<p><strong>ಚಿತ್ರದುರ್ಗ:</strong> 8ನೇ ತರಗತಿ ವಿದ್ಯಾರ್ಥಿನಿಯ ವಿವಾಹ ಮಾಡಲು ಮುಂದಾಗಿ ಆಕೆಯ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಚಳ್ಳಕೆರೆ ತಾಲ್ಲೂಕಿನ ಗ್ರಾಮವೊಂದರ ಐವರ ವಿರುದ್ಧ ಚಳ್ಳಕೆರೆ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.</p>.<p>ಮದುವೆಯಾಗುವಂತೆ ಬಾಲಕಿಯ ಮೇಲೆ ಹಲ್ಲೆ ನಡೆಸಿರುವ ತಾಯಿ, ಬಲವಂತವಾಗಿ ತಾಳಿ ಕಟ್ಟಲು ಯತ್ನಿಸಿದ ಸೋದರ ಮಾವ, ಆತನ ಅಣ್ಣ, ಅತ್ತಿಗೆ, ಬಾಲಕಿಯ ಅಜ್ಜಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಎಲ್ಲ ಐವರು ಆರೋಪಿಗಳನ್ನು ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.</p>.<p>ಜೂನ್ 4ರಂದು ಬಾಲಕಿಗೆ ಒತ್ತಾಯಪೂರ್ವಕ ಮದುವೆ ಮಾಡುವ ಪ್ರಯತ್ನ ನಡೆದಿತ್ತು. ಆದರೆ, ತನಗಿಷ್ಟವಿಲ್ಲದ ಮದುವೆಗೆ ಬಾಲಕಿ ತೀವ್ರ ಪ್ರತಿರೋಧ ಒಡ್ಡಿದ್ದರಿಂದ ಸಂಬಂಧಿಕರು ಆಕೆಯ ಮೇಲೆ ಹಲ್ಲೆ ನಡೆಸಿದ್ದರು. ದಿಟ್ಟತನ ಪ್ರದರ್ಶಿಸಿದ ಬಾಲಕಿ ಬಾಲ್ಯವಿವಾಹದಿಂದ ಪಾರಾಗಿದ್ದಳು.</p>.<p>ಘಟನೆ ಕುರಿತ ವಿಡಿಯೊ ಜಾಲತಾಣದಲ್ಲಿ ಹರಿದಾಡಿತ್ತು. ಅದನ್ನು ವೀಕ್ಷಿಸಿದ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದರಾದರೂ ಬಾಲ್ಯವಿವಾಹ ನಡೆಯದ್ದರಿಂದ ಯಾರ ವಿರುದ್ಧವೂ ಪ್ರಕರಣ ದಾಖಲಿಸದೆ ಎಚ್ಚರಿಕೆ ನೀಡಿ ಕಳುಹಿಸಿದ್ದರು.</p>.<p>‘10–15 ಜನ ಬಾಲಕಿಯ ಮೇಲೆ ಎರಗಿ ತಾಳಿ ಕಟ್ಟಿಸಲು ಯತ್ನಿಸಿದ್ದಾರೆ. ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವ ಕಾರಣ ದೂರು ದಾಖಲು ಮಾಡಿಕೊಂಡಿದ್ದೇವೆ’ ಎಂದು ಚಳ್ಳಕೆರೆ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ಈ ಸಂಬಂಧ ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.</p>.ಒಬ್ಬಂಟಿ ಹೋರಾಟ: ಬಾಲ್ಯ ವಿವಾಹ ತಪ್ಪಿಸಿಕೊಂಡ ಬಾಲೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> 8ನೇ ತರಗತಿ ವಿದ್ಯಾರ್ಥಿನಿಯ ವಿವಾಹ ಮಾಡಲು ಮುಂದಾಗಿ ಆಕೆಯ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಚಳ್ಳಕೆರೆ ತಾಲ್ಲೂಕಿನ ಗ್ರಾಮವೊಂದರ ಐವರ ವಿರುದ್ಧ ಚಳ್ಳಕೆರೆ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.</p>.<p>ಮದುವೆಯಾಗುವಂತೆ ಬಾಲಕಿಯ ಮೇಲೆ ಹಲ್ಲೆ ನಡೆಸಿರುವ ತಾಯಿ, ಬಲವಂತವಾಗಿ ತಾಳಿ ಕಟ್ಟಲು ಯತ್ನಿಸಿದ ಸೋದರ ಮಾವ, ಆತನ ಅಣ್ಣ, ಅತ್ತಿಗೆ, ಬಾಲಕಿಯ ಅಜ್ಜಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಎಲ್ಲ ಐವರು ಆರೋಪಿಗಳನ್ನು ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.</p>.<p>ಜೂನ್ 4ರಂದು ಬಾಲಕಿಗೆ ಒತ್ತಾಯಪೂರ್ವಕ ಮದುವೆ ಮಾಡುವ ಪ್ರಯತ್ನ ನಡೆದಿತ್ತು. ಆದರೆ, ತನಗಿಷ್ಟವಿಲ್ಲದ ಮದುವೆಗೆ ಬಾಲಕಿ ತೀವ್ರ ಪ್ರತಿರೋಧ ಒಡ್ಡಿದ್ದರಿಂದ ಸಂಬಂಧಿಕರು ಆಕೆಯ ಮೇಲೆ ಹಲ್ಲೆ ನಡೆಸಿದ್ದರು. ದಿಟ್ಟತನ ಪ್ರದರ್ಶಿಸಿದ ಬಾಲಕಿ ಬಾಲ್ಯವಿವಾಹದಿಂದ ಪಾರಾಗಿದ್ದಳು.</p>.<p>ಘಟನೆ ಕುರಿತ ವಿಡಿಯೊ ಜಾಲತಾಣದಲ್ಲಿ ಹರಿದಾಡಿತ್ತು. ಅದನ್ನು ವೀಕ್ಷಿಸಿದ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದರಾದರೂ ಬಾಲ್ಯವಿವಾಹ ನಡೆಯದ್ದರಿಂದ ಯಾರ ವಿರುದ್ಧವೂ ಪ್ರಕರಣ ದಾಖಲಿಸದೆ ಎಚ್ಚರಿಕೆ ನೀಡಿ ಕಳುಹಿಸಿದ್ದರು.</p>.<p>‘10–15 ಜನ ಬಾಲಕಿಯ ಮೇಲೆ ಎರಗಿ ತಾಳಿ ಕಟ್ಟಿಸಲು ಯತ್ನಿಸಿದ್ದಾರೆ. ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವ ಕಾರಣ ದೂರು ದಾಖಲು ಮಾಡಿಕೊಂಡಿದ್ದೇವೆ’ ಎಂದು ಚಳ್ಳಕೆರೆ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>ಈ ಸಂಬಂಧ ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.</p>.ಒಬ್ಬಂಟಿ ಹೋರಾಟ: ಬಾಲ್ಯ ವಿವಾಹ ತಪ್ಪಿಸಿಕೊಂಡ ಬಾಲೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>