ಕಳೆದ ಜುಲೈ ತಿಂಗಳಲ್ಲಿ ನದಿಗಳು ಉಕ್ಕಿ ಹರಿದಿದ್ದರಿಂದ ಪ್ರವಾಹ ಸ್ಥಿತಿ ತಲೆದೋರಿ ಅಂದಾಜು ₹38,000 ಕೋಟಿಗೂ ಅಧಿಕ ಪ್ರಮಾಣದ ನಷ್ಟಉಂಟಾಗಿದೆ. ರಾಷ್ಟ್ರೀಯ ನೈಸರ್ಗಿಕವಿಪತ್ತು ಪರಿಹಾರ (ಎನ್ಡಿಆರ್ಎಫ್) ನಿಯಮಾವಳಿ ಅನ್ವಯ ₹ 3,500 ಕೋಟಿ ಪರಿಹಾರದ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರ ಕೇಂದ್ರದ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.