‘2021ರ ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯ ಹಿಂದಿನ ದಿನ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಈ ದುಷ್ಕೃತ್ಯದ ಹಿಂದೆ ಈ ಮೂವರು ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದ ಕಾರಣ ತಕ್ಷಣವೇ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಜಂಟಿ ಇಲಾಖಾ ವಿಚಾರಣೆ ನಡೆಸಲಾಗಿತ್ತು. ಈ ಮೂವರ ಮೇಲಿನ ಆರೋಪ ಸಾಬೀತಾಗಿದೆ ಎಂದು ವಿಚಾರಣಾಧಿಕಾರಿ ವರದಿ ನೀಡಿರುವುದರಿಂದ, ಮುಂದಿನ ದಿನಗಳಲ್ಲಿ ಯಾವುದೇ ಹುದ್ದೆಗೆ ಅನರ್ಹಗೊಳಿಸಿ ಕರ್ತವ್ಯದಿಂದ ವಜಾ ಮಾಡಲಾಗಿದೆ’ ಎಂದು ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.