<p><strong>ಬೆಂಗಳೂರು</strong>: ಜನಪ್ರತಿನಿಧಿಗಳಿಗೆ ಟೋಲ್ಗಳಲ್ಲಿ ತೊಂದರೆ ಆಗದಿರುವಂತೆ ಫಾಸ್ಟ್ಯಾಗ್ ವ್ಯವಸ್ಥೆ ಮಾಡಿ, ಅದಕ್ಕೆ ಸರ್ಕಾರದಿಂದ ಸಹಕಾರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ತಿಳಿಸಿದರು.</p><p>ಕಾಂಗ್ರೆಸ್ನ ಎಸ್.ಎನ್.ಸುಬ್ಬಾರೆಡ್ಡಿ, ಬಿಜೆಪಿಯ ಉಮಾನಾಥ್ ಕೋಟ್ಯಾನ್ ಮತ್ತು ಇತರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.</p><p>ಮೈಸೂರು– ಬೆಂಗಳೂರು ರಸ್ತೆಯ ಟೋಲ್ ಬಳಿ ಜನಪ್ರತಿನಿಧಿಗಳಿಗೆ ಕಿರಿ ಕಿರಿ ಮಾಡಿದವರಿಗೆ ದಂಡ ವಿಧಿಸಲಾಗಿದೆ. ಹುನಗುಂದದಲ್ಲಿ ವಿಧಾನಪರಿಷತ್ ಸದಸ್ಯರೊಬ್ಬರಿಗೆ ತೊಂದರೆ ಮಾಡಿದ ಕಾರಣಕ್ಕೆ ನೋಟಿಸ್ ನೀಡಿ ₹10 ಲಕ್ಷ ದಂಡ ವಿಧಿಸಲಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.</p><p>‘ಸಭಾಧ್ಯಕ್ಷರ ಕಡೆಯಿಂದ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಸಂಸದರಿಗೆ ಪಾಸ್ ಹಾಗೂ ಫಾಸ್ಟ್ಯಾಗ್ ಅನ್ನು ಒದಗಿಸಬೇಕು’ ಎಂದು ಹೇಳಿದರು.</p><p>‘ನಮ್ಮ ವಾಹನದ ಮೇಲೆ ‘ಶಾಸಕರು’ ಎಂದು ಬೋರ್ಡ್ ಬರೆಸಿದ್ದರೂ ನಿಲ್ಲಿಸಿ, ಐಡಿ ಕಾರ್ಡ್ ತೋರಿಸಿ,<br>ಮುಖ ತೋರಿಸಿ ಎಂದೆಲ್ಲ ಹೇಳುತ್ತಾರೆ’ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನಪ್ರತಿನಿಧಿಗಳಿಗೆ ಟೋಲ್ಗಳಲ್ಲಿ ತೊಂದರೆ ಆಗದಿರುವಂತೆ ಫಾಸ್ಟ್ಯಾಗ್ ವ್ಯವಸ್ಥೆ ಮಾಡಿ, ಅದಕ್ಕೆ ಸರ್ಕಾರದಿಂದ ಸಹಕಾರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ತಿಳಿಸಿದರು.</p><p>ಕಾಂಗ್ರೆಸ್ನ ಎಸ್.ಎನ್.ಸುಬ್ಬಾರೆಡ್ಡಿ, ಬಿಜೆಪಿಯ ಉಮಾನಾಥ್ ಕೋಟ್ಯಾನ್ ಮತ್ತು ಇತರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.</p><p>ಮೈಸೂರು– ಬೆಂಗಳೂರು ರಸ್ತೆಯ ಟೋಲ್ ಬಳಿ ಜನಪ್ರತಿನಿಧಿಗಳಿಗೆ ಕಿರಿ ಕಿರಿ ಮಾಡಿದವರಿಗೆ ದಂಡ ವಿಧಿಸಲಾಗಿದೆ. ಹುನಗುಂದದಲ್ಲಿ ವಿಧಾನಪರಿಷತ್ ಸದಸ್ಯರೊಬ್ಬರಿಗೆ ತೊಂದರೆ ಮಾಡಿದ ಕಾರಣಕ್ಕೆ ನೋಟಿಸ್ ನೀಡಿ ₹10 ಲಕ್ಷ ದಂಡ ವಿಧಿಸಲಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.</p><p>‘ಸಭಾಧ್ಯಕ್ಷರ ಕಡೆಯಿಂದ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಸಂಸದರಿಗೆ ಪಾಸ್ ಹಾಗೂ ಫಾಸ್ಟ್ಯಾಗ್ ಅನ್ನು ಒದಗಿಸಬೇಕು’ ಎಂದು ಹೇಳಿದರು.</p><p>‘ನಮ್ಮ ವಾಹನದ ಮೇಲೆ ‘ಶಾಸಕರು’ ಎಂದು ಬೋರ್ಡ್ ಬರೆಸಿದ್ದರೂ ನಿಲ್ಲಿಸಿ, ಐಡಿ ಕಾರ್ಡ್ ತೋರಿಸಿ,<br>ಮುಖ ತೋರಿಸಿ ಎಂದೆಲ್ಲ ಹೇಳುತ್ತಾರೆ’ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>