<p><strong>ಬೆಂಗಳೂರು</strong>: ವೈದ್ಯಕೀಯ, ಎಂಜನಿಯರಿಂಗ್ ಸೆರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಪಡೆದು, ಅನಿವಾರ್ಯ ಕಾರಣಗಳಿಂದ ಮಧ್ಯಂತರದಲ್ಲೇ ಕಾಲೇಜು ತೊರೆಯುವ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸೇರಿದಂತೆ ಮೂಲ ದಾಖಲೆಗಳನ್ನು ನೀಡುವಂತೆ ಶುಲ್ಕ ನಿಯಂತ್ರಣ ಸಮಿತಿ ಆದೇಶಿಸಿದೆ. </p>.<p>ದೂರುಗಳ ವಿಚಾರಣೆ ನಡೆಸಿದ ಶುಲ್ಕ ನಿಯಂತ್ರಣ ಸಮಿತಿಯ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಬಿ. ಶ್ರೀನಿವಾಸ ಗೌಡ ಅವರು, ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ವಾಪಸ್ ನೀಡುವಂತೆ ಸೂಚಿಸಿದ್ದಾರೆ.</p>.<p>ದಾಖಲೆಗಳನ್ನು ಹಿಂದಿರುಗಿಸಲು ಕೆಎಲ್ಇ ಸಂಸ್ಥೆ ₹4 ಲಕ್ಷ ನೀಡುವಂತೆ ಒತ್ತಾಯಿಸುತ್ತಿದೆ ಎಂದು ಸ್ನಾತಕೋತ್ತರ ದಂತ ವೈದ್ಯಕೀಯ (ಎಂಡಿಎಸ್) ವಿದ್ಯಾರ್ಥಿಯೊಬ್ಬರು ದೂರು ನೀಡಿದ್ದರು. ದೂರಿನ ವಿಚಾರಣೆಗೆ ಹಾಜರಾದ ಸಂಸ್ಥೆಯ ಪ್ರತಿನಿಧಿ, ‘ವಿದ್ಯಾರ್ಥಿಗಳು ಮಧ್ಯದಲ್ಲೇ ಕೋರ್ಸ್ ತೊರೆದರೆ ಸೀಟು ಖಾಲಿ ಉಳಿಯುತ್ತದೆ. ಬೇರೊಬ್ಬರಿಗೆ ಆ ಸೀಟು ನೀಡಲು ಅವಕಾಶ ಇಲ್ಲ. ಸಂಸ್ಥೆಗೂ ನಷ್ಟವಾಗುತ್ತದೆ’ ಎಂದು ಉತ್ತರ ನೀಡಿದ್ದರು. ಪರ–ವಿರೋಧ ವಾದ ಆಲಿಸಿದ ಸಮಿತಿ ‘ಆರ್ಥಿಕ ತೊಂದರೆಯಿಂದ ವಿದ್ಯಾರ್ಥಿ ಕೋರ್ಸ್ ತೊರೆದು, ಉದ್ಯೋಗ ಮಾಡುತ್ತಿದ್ದಾರೆ. ಕಾರಣ ₹50 ಸಾವಿರ ಪಡೆದು ಅವರಿಗೆ ಮೂಲ ದಾಖಲೆ ನೀಡುವಂತೆ’ ಆದೇಶ ನೀಡಿದೆ. </p>.<p>ಮತ್ತೆರಡು ಪ್ರಕರಣದಲ್ಲಿ ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿರುದ್ಧವೂ ವಿದ್ಯಾರ್ಥಿಗಳ ದಾಖಲೆಗಳನ್ನು ತಡೆಹಿಡಿದಿರುವ ಕುರಿತು ದೂರುಗಳು ಬಂದಿದ್ದವು. ಈ ಪ್ರಕರಣಗಳಲ್ಲಿ ಆರೋಗ್ಯ ಸಮಸ್ಯೆ, ಸ್ಪರ್ಧಾ ಪರೀಕ್ಷೆಯ ಸಿದ್ಧತೆಯ ಕಾರಣಗಳನ್ನು ನೀಡಿದ್ದರಿಂದ ದಾಖಲೆ ಹಿಂದಿರುಗಿಸಲು ಸಮಿತಿ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವೈದ್ಯಕೀಯ, ಎಂಜನಿಯರಿಂಗ್ ಸೆರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಪಡೆದು, ಅನಿವಾರ್ಯ ಕಾರಣಗಳಿಂದ ಮಧ್ಯಂತರದಲ್ಲೇ ಕಾಲೇಜು ತೊರೆಯುವ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸೇರಿದಂತೆ ಮೂಲ ದಾಖಲೆಗಳನ್ನು ನೀಡುವಂತೆ ಶುಲ್ಕ ನಿಯಂತ್ರಣ ಸಮಿತಿ ಆದೇಶಿಸಿದೆ. </p>.<p>ದೂರುಗಳ ವಿಚಾರಣೆ ನಡೆಸಿದ ಶುಲ್ಕ ನಿಯಂತ್ರಣ ಸಮಿತಿಯ ಅಧ್ಯಕ್ಷರೂ ಆಗಿರುವ ನ್ಯಾಯಮೂರ್ತಿ ಬಿ. ಶ್ರೀನಿವಾಸ ಗೌಡ ಅವರು, ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ವಾಪಸ್ ನೀಡುವಂತೆ ಸೂಚಿಸಿದ್ದಾರೆ.</p>.<p>ದಾಖಲೆಗಳನ್ನು ಹಿಂದಿರುಗಿಸಲು ಕೆಎಲ್ಇ ಸಂಸ್ಥೆ ₹4 ಲಕ್ಷ ನೀಡುವಂತೆ ಒತ್ತಾಯಿಸುತ್ತಿದೆ ಎಂದು ಸ್ನಾತಕೋತ್ತರ ದಂತ ವೈದ್ಯಕೀಯ (ಎಂಡಿಎಸ್) ವಿದ್ಯಾರ್ಥಿಯೊಬ್ಬರು ದೂರು ನೀಡಿದ್ದರು. ದೂರಿನ ವಿಚಾರಣೆಗೆ ಹಾಜರಾದ ಸಂಸ್ಥೆಯ ಪ್ರತಿನಿಧಿ, ‘ವಿದ್ಯಾರ್ಥಿಗಳು ಮಧ್ಯದಲ್ಲೇ ಕೋರ್ಸ್ ತೊರೆದರೆ ಸೀಟು ಖಾಲಿ ಉಳಿಯುತ್ತದೆ. ಬೇರೊಬ್ಬರಿಗೆ ಆ ಸೀಟು ನೀಡಲು ಅವಕಾಶ ಇಲ್ಲ. ಸಂಸ್ಥೆಗೂ ನಷ್ಟವಾಗುತ್ತದೆ’ ಎಂದು ಉತ್ತರ ನೀಡಿದ್ದರು. ಪರ–ವಿರೋಧ ವಾದ ಆಲಿಸಿದ ಸಮಿತಿ ‘ಆರ್ಥಿಕ ತೊಂದರೆಯಿಂದ ವಿದ್ಯಾರ್ಥಿ ಕೋರ್ಸ್ ತೊರೆದು, ಉದ್ಯೋಗ ಮಾಡುತ್ತಿದ್ದಾರೆ. ಕಾರಣ ₹50 ಸಾವಿರ ಪಡೆದು ಅವರಿಗೆ ಮೂಲ ದಾಖಲೆ ನೀಡುವಂತೆ’ ಆದೇಶ ನೀಡಿದೆ. </p>.<p>ಮತ್ತೆರಡು ಪ್ರಕರಣದಲ್ಲಿ ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿರುದ್ಧವೂ ವಿದ್ಯಾರ್ಥಿಗಳ ದಾಖಲೆಗಳನ್ನು ತಡೆಹಿಡಿದಿರುವ ಕುರಿತು ದೂರುಗಳು ಬಂದಿದ್ದವು. ಈ ಪ್ರಕರಣಗಳಲ್ಲಿ ಆರೋಗ್ಯ ಸಮಸ್ಯೆ, ಸ್ಪರ್ಧಾ ಪರೀಕ್ಷೆಯ ಸಿದ್ಧತೆಯ ಕಾರಣಗಳನ್ನು ನೀಡಿದ್ದರಿಂದ ದಾಖಲೆ ಹಿಂದಿರುಗಿಸಲು ಸಮಿತಿ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>