<p><strong>ಬೆಂಗಳೂರು: </strong>ಬಹುರಾಷ್ಟ್ರೀಯ ಕಂಪನಿಗಳನ್ನು ಆಕರ್ಷಿಸುವ, ಮುಂದಿನ ಐದು ವರ್ಷಗಳಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ರಾಜ್ಯಸರ್ಕಾರವು ಮಂಗಳವಾರ ‘ಕರ್ನಾಟಕ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ–2021’ ಬಿಡುಗಡೆ ಮಾಡಿದೆ.</p>.<p>ಈ ನೀತಿಯನ್ನು ರೂಪಿಸಿ ಅಳವಡಿಸಿಕೊಂಡ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಕಂಪನಿಗಳಿಗೆ ವಿವಿಧ ವಿನಾಯಿತಿಗಳು ಹಾಗೂ ಅನುದಾನ ಒದಗಿಸಲು ರಾಜ್ಯ ಸರ್ಕಾರ ಆರಂಭಿಕವಾಗಿ ₹1,000 ಕೋಟಿ ಮೀಸಲಿಟ್ಟಿದೆ.</p>.<p>‘ದೇಶದಲ್ಲಿ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ವಲಯವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು 2018 ರಿಂದ ವಾರ್ಷಿಕವಾಗಿ ಸರಾಸರಿ ಶೇ 12.8 ಬೆಳವಣಿಗೆ ಸಾಧಿಸುತ್ತಿದೆ. ಇದೇ ವೇಳೆ ಈ ವಲಯದ ಮೇಲಿನ ಜಾಗತಿಕ ವೆಚ್ಚವು 2025ರ ಹೊತ್ತಿಗೆ ₹146 ಲಕ್ಷ ಕೋಟಿ ( 2 ಟ್ರಿಲಿಯನ್ ಡಾಲರ್) ಆಗುವ ಅಂದಾಜಿದ್ದು, ಇದಕ್ಕನುಗುಣವಾಗಿ ರಾಜ್ಯವನ್ನು ಸಜ್ಜುಗೊಳಿಸುವ ಉದ್ದೇಶವನ್ನು ಈ ನೀತಿಯು<br />ಹೊಂದಿದೆ’ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೀತಿ ಬಿಡುಗಡೆಗೊಳಿಸಿ ತಿಳಿಸಿದರು.</p>.<p>‘ಐಟಿ–ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಂಸ್ಥೆ (ಕಿಟ್ಸ್) ಹಾಗೂ ನ್ಯಾಸ್ಕಾಂ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಮಾಲೋಚಿಸಿ ಇದನ್ನು ರಚಿಸಲಾಗಿದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ 400 ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಹಾಗೂ ಜಿಸಿಸಿಗಳಿವೆ. ವೈಮಾಂತರಿಕ್ಷ ಮತ್ತು ರಕ್ಷಣೆ ಸೇರಿ 5 ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಕ ಮುನ್ನಡೆ ಸಾಧಿಸಲು ರಾಜ್ಯವು ಸಜ್ಜಾಗಿದೆ. ಈ ನೀತಿ ರಾಜ್ಯದ ಪ್ರಗತಿಗೆ ಹೊಸ ದಿಕ್ಕು ತೋರಲಿದೆ. ದೇಶದ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಉದ್ಯಮಕ್ಕೆ ಅತಿ ಹೆಚ್ಚು ಕೊಡುಗೆ ನೀಡುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ನಾವು ಅಗ್ರಸ್ಥಾನದಲ್ಲಿದ್ದೇವೆ. ಈ ಸ್ಥಾನ ಕಾಯ್ದುಕೊಳ್ಳುವ ಗುರಿಯನ್ನೂ ಹೊಂದಿದ್ದೇವೆ. ಪ್ರಧಾನಮಂತ್ರಿಯವರ ‘ಆತ್ಮನಿರ್ಭರ ಭಾರತ’ ಕಲ್ಪನೆಯಂತೆ ಈ ನೀತಿ ರೂಪುಗೊಂಡಿದೆ’ ಎಂದು ನುಡಿದರು.</p>.<p><strong>ಆದ್ಯತಾ ವಲಯಗಳು</strong></p>.<p>*ವೈಮಾಂತರಿಕ್ಷ ಮತ್ತು ರಕ್ಷಣೆ</p>.<p>*ವಾಹನ-ವಾಹನ ಬಿಡಿಭಾಗಗಳು-ವಿದ್ಯುತ್ ಚಾಲಿತ ವಾಹನಗಳು</p>.<p>*ಜೈವಿಕ ತಂತ್ರಜ್ಞಾನ, ಔಷಧ ಮತ್ತು ವೈದ್ಯಕೀಯ ಉಪಕರಣಗಳು</p>.<p>*ಅರೆವಾಹಕಗಳು, ದೂರಸಂಪರ್ಕ, ಎಲೆಕ್ಟ್ರಾನಿಕ್ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣೆ (ಇ.ಎಸ್.ಡಿ.ಎಂ.)</p>.<p>*ಸಾಫ್ಟ್ವೇರ್ ಉತ್ಪನಗಳು</p>.<p><strong>ನೀತಿಯ ಉದ್ದೇಶ:</strong></p>.<p>*ಉದ್ಯಮ ಹಾಗೂ ಶೈಕ್ಷಣಿಕ ವಲಯದ ನಡುವೆ ಸಂಪರ್ಕ ಸೇತುವೆ ನಿರ್ಮಿಸುವುದು.</p>.<p>*ಕೌಶಲಯುಕ್ತ ಎಂಜಿನಿಯರಿಂಗ್ ಮಾನವ ಸಂಪನ್ಮೂಲ ಸೃಷ್ಟಿ.</p>.<p>*ಪರೀಕ್ಷೆ, ಪ್ರಾಯೋಗಿಕ ಮಾದರಿ ಹಾಗೂ ಇತರ ಅತ್ಯಾಧುನಿಕ ಮೂಲಸೌಕರ್ಯ ನಿರ್ಮಾಣ.</p>.<p>*ಬೆಂಗಳೂರು ಬಿಟ್ಟು ಬೇರೆ ಪಟ್ಟಣ ಮತ್ತು ನಗರಗಳಲ್ಲಿ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಉದ್ಯಮ ಬೆಳೆಸುವುದು</p>.<p>* ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಾಚೆಗೆ ಉದ್ಯಮ ಸ್ಥಾಪನೆ/ವಿಸ್ತರಣೆ ಮಾಡಿದರೆ ಶೇ 50ರಷ್ಟು ಹಾಗೂ ಗರಿಷ್ಠ ₹2 ಕೋಟಿವರೆಗೆ ಬಾಡಿಗೆ ಮರುಪಾವತಿ.</p>.<p>*ಬಂಡವಾಳದ ಶೇ 20ರಷ್ಟು, ಗರಿಷ್ಠ ₹2 ಕೋಟಿವರೆಗೆ ಹೂಡಿಕೆ ಸಬ್ಸಿಡಿ.</p>.<p>*ನಾವೀನ್ಯತಾ ಪ್ರಯೋಗಾಲಯಗಳನ್ನು ಸ್ಥಾಪಿಸಿದರೆ ವೆಚ್ಚದ ಶೇ 33 (ಗರಿಷ್ಠ ₹8 ಕೋಟಿ) ನೆರವು.</p>.<p>*ಡಿಜಿಟಲ್ ನಾವೀನ್ಯತಾ ಕಾರ್ಯಯೋಜನೆಗಳಿಗೆ ಗರಿಷ್ಠ ₹3 ಕೋಟಿಯವರೆಗೆ ನೆರವು.</p>.<p>*ಶೈಕ್ಷಣಿಕ ವಲಯದ ಸಂಶೋಧನೆಗಳನ್ನು ಔದ್ಯಮಿಕ ಅನ್ವಯಿಕತೆಯಾಗಿ ಪರಿವರ್ತಿಸಲು ಪ್ರತಿ ಸಂಸ್ಥೆಗೆ ವರ್ಷಕ್ಕೆ ₹75 ಲಕ್ಷ ಅನುದಾನ.</p>.<p>*ಇಂಟರ್ನ್ಶಿಪ್ ಉತ್ತೇಜಿಸಲು ಪ್ರತಿ ಸಂಸ್ಥೆಗೆ ಶೇ 50 ರಷ್ಟು ಸ್ಟೈಪೆಂಡ್ ಮರುಪಾವತಿ. ಪ್ರತಿ ಅಭ್ಯರ್ಥಿಗೆ ಮೂರು ತಿಂಗಳವರೆಗೆ ಮಾಸಿಕ ಗರಿಷ್ಠ ₹10 ಸಾವಿರ ಭತ್ಯೆ. ಇದರಲ್ಲಿ ಶೇ 33ರಷ್ಟು ಮಹಿಳಾ ಅಭ್ಯರ್ಥಿಗಳಿರಬೇಕು. ಇಂಟರ್ನಿಗಳ ಪೈಕಿ ಶೇ 30 ಅಭ್ಯರ್ಥಿಗಳನ್ನು ಪೂರ್ಣಾವಧಿ ಉದ್ಯೋಗಕ್ಕೆ ಪರಿಗಣಿಸಬೇಕು.</p>.<p><strong>ಇಂಟರ್ನ್ಶಿಪ್ ಅವಧಿ ಹೆಚ್ಚಳ</strong></p>.<p>‘ಎಂಜಿನಿಯರಿಂಗ್ ವಿದ್ಯಾರ್ಥಿಗಳ ಇಂಟರ್ನ್ಶಿಪ್ ಅವಧಿಯನ್ನು ಈಗಿನ 9 ತಿಂಗಳಿನಿಂದ ಒಂದು ವರ್ಷಕ್ಕೆ ಹೆಚ್ಚಿಸಲಾಗಿದೆ. ಅದನ್ನು ಕೈಗಾರಿಕೆಗಳಲ್ಲಿಯೇ ಮುಗಿಸಬೇಕೆಂಬ ಯೋಜನೆ ರೂಪಿಸಲಾಗಿದೆ. ಇದು ಕಡ್ಡಾಯವೂ ಹೌದು. ಇದಕ್ಕೆ ಉದ್ಯಮಿಗಳು ಸಹಕರಿಸಬೇಕು’ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>‘ಕೈಗಾರಿಕೆ ಹಾಗೂ ಪ್ರಗತಿಗೆ ಪೂರಕವಾಗಿ ಕೈಗಾರಿಕಾ ತರಬೇತಿ ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ. ಕೈಗಾರಿಕೆಗಳಿಗೆ ಕೌಶಲಯುಕ್ತ ಮಾನವ ಸಂಪನ್ಮೂಲವನ್ನು ಸ್ಥಳೀಯವಾಗಿಯೇ ಒದಗಿಸುವ ಗುರಿ ಹೊಂದಿದೆ. ಪೂರಕವಾಗಿ ರಾಜ್ಯದಲ್ಲಿನ 150 ಐಟಿಐ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ₹5,000 ಕೋಟಿ ವೆಚ್ಚ ಮಾಡಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಹುರಾಷ್ಟ್ರೀಯ ಕಂಪನಿಗಳನ್ನು ಆಕರ್ಷಿಸುವ, ಮುಂದಿನ ಐದು ವರ್ಷಗಳಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ರಾಜ್ಯಸರ್ಕಾರವು ಮಂಗಳವಾರ ‘ಕರ್ನಾಟಕ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ–2021’ ಬಿಡುಗಡೆ ಮಾಡಿದೆ.</p>.<p>ಈ ನೀತಿಯನ್ನು ರೂಪಿಸಿ ಅಳವಡಿಸಿಕೊಂಡ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಕಂಪನಿಗಳಿಗೆ ವಿವಿಧ ವಿನಾಯಿತಿಗಳು ಹಾಗೂ ಅನುದಾನ ಒದಗಿಸಲು ರಾಜ್ಯ ಸರ್ಕಾರ ಆರಂಭಿಕವಾಗಿ ₹1,000 ಕೋಟಿ ಮೀಸಲಿಟ್ಟಿದೆ.</p>.<p>‘ದೇಶದಲ್ಲಿ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ವಲಯವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು 2018 ರಿಂದ ವಾರ್ಷಿಕವಾಗಿ ಸರಾಸರಿ ಶೇ 12.8 ಬೆಳವಣಿಗೆ ಸಾಧಿಸುತ್ತಿದೆ. ಇದೇ ವೇಳೆ ಈ ವಲಯದ ಮೇಲಿನ ಜಾಗತಿಕ ವೆಚ್ಚವು 2025ರ ಹೊತ್ತಿಗೆ ₹146 ಲಕ್ಷ ಕೋಟಿ ( 2 ಟ್ರಿಲಿಯನ್ ಡಾಲರ್) ಆಗುವ ಅಂದಾಜಿದ್ದು, ಇದಕ್ಕನುಗುಣವಾಗಿ ರಾಜ್ಯವನ್ನು ಸಜ್ಜುಗೊಳಿಸುವ ಉದ್ದೇಶವನ್ನು ಈ ನೀತಿಯು<br />ಹೊಂದಿದೆ’ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೀತಿ ಬಿಡುಗಡೆಗೊಳಿಸಿ ತಿಳಿಸಿದರು.</p>.<p>‘ಐಟಿ–ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಂಸ್ಥೆ (ಕಿಟ್ಸ್) ಹಾಗೂ ನ್ಯಾಸ್ಕಾಂ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಮಾಲೋಚಿಸಿ ಇದನ್ನು ರಚಿಸಲಾಗಿದೆ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ 400 ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಹಾಗೂ ಜಿಸಿಸಿಗಳಿವೆ. ವೈಮಾಂತರಿಕ್ಷ ಮತ್ತು ರಕ್ಷಣೆ ಸೇರಿ 5 ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಕ ಮುನ್ನಡೆ ಸಾಧಿಸಲು ರಾಜ್ಯವು ಸಜ್ಜಾಗಿದೆ. ಈ ನೀತಿ ರಾಜ್ಯದ ಪ್ರಗತಿಗೆ ಹೊಸ ದಿಕ್ಕು ತೋರಲಿದೆ. ದೇಶದ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಉದ್ಯಮಕ್ಕೆ ಅತಿ ಹೆಚ್ಚು ಕೊಡುಗೆ ನೀಡುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ನಾವು ಅಗ್ರಸ್ಥಾನದಲ್ಲಿದ್ದೇವೆ. ಈ ಸ್ಥಾನ ಕಾಯ್ದುಕೊಳ್ಳುವ ಗುರಿಯನ್ನೂ ಹೊಂದಿದ್ದೇವೆ. ಪ್ರಧಾನಮಂತ್ರಿಯವರ ‘ಆತ್ಮನಿರ್ಭರ ಭಾರತ’ ಕಲ್ಪನೆಯಂತೆ ಈ ನೀತಿ ರೂಪುಗೊಂಡಿದೆ’ ಎಂದು ನುಡಿದರು.</p>.<p><strong>ಆದ್ಯತಾ ವಲಯಗಳು</strong></p>.<p>*ವೈಮಾಂತರಿಕ್ಷ ಮತ್ತು ರಕ್ಷಣೆ</p>.<p>*ವಾಹನ-ವಾಹನ ಬಿಡಿಭಾಗಗಳು-ವಿದ್ಯುತ್ ಚಾಲಿತ ವಾಹನಗಳು</p>.<p>*ಜೈವಿಕ ತಂತ್ರಜ್ಞಾನ, ಔಷಧ ಮತ್ತು ವೈದ್ಯಕೀಯ ಉಪಕರಣಗಳು</p>.<p>*ಅರೆವಾಹಕಗಳು, ದೂರಸಂಪರ್ಕ, ಎಲೆಕ್ಟ್ರಾನಿಕ್ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣೆ (ಇ.ಎಸ್.ಡಿ.ಎಂ.)</p>.<p>*ಸಾಫ್ಟ್ವೇರ್ ಉತ್ಪನಗಳು</p>.<p><strong>ನೀತಿಯ ಉದ್ದೇಶ:</strong></p>.<p>*ಉದ್ಯಮ ಹಾಗೂ ಶೈಕ್ಷಣಿಕ ವಲಯದ ನಡುವೆ ಸಂಪರ್ಕ ಸೇತುವೆ ನಿರ್ಮಿಸುವುದು.</p>.<p>*ಕೌಶಲಯುಕ್ತ ಎಂಜಿನಿಯರಿಂಗ್ ಮಾನವ ಸಂಪನ್ಮೂಲ ಸೃಷ್ಟಿ.</p>.<p>*ಪರೀಕ್ಷೆ, ಪ್ರಾಯೋಗಿಕ ಮಾದರಿ ಹಾಗೂ ಇತರ ಅತ್ಯಾಧುನಿಕ ಮೂಲಸೌಕರ್ಯ ನಿರ್ಮಾಣ.</p>.<p>*ಬೆಂಗಳೂರು ಬಿಟ್ಟು ಬೇರೆ ಪಟ್ಟಣ ಮತ್ತು ನಗರಗಳಲ್ಲಿ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಉದ್ಯಮ ಬೆಳೆಸುವುದು</p>.<p>* ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಾಚೆಗೆ ಉದ್ಯಮ ಸ್ಥಾಪನೆ/ವಿಸ್ತರಣೆ ಮಾಡಿದರೆ ಶೇ 50ರಷ್ಟು ಹಾಗೂ ಗರಿಷ್ಠ ₹2 ಕೋಟಿವರೆಗೆ ಬಾಡಿಗೆ ಮರುಪಾವತಿ.</p>.<p>*ಬಂಡವಾಳದ ಶೇ 20ರಷ್ಟು, ಗರಿಷ್ಠ ₹2 ಕೋಟಿವರೆಗೆ ಹೂಡಿಕೆ ಸಬ್ಸಿಡಿ.</p>.<p>*ನಾವೀನ್ಯತಾ ಪ್ರಯೋಗಾಲಯಗಳನ್ನು ಸ್ಥಾಪಿಸಿದರೆ ವೆಚ್ಚದ ಶೇ 33 (ಗರಿಷ್ಠ ₹8 ಕೋಟಿ) ನೆರವು.</p>.<p>*ಡಿಜಿಟಲ್ ನಾವೀನ್ಯತಾ ಕಾರ್ಯಯೋಜನೆಗಳಿಗೆ ಗರಿಷ್ಠ ₹3 ಕೋಟಿಯವರೆಗೆ ನೆರವು.</p>.<p>*ಶೈಕ್ಷಣಿಕ ವಲಯದ ಸಂಶೋಧನೆಗಳನ್ನು ಔದ್ಯಮಿಕ ಅನ್ವಯಿಕತೆಯಾಗಿ ಪರಿವರ್ತಿಸಲು ಪ್ರತಿ ಸಂಸ್ಥೆಗೆ ವರ್ಷಕ್ಕೆ ₹75 ಲಕ್ಷ ಅನುದಾನ.</p>.<p>*ಇಂಟರ್ನ್ಶಿಪ್ ಉತ್ತೇಜಿಸಲು ಪ್ರತಿ ಸಂಸ್ಥೆಗೆ ಶೇ 50 ರಷ್ಟು ಸ್ಟೈಪೆಂಡ್ ಮರುಪಾವತಿ. ಪ್ರತಿ ಅಭ್ಯರ್ಥಿಗೆ ಮೂರು ತಿಂಗಳವರೆಗೆ ಮಾಸಿಕ ಗರಿಷ್ಠ ₹10 ಸಾವಿರ ಭತ್ಯೆ. ಇದರಲ್ಲಿ ಶೇ 33ರಷ್ಟು ಮಹಿಳಾ ಅಭ್ಯರ್ಥಿಗಳಿರಬೇಕು. ಇಂಟರ್ನಿಗಳ ಪೈಕಿ ಶೇ 30 ಅಭ್ಯರ್ಥಿಗಳನ್ನು ಪೂರ್ಣಾವಧಿ ಉದ್ಯೋಗಕ್ಕೆ ಪರಿಗಣಿಸಬೇಕು.</p>.<p><strong>ಇಂಟರ್ನ್ಶಿಪ್ ಅವಧಿ ಹೆಚ್ಚಳ</strong></p>.<p>‘ಎಂಜಿನಿಯರಿಂಗ್ ವಿದ್ಯಾರ್ಥಿಗಳ ಇಂಟರ್ನ್ಶಿಪ್ ಅವಧಿಯನ್ನು ಈಗಿನ 9 ತಿಂಗಳಿನಿಂದ ಒಂದು ವರ್ಷಕ್ಕೆ ಹೆಚ್ಚಿಸಲಾಗಿದೆ. ಅದನ್ನು ಕೈಗಾರಿಕೆಗಳಲ್ಲಿಯೇ ಮುಗಿಸಬೇಕೆಂಬ ಯೋಜನೆ ರೂಪಿಸಲಾಗಿದೆ. ಇದು ಕಡ್ಡಾಯವೂ ಹೌದು. ಇದಕ್ಕೆ ಉದ್ಯಮಿಗಳು ಸಹಕರಿಸಬೇಕು’ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>‘ಕೈಗಾರಿಕೆ ಹಾಗೂ ಪ್ರಗತಿಗೆ ಪೂರಕವಾಗಿ ಕೈಗಾರಿಕಾ ತರಬೇತಿ ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ. ಕೈಗಾರಿಕೆಗಳಿಗೆ ಕೌಶಲಯುಕ್ತ ಮಾನವ ಸಂಪನ್ಮೂಲವನ್ನು ಸ್ಥಳೀಯವಾಗಿಯೇ ಒದಗಿಸುವ ಗುರಿ ಹೊಂದಿದೆ. ಪೂರಕವಾಗಿ ರಾಜ್ಯದಲ್ಲಿನ 150 ಐಟಿಐ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ₹5,000 ಕೋಟಿ ವೆಚ್ಚ ಮಾಡಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>