ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕೇಂದ್ರದ ಮೂರು ಕೃಷಿ ಕಾಯ್ದೆ ವಿರೋಧಿಸಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ನಿಗದಿಗೆ ಒತ್ತಾಯಿಸಿ, ಅಡುಗೆ ಅನಿಲ, ಇಂಧನ ಮತ್ತು ರಸಗೊಬ್ಬರ ಬೆಲೆ ಇಳಿಸಬೇಕು ಎಂದು ಆಗ್ರಹಿಸಿ ಬಂದ್ ನಡೆಸಲಾಗುವುದು. ದೇಶದ 500ಕ್ಕೂ ಅಧಿಕ ರೈತ ಸಂಘಟನೆಗಳು ಬಂದ್ನಲ್ಲಿ ಪಾಲ್ಗೊಳ್ಳಲಿದ್ದು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳೂ ಕೈಜೋಡಿಸಿವೆ’ ಎಂದು ಹೇಳಿದರು.