ಶಿವಮೊಗ್ಗ: ಇಲ್ಲಿನ ಪುರಲೆ ಬಳಿ ತುಂಗಾ ನದಿ ದಡದಲ್ಲಿ ಪ್ರಾಯೋಗಿಕವಾಗಿ ನಡೆಸಿದ್ದ ಬಾಂಬ್ ಸ್ಫೋಟ ಹಾಗೂ ರಾಷ್ಟ್ರಧ್ವಜ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ಸೇರಿದಂತೆ ಮೂವರ (ಶಿವಮೊಗ್ಗದ ಸೈಯದ್ ಯಾಸಿನ್ ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮದ್) ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಎಫ್ಐಆರ್ ದಾಖಲಿಸಿದ ನಾಲ್ಕು ದಿನಗಳಲ್ಲಿ ಶಾರಿಕ್ ಸಾಗಿಸುತ್ತಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡಿದೆ.