<p><strong>ಬೆಂಗಳೂರು:</strong> ‘ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಆಗಿರುವ ಹಾನಿಯ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲು ಎಚ್.ಡಿ.ಕುಮಾರಸ್ವಾಮಿಗೆ ಹೇಳುವೆ. ಸದ್ಯ ಆವರಿಗೆ ಆರೋಗ್ಯ ಸರಿ ಇಲ್ಲ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.</p>.<p>‘ನಾನು ಹೋಗಿ ನೆರೆ ಪರಿಸ್ಥಿತಿ ನೋಡಿದರೆ ವಿಧಾನಸಭೆಯಲ್ಲಿ ಅದನ್ನು ಹೇಳುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರೇ ಹೋಗಿ ಬರಬೇಕು’ ಎಂದು ಮಂಗಳವಾರ ಇಲ್ಲಿ ಪಕ್ಷದ ಪರಿಶಿಷ್ಟ ಜಾತಿ, ಪಂಗಡದ ಘಟಕದ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.</p>.<p>‘ದಲಿತ ಸಮುದಾಯವನ್ನೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಲಾಗಿದೆ. ದಲಿತರು, ಹಿಂದುಳಿದ<br />ವರು, ಅಲ್ಪಸಂಖ್ಯಾತರ ಪರ ಪಕ್ಷ ಈ ಮೊದಲಿನಿಂದಲೂ ಹೋರಾಡುತ್ತಿದೆ. ಬುಧವಾರ ನಡೆಯುವ ಪಕ್ಷದ ಸಮಾವೇಶದಲ್ಲಿ ಮುಂದಿನ ಕಾರ್ಯಕ್ರಮ ಪ್ರಕಟಿಸಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಆಗಿರುವ ಹಾನಿಯ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲು ಎಚ್.ಡಿ.ಕುಮಾರಸ್ವಾಮಿಗೆ ಹೇಳುವೆ. ಸದ್ಯ ಆವರಿಗೆ ಆರೋಗ್ಯ ಸರಿ ಇಲ್ಲ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.</p>.<p>‘ನಾನು ಹೋಗಿ ನೆರೆ ಪರಿಸ್ಥಿತಿ ನೋಡಿದರೆ ವಿಧಾನಸಭೆಯಲ್ಲಿ ಅದನ್ನು ಹೇಳುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರೇ ಹೋಗಿ ಬರಬೇಕು’ ಎಂದು ಮಂಗಳವಾರ ಇಲ್ಲಿ ಪಕ್ಷದ ಪರಿಶಿಷ್ಟ ಜಾತಿ, ಪಂಗಡದ ಘಟಕದ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.</p>.<p>‘ದಲಿತ ಸಮುದಾಯವನ್ನೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಲಾಗಿದೆ. ದಲಿತರು, ಹಿಂದುಳಿದ<br />ವರು, ಅಲ್ಪಸಂಖ್ಯಾತರ ಪರ ಪಕ್ಷ ಈ ಮೊದಲಿನಿಂದಲೂ ಹೋರಾಡುತ್ತಿದೆ. ಬುಧವಾರ ನಡೆಯುವ ಪಕ್ಷದ ಸಮಾವೇಶದಲ್ಲಿ ಮುಂದಿನ ಕಾರ್ಯಕ್ರಮ ಪ್ರಕಟಿಸಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>