<p><strong>ಬೆಂಗಳೂರು:</strong> ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಯುವತಿ ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. </p><p>ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 26 ವರ್ಷದ ಯುವತಿ ದೂರು ನೀಡಿದ್ದಾರೆ.</p><p>ಸಂತ್ರಸ್ತೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು ₹ 6 ಲಕ್ಷ ಹಣದ ಸಹಾಯ ಕೇಳಿದ್ದರು ಎನ್ನಲಾಗಿದೆ.</p><p>ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ 2018ರ ಚುನಾವಣೆಯಲ್ಲಿ ಸೋಮಶೇಖರ್ ಬಿಜೆಪಿಯಿಂದ ಟಿಕೆಟ್ ಪಡದು ಸ್ಪರ್ಧಿಸಿ ಸೋತಿದ್ದರು.</p><p>ಆರೋಪಿ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಯುವತಿ ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. </p><p>ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 26 ವರ್ಷದ ಯುವತಿ ದೂರು ನೀಡಿದ್ದಾರೆ.</p><p>ಸಂತ್ರಸ್ತೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು ₹ 6 ಲಕ್ಷ ಹಣದ ಸಹಾಯ ಕೇಳಿದ್ದರು ಎನ್ನಲಾಗಿದೆ.</p><p>ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ 2018ರ ಚುನಾವಣೆಯಲ್ಲಿ ಸೋಮಶೇಖರ್ ಬಿಜೆಪಿಯಿಂದ ಟಿಕೆಟ್ ಪಡದು ಸ್ಪರ್ಧಿಸಿ ಸೋತಿದ್ದರು.</p><p>ಆರೋಪಿ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>