು’ ಎಂದು ಸೆಂಟರ್ ಆಫ್ ಆಲ್ ಇಂಡಿಯಾ ಟ್ರೇಡ್ ಯೂನಿಯನ್(ಸಿಐಟಿಯು) ಅಧ್ಯಕ್ಷೆ ವರಲಕ್ಷ್ಮಿ ಮನವಿ ಮಾಡಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/bharat-bandh-monday-literature-artists-support-farmeres-protest-870044.html">ಭಾರತ್ ಬಂದ್: ಸಾಹಿತಿಗಳು, ಕಲಾವಿದರ ಬೆಂಬಲ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>