‘ಸಾಮಾಜಿಕ ಜಾಲತಾಣಗಳಲ್ಲಿ ‘ಭಿತ್ತಿಪತ್ರ ಚಳವಳಿ’ಯನ್ನು ಕರವೇ ನಡೆಸುತ್ತಿದೆ. ನಾಡಿನ ಸಾಹಿತಿಗಳು, ಮಠಾಧೀಶರು, ಚಿಂತಕರು, ಧರ್ಮಗುರುಗಳು ಈ ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಲಕ್ಷಾಂತರ ಜನರ ಗಮನ ಸೆಳೆದಿದೆ. ಇಷ್ಟಾದರೂ ಸರ್ಕಾರ ಬೇಜವಾಬ್ದಾರಿ ಮತ್ತು ಉದಾಸೀನ ಪ್ರವೃತ್ತಿಯನ್ನು ಮುಂದುವರಿಸಿದೆ. ಈ ಸಮಯದಲ್ಲಿ ತೀವ್ರ ಸ್ವರೂಪದ ಚಳವಳಿ ನಡೆಸದೇ ನಮಗೆ ಬೇರೆ ದಾರಿ ಉಳಿದಿಲ್ಲ’ ಎಂದಿದ್ದಾರೆ.