‘ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ–2020ಯ ಸೆಕ್ಷನ್ 5ರ ಪ್ರಕಾರ ನಿಯಮ ಪಾಲಿಸದವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲು ಅವಕಾಶ ಇದೆ. ಆದರೆ, ಪ್ರಭಾವಿ ರಾಜಕೀಯ ಮುಖಂಡರು ಮತ್ತು ಧಾರ್ಮಿಕ ಮುಖಂಡರು ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಇಷ್ಟೊಂದು ಕಡಿಮೆ ಸಂಖ್ಯೆಯ ಎಫ್ಐಆರ್ ದಾಖಲಾಗಿರುವುದನ್ನು ಗಮನಿಸಿದರೆ ಅದು ಅರ್ಥವಾಗುತ್ತದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.