‘ಆಸ್ಪತ್ರೆ ನವೀಕರಣಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸಂಸದರ ನಿಧಿಯಿಂದ ₹35 ಲಕ್ಷ ಅನುದಾನ ಒದಗಿಸಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ಪರಿಹಾರ ನಿಧಿ, ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕಾ ನಿಧಿಯಿಂದಲೂ ನೆರವು ಪಡೆಯಲಾಗಿದೆ. ಅಗತ್ಯ ಇರುವ ಯಂತ್ರೋಪಕರಣಗಳನ್ನು ಈ ಹಣದಲ್ಲಿ ಖರೀದಿಸಲಾಗಿದೆ’ ಎಂದು ಅವರು ವಿವರಿಸಿದರು.