1988ರಲ್ಲಿ ಆಗ್ನೇಯ ರೈಲ್ವೆ ವಿಭಾಗದಲ್ಲಿ ಕಾಮಗಾರಿ ನಿರೀಕ್ಷಕರಾಗಿ ಘನಶ್ಯಾಮ್ ಪ್ರಧಾನ್ ನೇಮಕವಾಗಿದ್ದರು. ನಂತರ ಬಡ್ತಿ ಪಡೆದು ವಿವಿಧ ಜಿಲ್ಲೆಯಲ್ಲಿ ಕರ್ತವ್ಯ ಸಲ್ಲಿಸಿದ್ದಾರೆ. 2010ರ ಏ. 1ರಿಂದ 2019ರ ಡಿ. 31ರ ಅವಧಿಯಲ್ಲಿ ಮೈಸೂರು, ಹಾಸನ, ದಾವಣಗೆರೆ, ಹಾವೇರಿಯಲ್ಲಿ ರೈಲ್ವೆ ಇಲಾಖೆ ಕೈಗೊಂಡ ವಿವಿಧ ಕಾಮಗಾರಿಗಳಲ್ಲಿ ಗುತ್ತಿಗೆ ಕಂಪನಿ ಜತೆ ಶಾಮೀಲಾಗಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.