<p><strong>ಬೆಂಗಳೂರು:</strong> ‘ರೈತರು ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ರಾಜ್ಯದಾದ್ಯಂತ ರೈತ ಸಂಘಟನೆಗಳು ಹೆದ್ದಾರಿ ಚಳವಳಿ ಮಾಡುತ್ತಿವೆ. ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘಟನೆಗಳ ಜೊತೆ ಮಾತನಾಡಿ ಸುಗಮ ಸಂಚಾರಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ’ ಎಂದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/chakka-jam-protest-by-farmers-across-the-state-802881.html"><strong>ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್</strong></a></p>.<p>ಲಿಂಗಾಯತರಿಗೆ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಪಂಚಮಸಾಲಿ ಲಿಂಗಾಯತ ಸಮುದಾಯ ಹಿಂದುಳಿದ ವರ್ಗ ಎಂದು ಗುರುತಿಸಿದವರು ಯಡಿಯೂರಪ್ಪ. ಹಿಂದಿನ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 3 ಬಿ ಗುರುತಿಸಿದ್ದೇ ಯಡಿಯೂರಪ್ಪ. ಈ ಕೆಲಸವನ್ನು ಬೇರೆ ಯಾರೂ ಮಾಡಲಿಲ್ಲ. ಈಗ 2ಎ ಮೀಸಲಾತಿಗೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆಯನ್ನೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಖ್ಯಮಂತ್ರಿ ಕಳುಹಿಸಿಕೊಟ್ಟಿದ್ದಾರೆ. ಈ ಬೇಡಿಕೆ ಸಂಬಂಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಕೆಲವು ರಾಜ್ಯಗಳು ಇದೇ ಪ್ರಸ್ತಾವನೆ ಮಾಡಿದಾಗ ನ್ಯಾಯಾಲಯ ತಡೆ ನೀಡಿರುವುದು ಇದೆ. ಇದೆಲ್ಲವನ್ನೂ ಗಮನಿಸಬೇಕಾಗುತ್ತದೆ’ ಎಂದು ವಿವರಿಸಿದರು.</p>.<p>‘ಹಿಂದುಳಿದ ವರ್ಗಗಳ ಆಯೋಗದಿಂದ ಶಿಫಾರಸು ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ. ಕುಲಶಾಸ್ತ್ರೀಯ ಅಧ್ಯಯನದ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ನಿರ್ಧಾರ ಕೈಗೊಳ್ಳಲಿದೆ. ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವುದು ಕೇಂದ್ರ ನಿರ್ಧರಿಸಬೇಕಾದ ವಿಚಾರ. ಮುಖ್ಯಮಂತ್ರಿ ಕೂಡಾ ಕೇಂದ್ರದ ಜೊತೆ ಈ ಬಗ್ಗೆ ಚರ್ಚೆ ಮಾಡಬೇಕು ಎಂದಷ್ಟೆ ಹೇಳಿದ್ದಾರೆ’ ಎಂದರು.</p>.<p>ಮುಖ್ಯಮಂತ್ರಿ ಹೇಳಿಕೆಗೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ ಬಗ್ಗೆ ಬೊಮ್ಮಾಯಿ, ‘ಹಿಂದುಳಿದ ವರ್ಗಗಳಿಗೆ ಸೇರಿಸುವುದರಲ್ಲಿ ಎರಡು ರೀತಿ ಇದೆ. ಒಂದು ರಾಜ್ಯಕ್ಕೆ ಆ ನಿರ್ಧಾರ ಸೀಮಿತ . ಇನ್ನೊಂದು ಕೇಂದ್ರಕ್ಕೆ ಸೀಮಿತ. ಅದನ್ನು ಕೇಂದ್ರದ ನಾಯಕರ ಜೊತೆ ಚರ್ಚಿಸಬೇಕು ಎಂದಿದ್ದಾರೆ. ಅದನ್ನು ಹೊರತು, ಬೇರೆ ತಪ್ಪು ಅರ್ಥ ಕಲ್ಪಿಸುವುದು ಬೇಡ. ಸಚಿವರ ಮೂಲಕ ಸ್ವಾಮೀಜಿಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಂದೇಶ ರವಾನಿಸಿದ್ದಾರೆ. ಆ ಕಾರಣಕ್ಕೆ ಶುಕ್ರವಾರ ಸಂಜೆ ಆದೇಶ ಮಾಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.+</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರೈತರು ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ರಾಜ್ಯದಾದ್ಯಂತ ರೈತ ಸಂಘಟನೆಗಳು ಹೆದ್ದಾರಿ ಚಳವಳಿ ಮಾಡುತ್ತಿವೆ. ಎಲ್ಲ ಜಿಲ್ಲೆಗಳಲ್ಲಿ ರೈತ ಸಂಘಟನೆಗಳ ಜೊತೆ ಮಾತನಾಡಿ ಸುಗಮ ಸಂಚಾರಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ’ ಎಂದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/chakka-jam-protest-by-farmers-across-the-state-802881.html"><strong>ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್</strong></a></p>.<p>ಲಿಂಗಾಯತರಿಗೆ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಪಂಚಮಸಾಲಿ ಲಿಂಗಾಯತ ಸಮುದಾಯ ಹಿಂದುಳಿದ ವರ್ಗ ಎಂದು ಗುರುತಿಸಿದವರು ಯಡಿಯೂರಪ್ಪ. ಹಿಂದಿನ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 3 ಬಿ ಗುರುತಿಸಿದ್ದೇ ಯಡಿಯೂರಪ್ಪ. ಈ ಕೆಲಸವನ್ನು ಬೇರೆ ಯಾರೂ ಮಾಡಲಿಲ್ಲ. ಈಗ 2ಎ ಮೀಸಲಾತಿಗೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆಯನ್ನೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಖ್ಯಮಂತ್ರಿ ಕಳುಹಿಸಿಕೊಟ್ಟಿದ್ದಾರೆ. ಈ ಬೇಡಿಕೆ ಸಂಬಂಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಕೆಲವು ರಾಜ್ಯಗಳು ಇದೇ ಪ್ರಸ್ತಾವನೆ ಮಾಡಿದಾಗ ನ್ಯಾಯಾಲಯ ತಡೆ ನೀಡಿರುವುದು ಇದೆ. ಇದೆಲ್ಲವನ್ನೂ ಗಮನಿಸಬೇಕಾಗುತ್ತದೆ’ ಎಂದು ವಿವರಿಸಿದರು.</p>.<p>‘ಹಿಂದುಳಿದ ವರ್ಗಗಳ ಆಯೋಗದಿಂದ ಶಿಫಾರಸು ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ. ಕುಲಶಾಸ್ತ್ರೀಯ ಅಧ್ಯಯನದ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ನಿರ್ಧಾರ ಕೈಗೊಳ್ಳಲಿದೆ. ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವುದು ಕೇಂದ್ರ ನಿರ್ಧರಿಸಬೇಕಾದ ವಿಚಾರ. ಮುಖ್ಯಮಂತ್ರಿ ಕೂಡಾ ಕೇಂದ್ರದ ಜೊತೆ ಈ ಬಗ್ಗೆ ಚರ್ಚೆ ಮಾಡಬೇಕು ಎಂದಷ್ಟೆ ಹೇಳಿದ್ದಾರೆ’ ಎಂದರು.</p>.<p>ಮುಖ್ಯಮಂತ್ರಿ ಹೇಳಿಕೆಗೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ ಬಗ್ಗೆ ಬೊಮ್ಮಾಯಿ, ‘ಹಿಂದುಳಿದ ವರ್ಗಗಳಿಗೆ ಸೇರಿಸುವುದರಲ್ಲಿ ಎರಡು ರೀತಿ ಇದೆ. ಒಂದು ರಾಜ್ಯಕ್ಕೆ ಆ ನಿರ್ಧಾರ ಸೀಮಿತ . ಇನ್ನೊಂದು ಕೇಂದ್ರಕ್ಕೆ ಸೀಮಿತ. ಅದನ್ನು ಕೇಂದ್ರದ ನಾಯಕರ ಜೊತೆ ಚರ್ಚಿಸಬೇಕು ಎಂದಿದ್ದಾರೆ. ಅದನ್ನು ಹೊರತು, ಬೇರೆ ತಪ್ಪು ಅರ್ಥ ಕಲ್ಪಿಸುವುದು ಬೇಡ. ಸಚಿವರ ಮೂಲಕ ಸ್ವಾಮೀಜಿಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಂದೇಶ ರವಾನಿಸಿದ್ದಾರೆ. ಆ ಕಾರಣಕ್ಕೆ ಶುಕ್ರವಾರ ಸಂಜೆ ಆದೇಶ ಮಾಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.+</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>