<p><strong>ಬೆಂಗಳೂರು</strong>: ಕೋವಿಡ್ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ (ಎಂಎಸ್ಎಂಇ) ₹ 20,000 ಕೋಟಿ ಮೊತ್ತದ ಪರಿಹಾರ ಪ್ಯಾಕೇಜ್ ನೀಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್ಕೆಸಿಸಿಐ) ಕೈಗಾರಿಕಾ ಸಚಿವರ ಜಗದೀಶ ಶೆಟ್ಟರ್ ಅವರನ್ನು ಆಗ್ರಹಿಸಿದೆ.</p>.<p>ಎಫ್ಕೆಸಿಸಿಐ ಅಧ್ಯಕ್ಷ ಪೆರಿಕ್ಕಲ್ ಎಂ. ಸುಂದರ್ ನೇತೃತ್ವದ ನಿಯೋಗ ಮಂಗಳವಾರ ಕೈಗಾರಿಕಾ ಸಚಿವರನ್ನು ಭೇಟಿ ಮಾಡಿ ಬೇಡಿಕೆ ಪತ್ರ ಸಲ್ಲಿಸಿದೆ.</p>.<p>‘ಸರಕು ಮತ್ತು ಸೇವಾ ತೆರಿಗೆ ರೂಪದಲ್ಲಿ ₹ 84,000 ಕೋಟಿ ಮತ್ತು ₹ 1.20 ಲಕ್ಷ ಕೋಟಿ ಆದಾಯ ತೆರಿಗೆ ಸೇರಿದಂತೆ ₹ 2.04 ಲಕ್ಷ ಕೋಟಿ ತೆರಿಗೆ ಪಾವತಿಸುತ್ತಿರುವ ಕೈಗಾರಿಕಾ ಕ್ಷೇತ್ರವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರುಮಾಡಲು ತಕ್ಷಣವೇ ಪ್ಯಾಕೇಜ್ ಪ್ರಕಟಿಸಬೇಕು’ ಎಂದು ಒತ್ತಾಯಿಸಿದೆ.</p>.<p>‘ಕನಿಷ್ಠ ವಿದ್ಯತ್ ಶುಲ್ಕದ ಬಾಬ್ತು ₹ 360 ಕೋಟಿ ವಿನಾಯ್ತಿ ಬಿಬಿಎಂಪಿ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸಬೇಕಾದ ಆಸ್ತಿ ತೆರಿಗೆ ಹಾಗೂ ಉದ್ಯಮ ಪರವಾನಗಿ ಶುಲ್ಕದಲ್ಲಿ ಶೇ 20ರಷ್ಟು (₹ 8,000 ಕೋಟಿ) ರಿಯಾಯ್ತಿ ನೀಡಬೇಕು. ಕೈಗಾರಿಕೆಗಳ ನೌಕರರ ಮೂರು ತಿಂಗಳ ವೇತನದ ಬಾಬ್ತು ₹ 6,000 ಕೋಟಿಯ ನೆರವು ನೀಡಬೇಕು. ಬ್ಯಾಂಕ್ಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲದ ಮೇಲಿನ ಅರ್ಧ ವರ್ಷದ ಬಡ್ಡಿಯ ಮೊತ್ತ ₹ 7,190 ಕೋಟಿಯನ್ನೂ ಸರ್ಕಾರ ಭರಿಸಬೇಕು’ ಎಂಬ ಬೇಡಿಕೆಯನ್ನು ಎಫ್ಕೆಸಿಸಿಐ ಮುಂದಿಟ್ಟಿದೆ.</p>.<p>ಬೇಡಿಕೆ ಪಟ್ಟಿಯಲ್ಲಿರುವ ಎಲ್ಲವೂ ಸೇರಿದರೆ ₹ 21,550 ಕೋಟಿ ಮೊತ್ತ ಬೇಕಾಗುತ್ತದೆ. ₹ 20,000 ಕೋಟಿಯಷ್ಟಾದರೂ ಪರಿಹಾರ ನೀಡಬೇಕು. ಕೈಗಾರಿಕೆಗಳ ನೌಕರರು, ಕಾರ್ಮಿಕರಿಗೆ ಆದ್ಯತೆ ಮೇಲೆ ಕೋವಿಡ್ ಲಸಿಕೆ ನೀಡಬೇಕು. ಲಸಿಕೆ ಪಡೆದಿರುವ ನೌಕರರು ಕೆಲಸಕ್ಕೆ ಹಾಜರಾಗಲು ಅವಕಾಶ ನೀಡಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.</p>.<p>ಎಫ್ಕೆಸಿಸಿಐ ಉಪಾಧ್ಯಕ್ಷ ಉಲ್ಲಾಸ್ ಕಾಮತ್, ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಬಿ. ಅರಸಪ್ಪ ನಿಯೋಗದಲ್ಲಿದ್ದರು.</p>.<p><strong>ಲಾಕ್ಡೌನ್ನಿಂದ ಹೊರಗಿಡಲು ಮನವಿ</strong></p>.<p>‘ಕೈಗಾರಿಕೆಗಳನ್ನು ಲಾಕ್ಡೌನ್ನಿಂದ ಹೊರಗಿಡಬೇಕು ಮತ್ತು ತಯಾರಿಕಾ ವಲಯದ ಉದ್ದಿಮೆಗಳಿಗೆ ಆಮ್ಲಜನಕ ಪೂರೈಸಬೇಕು’ ಎಂದು ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್ ಸಿ. ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದೆ.</p>.<p>ಮೂರು ತಿಂಗಳ ಅವಧಿಯ ನಿಗದಿತ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಬೇಕು ಮತ್ತು ಪೀಣ್ಯ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ಆದ್ಯತೆ ಮೇಲೆ ಕೋವಿಡ್ ಲಸಿಕೆ ನೀಡಬೇಕು ಎಂದು ಮನವಿ ಮಾಡಿದೆ.</p>.<p>ಸಂಘದ ಗೌರವ ಕಾರ್ಯದರ್ಶಿ ಶಾಮಚಂದ್ರನ್ ಮತ್ತು ಉದ್ಯಮಿ ಮಲ್ಲಿಕಾರ್ಜುನಯ್ಯ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ (ಎಂಎಸ್ಎಂಇ) ₹ 20,000 ಕೋಟಿ ಮೊತ್ತದ ಪರಿಹಾರ ಪ್ಯಾಕೇಜ್ ನೀಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್ಕೆಸಿಸಿಐ) ಕೈಗಾರಿಕಾ ಸಚಿವರ ಜಗದೀಶ ಶೆಟ್ಟರ್ ಅವರನ್ನು ಆಗ್ರಹಿಸಿದೆ.</p>.<p>ಎಫ್ಕೆಸಿಸಿಐ ಅಧ್ಯಕ್ಷ ಪೆರಿಕ್ಕಲ್ ಎಂ. ಸುಂದರ್ ನೇತೃತ್ವದ ನಿಯೋಗ ಮಂಗಳವಾರ ಕೈಗಾರಿಕಾ ಸಚಿವರನ್ನು ಭೇಟಿ ಮಾಡಿ ಬೇಡಿಕೆ ಪತ್ರ ಸಲ್ಲಿಸಿದೆ.</p>.<p>‘ಸರಕು ಮತ್ತು ಸೇವಾ ತೆರಿಗೆ ರೂಪದಲ್ಲಿ ₹ 84,000 ಕೋಟಿ ಮತ್ತು ₹ 1.20 ಲಕ್ಷ ಕೋಟಿ ಆದಾಯ ತೆರಿಗೆ ಸೇರಿದಂತೆ ₹ 2.04 ಲಕ್ಷ ಕೋಟಿ ತೆರಿಗೆ ಪಾವತಿಸುತ್ತಿರುವ ಕೈಗಾರಿಕಾ ಕ್ಷೇತ್ರವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರುಮಾಡಲು ತಕ್ಷಣವೇ ಪ್ಯಾಕೇಜ್ ಪ್ರಕಟಿಸಬೇಕು’ ಎಂದು ಒತ್ತಾಯಿಸಿದೆ.</p>.<p>‘ಕನಿಷ್ಠ ವಿದ್ಯತ್ ಶುಲ್ಕದ ಬಾಬ್ತು ₹ 360 ಕೋಟಿ ವಿನಾಯ್ತಿ ಬಿಬಿಎಂಪಿ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸಬೇಕಾದ ಆಸ್ತಿ ತೆರಿಗೆ ಹಾಗೂ ಉದ್ಯಮ ಪರವಾನಗಿ ಶುಲ್ಕದಲ್ಲಿ ಶೇ 20ರಷ್ಟು (₹ 8,000 ಕೋಟಿ) ರಿಯಾಯ್ತಿ ನೀಡಬೇಕು. ಕೈಗಾರಿಕೆಗಳ ನೌಕರರ ಮೂರು ತಿಂಗಳ ವೇತನದ ಬಾಬ್ತು ₹ 6,000 ಕೋಟಿಯ ನೆರವು ನೀಡಬೇಕು. ಬ್ಯಾಂಕ್ಗಳು ಮತ್ತು ಇತರ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲದ ಮೇಲಿನ ಅರ್ಧ ವರ್ಷದ ಬಡ್ಡಿಯ ಮೊತ್ತ ₹ 7,190 ಕೋಟಿಯನ್ನೂ ಸರ್ಕಾರ ಭರಿಸಬೇಕು’ ಎಂಬ ಬೇಡಿಕೆಯನ್ನು ಎಫ್ಕೆಸಿಸಿಐ ಮುಂದಿಟ್ಟಿದೆ.</p>.<p>ಬೇಡಿಕೆ ಪಟ್ಟಿಯಲ್ಲಿರುವ ಎಲ್ಲವೂ ಸೇರಿದರೆ ₹ 21,550 ಕೋಟಿ ಮೊತ್ತ ಬೇಕಾಗುತ್ತದೆ. ₹ 20,000 ಕೋಟಿಯಷ್ಟಾದರೂ ಪರಿಹಾರ ನೀಡಬೇಕು. ಕೈಗಾರಿಕೆಗಳ ನೌಕರರು, ಕಾರ್ಮಿಕರಿಗೆ ಆದ್ಯತೆ ಮೇಲೆ ಕೋವಿಡ್ ಲಸಿಕೆ ನೀಡಬೇಕು. ಲಸಿಕೆ ಪಡೆದಿರುವ ನೌಕರರು ಕೆಲಸಕ್ಕೆ ಹಾಜರಾಗಲು ಅವಕಾಶ ನೀಡಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.</p>.<p>ಎಫ್ಕೆಸಿಸಿಐ ಉಪಾಧ್ಯಕ್ಷ ಉಲ್ಲಾಸ್ ಕಾಮತ್, ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಬಿ. ಅರಸಪ್ಪ ನಿಯೋಗದಲ್ಲಿದ್ದರು.</p>.<p><strong>ಲಾಕ್ಡೌನ್ನಿಂದ ಹೊರಗಿಡಲು ಮನವಿ</strong></p>.<p>‘ಕೈಗಾರಿಕೆಗಳನ್ನು ಲಾಕ್ಡೌನ್ನಿಂದ ಹೊರಗಿಡಬೇಕು ಮತ್ತು ತಯಾರಿಕಾ ವಲಯದ ಉದ್ದಿಮೆಗಳಿಗೆ ಆಮ್ಲಜನಕ ಪೂರೈಸಬೇಕು’ ಎಂದು ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್ ಸಿ. ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದೆ.</p>.<p>ಮೂರು ತಿಂಗಳ ಅವಧಿಯ ನಿಗದಿತ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಬೇಕು ಮತ್ತು ಪೀಣ್ಯ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ಆದ್ಯತೆ ಮೇಲೆ ಕೋವಿಡ್ ಲಸಿಕೆ ನೀಡಬೇಕು ಎಂದು ಮನವಿ ಮಾಡಿದೆ.</p>.<p>ಸಂಘದ ಗೌರವ ಕಾರ್ಯದರ್ಶಿ ಶಾಮಚಂದ್ರನ್ ಮತ್ತು ಉದ್ಯಮಿ ಮಲ್ಲಿಕಾರ್ಜುನಯ್ಯ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>