<p><strong>ಬೆಂಗಳೂರು</strong>: ರಾಜ್ಯಕ್ಕೆ ಪ್ರತ್ಯೇಕ ಎಂಎಸ್ಎಂಇ ನೀತಿ ಮತ್ತು ವಿಶೇಷ ಉತ್ತೇಜಕ ಕ್ರಮಗಳ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.</p>.<p>ಸೋಮವಾರ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಎಫ್ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ ಅವರು ಮುಖ್ಯಮಂತ್ರಿಯವರಿಗೆ ಮನವಿ ಪತ್ರವಲ್ಲಿ ಸಲ್ಲಿಸಿದರು.</p>.<p><strong>ಸಂಸ್ಥೆಯ ಬೇಡಿಕೆಗಳು:</strong></p>.<p>*ಆರ್ಥಿಕ ಚೇತರಿಕೆ, ಹೂಡಿಕೆ ಪುನಶ್ಚೇತನ, ಕೈಗಾರಿಕಾ ಬೆಳವಣಿಗೆ ಮತ್ತು ಬೆಂಗಳೂರಿನ ಆಚೆಗೂ ಅಭಿವೃದ್ಧಿಗೆ ಆದ್ಯತೆ ನೀಡಬೇಕು.</p>.<p>* ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕಾ ಎಸ್ಟೇಟ್ಗಳನ್ನು ಮೇಲ್ದರ್ಜೆಗೆ ಏರಿಸುವುದು ಮತ್ತು ಕೈಗಾರಿಕಾ ಟೌನ್ಶಿಪ್ಗಳ ಸ್ಥಾಪನೆಗೆ ಒತ್ತು ನೀಡಬೇಕು.</p>.<p>*ಎಲ್ಲಾ ಕೈಗಾರಿಕಾ ಎಸ್ಟೇಟ್ಗಳು, ಕೈಗಾರಿಕಾ ಪಾರ್ಕ್ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದು.</p>.<p>* ಕೈಗಾರಿಕೆ ಮತ್ತು ಸೇವಾ ವಲಯದ ಉದ್ಯಮಗಳ ಆಸ್ತಿ ತೆರಿಗೆಯನ್ನು ತರ್ಕಬದ್ಧಗೊಳಿಸಬೇಕು, ಕೌಶಲಾಭಿವೃದ್ಧಿಗೆ ಚಟುವಟಿಕೆಗಳಿಗೆ ಉತ್ತೇಜನ.</p>.<p>* ರಾಜ್ಯದಲ್ಲಿ ಪ್ರವಾಸೋದ್ಯಮ ವಲಯದ ಬೆಳವಣಿಗೆಗೆ ಉತ್ತೇಜನ ಮತ್ತು ಇಂಧನ ವಲಯ ಮತ್ತು ಹಸಿರು ಇಂಧನಕ್ಕೆ ನೆರವು.</p>.<p>* ಉದ್ಯಮಿಗಳು ವ್ಯವಹಾರ ನಡೆಸುವ ಪ್ರಕ್ರಿಯೆ ಸರಳೀಕರಣ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡುವುದು.</p>.<p>* ಉತ್ಪಾದನಾ ವಲಯದಲ್ಲಿ ಉತ್ತಮ ಬೆಳವಣಿಗೆಗೆ ಸಾಧಿಸಲು ಪ್ರೋತ್ಸಾಹ, ಕೈಗಾರಿಕಾ ವಲಯಕ್ಕೆ ಸಾಲದ ಹರಿವನ್ನು ಹೆಚ್ಚಿಸುವುದು.</p>.<p>* ಹಳೆಯದಾಗಿರುವ ಅಪ್ರಸ್ತುತ ಕಾನೂನುಗಳ ರದ್ದತಿ, ಸಂಪನ್ಮೂಲಗಳ ಸಮರ್ಪಕ ಹಂಚಿಕೆ.</p>.<p>*ಇದೇ ಮೇ ತಿಂಗಳಿನಲ್ಲಿ ನಡೆಯುವ ಗ್ಲೋಬಲ್ ಎಂಎಸ್ಎಂಇ ಶೃಂಗಸಭೆ–2026 ರ ಆಯೋಜನೆಗೆ ₹2.24 ಕೋಟಿ ಅನುದಾನ ಮಂಜೂರು ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯಕ್ಕೆ ಪ್ರತ್ಯೇಕ ಎಂಎಸ್ಎಂಇ ನೀತಿ ಮತ್ತು ವಿಶೇಷ ಉತ್ತೇಜಕ ಕ್ರಮಗಳ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.</p>.<p>ಸೋಮವಾರ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಎಫ್ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ ಅವರು ಮುಖ್ಯಮಂತ್ರಿಯವರಿಗೆ ಮನವಿ ಪತ್ರವಲ್ಲಿ ಸಲ್ಲಿಸಿದರು.</p>.<p><strong>ಸಂಸ್ಥೆಯ ಬೇಡಿಕೆಗಳು:</strong></p>.<p>*ಆರ್ಥಿಕ ಚೇತರಿಕೆ, ಹೂಡಿಕೆ ಪುನಶ್ಚೇತನ, ಕೈಗಾರಿಕಾ ಬೆಳವಣಿಗೆ ಮತ್ತು ಬೆಂಗಳೂರಿನ ಆಚೆಗೂ ಅಭಿವೃದ್ಧಿಗೆ ಆದ್ಯತೆ ನೀಡಬೇಕು.</p>.<p>* ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕಾ ಎಸ್ಟೇಟ್ಗಳನ್ನು ಮೇಲ್ದರ್ಜೆಗೆ ಏರಿಸುವುದು ಮತ್ತು ಕೈಗಾರಿಕಾ ಟೌನ್ಶಿಪ್ಗಳ ಸ್ಥಾಪನೆಗೆ ಒತ್ತು ನೀಡಬೇಕು.</p>.<p>*ಎಲ್ಲಾ ಕೈಗಾರಿಕಾ ಎಸ್ಟೇಟ್ಗಳು, ಕೈಗಾರಿಕಾ ಪಾರ್ಕ್ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದು.</p>.<p>* ಕೈಗಾರಿಕೆ ಮತ್ತು ಸೇವಾ ವಲಯದ ಉದ್ಯಮಗಳ ಆಸ್ತಿ ತೆರಿಗೆಯನ್ನು ತರ್ಕಬದ್ಧಗೊಳಿಸಬೇಕು, ಕೌಶಲಾಭಿವೃದ್ಧಿಗೆ ಚಟುವಟಿಕೆಗಳಿಗೆ ಉತ್ತೇಜನ.</p>.<p>* ರಾಜ್ಯದಲ್ಲಿ ಪ್ರವಾಸೋದ್ಯಮ ವಲಯದ ಬೆಳವಣಿಗೆಗೆ ಉತ್ತೇಜನ ಮತ್ತು ಇಂಧನ ವಲಯ ಮತ್ತು ಹಸಿರು ಇಂಧನಕ್ಕೆ ನೆರವು.</p>.<p>* ಉದ್ಯಮಿಗಳು ವ್ಯವಹಾರ ನಡೆಸುವ ಪ್ರಕ್ರಿಯೆ ಸರಳೀಕರಣ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡುವುದು.</p>.<p>* ಉತ್ಪಾದನಾ ವಲಯದಲ್ಲಿ ಉತ್ತಮ ಬೆಳವಣಿಗೆಗೆ ಸಾಧಿಸಲು ಪ್ರೋತ್ಸಾಹ, ಕೈಗಾರಿಕಾ ವಲಯಕ್ಕೆ ಸಾಲದ ಹರಿವನ್ನು ಹೆಚ್ಚಿಸುವುದು.</p>.<p>* ಹಳೆಯದಾಗಿರುವ ಅಪ್ರಸ್ತುತ ಕಾನೂನುಗಳ ರದ್ದತಿ, ಸಂಪನ್ಮೂಲಗಳ ಸಮರ್ಪಕ ಹಂಚಿಕೆ.</p>.<p>*ಇದೇ ಮೇ ತಿಂಗಳಿನಲ್ಲಿ ನಡೆಯುವ ಗ್ಲೋಬಲ್ ಎಂಎಸ್ಎಂಇ ಶೃಂಗಸಭೆ–2026 ರ ಆಯೋಜನೆಗೆ ₹2.24 ಕೋಟಿ ಅನುದಾನ ಮಂಜೂರು ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>