<p><strong>ಬಾಗಲಕೋಟೆ</strong>: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಲಗಿ ಗ್ರಾಮದ ಆರು ಜನ ರೈತರು ಮಳೆಯಿಂದಾದ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಮೊಬೈಲ್ ಟವರ್ ಏರಿ ಕುಳಿತುಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.</p>.<p>ಮಲ್ಲಪ್ಪ ಬಿರಾದಾರ, ಸಿದ್ದು ಶಿಂಧೆ, ಯಲ್ಲಪ್ಪ ಬೆಳ್ಳುಬ್ಬಿ, ಮುನಿಕ ಗುರಚಿ, ಜ್ಞಾನದೇವ ಮಳಿಕ ಹಾಗೂ ಚಿರಾವ ಮೊಹಿತೆ ಟವರ್ ಏರಿದವರು. ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ದ್ರಾಕ್ಷಿ ಬೆಳೆ ಹಾಳಾಗಿದೆ. ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಗ್ರಾಮಸ್ಥರು ಕೆಳಗಿಳಿಯುವಂತೆ ಮನವಿ ಮಾಡಿದರೂ, ಅವರು ಅಧಿಕಾರಿಗಳು ಬರುವವರೆಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ತಹಶೀಲ್ದಾರ್ ಸದಾಶಿವ ಮುಕ್ಕೋಜಿ ಭೇಟಿ ನೀಡಿ, ‘ಬೆಳೆ ಹಾನಿಯಾಗಿರುವುದರ ಸರ್ವೆ ಮಾಡಿಸಲಾಗುವುದು. ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದ ನಂತರ ಕೆಳಗಿಳಿದರು.</p>.<p><strong>ದ್ರಾಕ್ಷಿ ಬೆಳೆಗೆ ಅಪಾರ ಹಾನಿ: </strong>ಜಮಖಂಡಿ ಭಾಗದಲ್ಲಿ ಬುಧವಾರ ರಾತ್ರಿ ಬಿದ್ದ ಮಳೆಯಿಂದಾಗಿ, ₹40 ಕೋಟಿಗೂ ಹೆಚ್ಚು ಮೌಲ್ಯದ ದ್ರಾಕ್ಷಿ ಬೆಳೆ ಹಾನಿಯಾಗಿದೆ. ತಾಲ್ಲೂಕಿನಲ್ಲಿ ಐದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗಿದೆ. ಈ ಭಾಗದಲ್ಲಿ ಎರಡು ಸಾವಿರಕ್ಕೂ ಹೆಚ್ಚು ರೈತರ ದ್ರಾಕ್ಷಿ ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ. ತೇರದಾಳ ಭಾಗದಲ್ಲಿ ಆಲಿಕಲ್ಲು ಮಳೆಯಾಗಿರುವುದರಿಂದ ಗೋಧಿ ಬೆಳೆ ಹಾನಿಯಾಗಿದೆ. ಬಾದಾಮಿಯಲ್ಲಿಯೂ ಜಿಟಿ ಜಿಟಿ ಮಳೆಯಾಗಿದ್ದು, ಮಹಾಲಿಂಗಪುರ, ಬಾಗಲಕೋಟೆಯಲ್ಲಿಯೂ ತುಂತುರು ಮಳೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಲಗಿ ಗ್ರಾಮದ ಆರು ಜನ ರೈತರು ಮಳೆಯಿಂದಾದ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಮೊಬೈಲ್ ಟವರ್ ಏರಿ ಕುಳಿತುಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.</p>.<p>ಮಲ್ಲಪ್ಪ ಬಿರಾದಾರ, ಸಿದ್ದು ಶಿಂಧೆ, ಯಲ್ಲಪ್ಪ ಬೆಳ್ಳುಬ್ಬಿ, ಮುನಿಕ ಗುರಚಿ, ಜ್ಞಾನದೇವ ಮಳಿಕ ಹಾಗೂ ಚಿರಾವ ಮೊಹಿತೆ ಟವರ್ ಏರಿದವರು. ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ದ್ರಾಕ್ಷಿ ಬೆಳೆ ಹಾಳಾಗಿದೆ. ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಗ್ರಾಮಸ್ಥರು ಕೆಳಗಿಳಿಯುವಂತೆ ಮನವಿ ಮಾಡಿದರೂ, ಅವರು ಅಧಿಕಾರಿಗಳು ಬರುವವರೆಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ತಹಶೀಲ್ದಾರ್ ಸದಾಶಿವ ಮುಕ್ಕೋಜಿ ಭೇಟಿ ನೀಡಿ, ‘ಬೆಳೆ ಹಾನಿಯಾಗಿರುವುದರ ಸರ್ವೆ ಮಾಡಿಸಲಾಗುವುದು. ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದ ನಂತರ ಕೆಳಗಿಳಿದರು.</p>.<p><strong>ದ್ರಾಕ್ಷಿ ಬೆಳೆಗೆ ಅಪಾರ ಹಾನಿ: </strong>ಜಮಖಂಡಿ ಭಾಗದಲ್ಲಿ ಬುಧವಾರ ರಾತ್ರಿ ಬಿದ್ದ ಮಳೆಯಿಂದಾಗಿ, ₹40 ಕೋಟಿಗೂ ಹೆಚ್ಚು ಮೌಲ್ಯದ ದ್ರಾಕ್ಷಿ ಬೆಳೆ ಹಾನಿಯಾಗಿದೆ. ತಾಲ್ಲೂಕಿನಲ್ಲಿ ಐದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗಿದೆ. ಈ ಭಾಗದಲ್ಲಿ ಎರಡು ಸಾವಿರಕ್ಕೂ ಹೆಚ್ಚು ರೈತರ ದ್ರಾಕ್ಷಿ ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ. ತೇರದಾಳ ಭಾಗದಲ್ಲಿ ಆಲಿಕಲ್ಲು ಮಳೆಯಾಗಿರುವುದರಿಂದ ಗೋಧಿ ಬೆಳೆ ಹಾನಿಯಾಗಿದೆ. ಬಾದಾಮಿಯಲ್ಲಿಯೂ ಜಿಟಿ ಜಿಟಿ ಮಳೆಯಾಗಿದ್ದು, ಮಹಾಲಿಂಗಪುರ, ಬಾಗಲಕೋಟೆಯಲ್ಲಿಯೂ ತುಂತುರು ಮಳೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>