<p><strong>ನವದೆಹಲಿ:</strong> ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.</p>.<p>ಕೆಲವು ಸ್ಪಷ್ಟನೆ ಕೋರಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ಅಧಿಕೃತವಾಗಿ ಪ್ರಮಾಣೀಕರಿಸುವಂತೆ ಸೂಚಿಸಿದೆ.</p>.<p>ಕಳೆದ ಜುಲೈ ತಿಂಗಳಲ್ಲಿ ನದಿಗಳು ಉಕ್ಕಿ ಹರಿದಿದ್ದರಿಂದ ಪ್ರವಾಹ ಸ್ಥಿತಿ ತಲೆದೋರಿ ಅಂದಾಜು ₹38,000 ಕೋಟಿಗೂ ಅಧಿಕ ಪ್ರಮಾಣದ ನಷ್ಟಉಂಟಾಗಿದೆ. ರಾಷ್ಟ್ರೀಯ ನೈಸರ್ಗಿಕವಿಪತ್ತು ಪರಿಹಾರ (ಎನ್ಡಿಆರ್ಎಫ್) ನಿಯಮಾವಳಿ ಅನ್ವಯ ₹ 3,500 ಕೋಟಿ ಪರಿಹಾರದ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರ ಕೇಂದ್ರದ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.</p>.<p>ಕೇಂದ್ರದ ತಂಡ ಅಧ್ಯಯನ ನಡೆಸಿ ಪ್ರತ್ಯೇಕ ವರದಿ ಸಲ್ಲಿಸಿದೆ. ಆದರೆ, ಈ ವರದಿಯು ರಾಜ್ಯ ಸರ್ಕಾರ ಸಲ್ಲಿಸಿರುವ ನಷ್ಟದೊಂದಿಗೆ ತಾಳೆಯಾಗುತ್ತಿಲ್ಲ. ಕೂಡಲೇ ಈ ಕುರಿತು ಸ್ಪಷ್ಟೀಕರಣ ನೀಡಬೇಕು ಎಂದು ಕೇಂದ್ರವು ರಾಜ್ಯಕ್ಕೆ ಸೂಚಿಸಿತ್ತು. ಗುರುವಾರ ಕಂದಾಯ ಇಲಾಖೆಯ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಕೇಂದ್ರದ ಗೃಹ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಈ ಕುರಿತ ಸ್ಪಷ್ಟನೆ ನೀಡಿದೆ.</p>.<p>ನಿಯಮಾವಳಿಗಳನ್ನೆಲ್ಲ ಗಾಳಿಗೆ ತೂರಿ ನಷ್ಟವನ್ನು ಅಂದಾಜಿಸಲಾಗಿದೆ. ನಷ್ಟದ ಪ್ರಮಾಣವನ್ನು ಬೇಕಾಬಿಟ್ಟಿ ಹೆಚ್ಚಿಸಲಾಗಿದೆ ಎಂದು ರಾಜ್ಯದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೇಂದ್ರದ ಅಧಿಕಾರಿಗಳು, ಸ್ಪಷ್ಟ ಮಾಹಿತಿ ಒದಗಿಸುವಂತೆ ಸೂಚಿಸಿದ್ದಾರೆ.</p>.<p>‘ನಮ್ಮ ಪ್ರಸ್ತಾವನೆಯಲ್ಲಿ ಒಟ್ಟು 2.50 ಲಕ್ಷ ಮನೆಗಳು ಸಂಪೂರ್ಣ ನೆಲಕಚ್ಚಿವೆ ಎಂಬ ವಿವರ ಇತ್ತು. ಆದರೆ, ಕೇಂದ್ರದ ಅಧ್ಯಯನ ತಂಡ ಸಲ್ಲಿಸಿರುವ ವರದಿಯ ಪ್ರಕಾರ ಈ ಪ್ರಮಾಣ ಕೇವಲ 1.15 ಲಕ್ಷ. ಪ್ರತಿ ಮನೆಗೆ ₹ 5 ಲಕ್ಷದಂತೆ ಪರಿಹಾರ ಕೋರಲಾಗಿತ್ತು. ನೆಲಕಚ್ಚಿದ ಮನೆಗಳೆಲ್ಲ ₹ 5 ಲಕ್ಷ ಬೆಲೆ ಬಾಳುತ್ತಿದ್ದವೇ ಎಂಬುದನ್ನು ಪ್ರಮಾಣೀಕರಿಸುವಂತೆ ಸೂಚಿಸಲಾಗಿದೆ’ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.</p>.<p>ಕೆಲವು ಸ್ಪಷ್ಟನೆ ಕೋರಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ಅಧಿಕೃತವಾಗಿ ಪ್ರಮಾಣೀಕರಿಸುವಂತೆ ಸೂಚಿಸಿದೆ.</p>.<p>ಕಳೆದ ಜುಲೈ ತಿಂಗಳಲ್ಲಿ ನದಿಗಳು ಉಕ್ಕಿ ಹರಿದಿದ್ದರಿಂದ ಪ್ರವಾಹ ಸ್ಥಿತಿ ತಲೆದೋರಿ ಅಂದಾಜು ₹38,000 ಕೋಟಿಗೂ ಅಧಿಕ ಪ್ರಮಾಣದ ನಷ್ಟಉಂಟಾಗಿದೆ. ರಾಷ್ಟ್ರೀಯ ನೈಸರ್ಗಿಕವಿಪತ್ತು ಪರಿಹಾರ (ಎನ್ಡಿಆರ್ಎಫ್) ನಿಯಮಾವಳಿ ಅನ್ವಯ ₹ 3,500 ಕೋಟಿ ಪರಿಹಾರದ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರ ಕೇಂದ್ರದ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.</p>.<p>ಕೇಂದ್ರದ ತಂಡ ಅಧ್ಯಯನ ನಡೆಸಿ ಪ್ರತ್ಯೇಕ ವರದಿ ಸಲ್ಲಿಸಿದೆ. ಆದರೆ, ಈ ವರದಿಯು ರಾಜ್ಯ ಸರ್ಕಾರ ಸಲ್ಲಿಸಿರುವ ನಷ್ಟದೊಂದಿಗೆ ತಾಳೆಯಾಗುತ್ತಿಲ್ಲ. ಕೂಡಲೇ ಈ ಕುರಿತು ಸ್ಪಷ್ಟೀಕರಣ ನೀಡಬೇಕು ಎಂದು ಕೇಂದ್ರವು ರಾಜ್ಯಕ್ಕೆ ಸೂಚಿಸಿತ್ತು. ಗುರುವಾರ ಕಂದಾಯ ಇಲಾಖೆಯ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಕೇಂದ್ರದ ಗೃಹ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಈ ಕುರಿತ ಸ್ಪಷ್ಟನೆ ನೀಡಿದೆ.</p>.<p>ನಿಯಮಾವಳಿಗಳನ್ನೆಲ್ಲ ಗಾಳಿಗೆ ತೂರಿ ನಷ್ಟವನ್ನು ಅಂದಾಜಿಸಲಾಗಿದೆ. ನಷ್ಟದ ಪ್ರಮಾಣವನ್ನು ಬೇಕಾಬಿಟ್ಟಿ ಹೆಚ್ಚಿಸಲಾಗಿದೆ ಎಂದು ರಾಜ್ಯದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೇಂದ್ರದ ಅಧಿಕಾರಿಗಳು, ಸ್ಪಷ್ಟ ಮಾಹಿತಿ ಒದಗಿಸುವಂತೆ ಸೂಚಿಸಿದ್ದಾರೆ.</p>.<p>‘ನಮ್ಮ ಪ್ರಸ್ತಾವನೆಯಲ್ಲಿ ಒಟ್ಟು 2.50 ಲಕ್ಷ ಮನೆಗಳು ಸಂಪೂರ್ಣ ನೆಲಕಚ್ಚಿವೆ ಎಂಬ ವಿವರ ಇತ್ತು. ಆದರೆ, ಕೇಂದ್ರದ ಅಧ್ಯಯನ ತಂಡ ಸಲ್ಲಿಸಿರುವ ವರದಿಯ ಪ್ರಕಾರ ಈ ಪ್ರಮಾಣ ಕೇವಲ 1.15 ಲಕ್ಷ. ಪ್ರತಿ ಮನೆಗೆ ₹ 5 ಲಕ್ಷದಂತೆ ಪರಿಹಾರ ಕೋರಲಾಗಿತ್ತು. ನೆಲಕಚ್ಚಿದ ಮನೆಗಳೆಲ್ಲ ₹ 5 ಲಕ್ಷ ಬೆಲೆ ಬಾಳುತ್ತಿದ್ದವೇ ಎಂಬುದನ್ನು ಪ್ರಮಾಣೀಕರಿಸುವಂತೆ ಸೂಚಿಸಲಾಗಿದೆ’ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>