ರಾಜ್ಯದ ಜನರು ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ದಬ್ಬಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ ಅವರು ಗಟ್ಟಿಗುಂಡಿಗೆಯ ನಿರ್ಧಾರ ಕೈಗೊಳ್ಳಬೇಕು. ಎಲ್ಲ ವಿಚಾರಕ್ಕೂ ಹೆದರಿಕೊಂಡು ಕುಳಿತುಕೊಳ್ಳುವುದು ತಮ್ಮ ಹುದ್ದೆಗೆ ಶೋಭೆ ತಾರದು. ಬಿಜೆಪಿ ಹೇಳುತ್ತಿರುವಂತೆ ಅನಂತ ಕುಮಾರ್ ಹೇಳಿಕೆ ಅವರ ವೈಯಕ್ತಿಕವಲ್ಲ. ಏಕೆಂದರೆ ಬಿಜೆಪಿ ಮತ್ತು ಆರ್ಎಸ್ಎಸ್ನ ಮೂಲ ಉದ್ದೇಶವೇ ಸಂವಿಧಾನ ಬದಲಿಸುವುದು. ಪ್ರಜಾಪ್ರಭುತ್ವದ ಬದಲು ಸರ್ವಾಧಿಕಾರ ಹೇರುವುದು. ಬಿಜೆಪಿಗೆ ನೈತಿಕತೆ ಇದ್ದರೆ ತಕ್ಷಣ ಅವರನ್ನು ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದಾರೆ.