<p><strong>ಅರಕಲಗೂಡು:</strong> ಲಾಕ್ಡೌನ್ನಿಂದಾಗಿ, ಹಸಿರು ಮೆಣಸಿನಕಾಯಿಯನ್ನು ಮಾರುಕಟ್ಟೆಗೆ ಸಾಗಿಸಲಾಗದ ತಾಲ್ಲೂಕಿನ ರೈತರಿಬ್ಬರು, ಫಸಲು ಸಹಿತ ಗಿಡಗಳನ್ನು ಬುಧವಾರ ನಾಶಪಡಿಸಿದ್ದಾರೆ.</p>.<p>ತಾಲ್ಲೂಕಿನ ಮದಲಾಪುರ ಗ್ರಾಮದ ಕೃಷಿಕರಾದ ರಂಗಸ್ವಾಮಿ ಮತ್ತು ಲೋಕೇಶ್ ಅವರು, 2 ಎಕರೆ ಜಮೀನಿನಲ್ಲಿ ಸುಮಾರು ₹ 2 ಲಕ್ಷ ವೆಚ್ಚ ಮಾಡಿ ಬೆಳೆದಿದ್ದ ಹಸಿರು ಮೆಣಸಿನಕಾಯಿ ಬೆಳೆಯನ್ನು ಟ್ರಾಕ್ಟರ್ನಲ್ಲಿ ಉಳುಮೆ ಮಾಡಿಸಿದ್ದಾರೆ.</p>.<p>‘ಪ್ರತಿವರ್ಷ ಅತಿವೃಷ್ಟಿಗೆ ಅಥವಾ ಅನಾವೃಷ್ಟಿಯಿಂದ ನಷ್ಟ ಅನುಭವಿಸುತ್ತಿದ್ದೆವು. ಈ ಬಾರಿ ಸಸಿ ನಾಟಿ ಮಾಡಿದ್ದ ಸಂದರ್ಭದಲ್ಲಿ ಕಾಡಾನೆಗಳು ದಾಳಿ ಮಾಡಿ ಪಂಪ್ಸೆಟ್, ಜೆಟ್ಗಳನ್ನು ತುಳಿದು ಹಾಳುಗೆಡವಿದ್ದವು. ಅಷ್ಟಾದರೂ ಎದೆಗುಂದದೆ ಬೆಳೆ ಉಳಿಸಿಕೊಂಡಿದ್ದೆವು. ಫಸಲು ಕೂಡ ಸಮೃದ್ಧವಾಗಿ ಬಂದಿತ್ತು. ಅದರೆ, ಲಾಕ್ಡಾನ್ನಿಂದಾಗಿ ಎಲ್ಲವನ್ನೂ ಕಳೆದುಕೊಳ್ಳಬೇಕಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು’ ಈ ರೈತರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು:</strong> ಲಾಕ್ಡೌನ್ನಿಂದಾಗಿ, ಹಸಿರು ಮೆಣಸಿನಕಾಯಿಯನ್ನು ಮಾರುಕಟ್ಟೆಗೆ ಸಾಗಿಸಲಾಗದ ತಾಲ್ಲೂಕಿನ ರೈತರಿಬ್ಬರು, ಫಸಲು ಸಹಿತ ಗಿಡಗಳನ್ನು ಬುಧವಾರ ನಾಶಪಡಿಸಿದ್ದಾರೆ.</p>.<p>ತಾಲ್ಲೂಕಿನ ಮದಲಾಪುರ ಗ್ರಾಮದ ಕೃಷಿಕರಾದ ರಂಗಸ್ವಾಮಿ ಮತ್ತು ಲೋಕೇಶ್ ಅವರು, 2 ಎಕರೆ ಜಮೀನಿನಲ್ಲಿ ಸುಮಾರು ₹ 2 ಲಕ್ಷ ವೆಚ್ಚ ಮಾಡಿ ಬೆಳೆದಿದ್ದ ಹಸಿರು ಮೆಣಸಿನಕಾಯಿ ಬೆಳೆಯನ್ನು ಟ್ರಾಕ್ಟರ್ನಲ್ಲಿ ಉಳುಮೆ ಮಾಡಿಸಿದ್ದಾರೆ.</p>.<p>‘ಪ್ರತಿವರ್ಷ ಅತಿವೃಷ್ಟಿಗೆ ಅಥವಾ ಅನಾವೃಷ್ಟಿಯಿಂದ ನಷ್ಟ ಅನುಭವಿಸುತ್ತಿದ್ದೆವು. ಈ ಬಾರಿ ಸಸಿ ನಾಟಿ ಮಾಡಿದ್ದ ಸಂದರ್ಭದಲ್ಲಿ ಕಾಡಾನೆಗಳು ದಾಳಿ ಮಾಡಿ ಪಂಪ್ಸೆಟ್, ಜೆಟ್ಗಳನ್ನು ತುಳಿದು ಹಾಳುಗೆಡವಿದ್ದವು. ಅಷ್ಟಾದರೂ ಎದೆಗುಂದದೆ ಬೆಳೆ ಉಳಿಸಿಕೊಂಡಿದ್ದೆವು. ಫಸಲು ಕೂಡ ಸಮೃದ್ಧವಾಗಿ ಬಂದಿತ್ತು. ಅದರೆ, ಲಾಕ್ಡಾನ್ನಿಂದಾಗಿ ಎಲ್ಲವನ್ನೂ ಕಳೆದುಕೊಳ್ಳಬೇಕಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು’ ಈ ರೈತರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>