ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ನಿಯಂತ್ರಣ (ಎಪಿಎಂಸಿ) ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಭೂ ಕಂದಾಯ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ರದ್ದುಗೊಳಿಸಲು ಆಗ್ರಹಿಸಿ ಸೋಮವಾರ ಪ್ರತಿಭಟನೆ ಆರಂಭಿಸಿದ್ದ ರೈತ ಸಂಘದ ಕಾರ್ಯಕರ್ತರು, ಮುಖ್ಯಮಂತ್ರಿ ಜತೆ ಮಾತುಕತೆಗೆ ಅವಕಾಶ ಕಲ್ಪಿಸುವ ಭರವಸೆ ಆಧರಿಸಿ ಹೋರಾಟ ಕೈಬಿಟ್ಟಿದ್ದಾರೆ.