<p><strong>ಬೆಂಗಳೂರು:</strong> ‘ಆನ್ಲೈನ್ ಮೂಲಕ ಆಹಾರ ಪದಾರ್ಥ ಪೂರೈಸುವ ಸ್ವಿಗ್ಗಿ, ಜೊಮಾಟೊ ಕಂಪನಿಗಳು ಗ್ರಾಹಕರಿಗೆ ಉತ್ತಮ ಸೇವೆ ನೀಡುವ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳದಿದ್ದರೆ ಸರ್ಕಾರ ಮಧ್ಯಪ್ರವೇಶಿಸಬೇಕಾಗುತ್ತದೆ’ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಕಂಪನಿಗಳು ಗ್ರಾಹಕರಿಗೆ ಸೇವೆ ನೀಡುವ ವೇಳೆ ನಿರ್ಲಕ್ಷ್ಯ ವಹಿಸುತ್ತಿರುವ ಮತ್ತು ತಂತ್ರಜ್ಞಾನ ಬಳಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಸಾಕಷ್ಟು ದೂರುಗಳು ಬರುತ್ತಿವೆ’ ಎಂದಿದ್ದಾರೆ.</p>.<p>‘ತಮ್ಮ ಸೇವಾ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಲು ಈ ಕಂಪನಿಗಳು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು. ಆ ಮೂಲಕ, ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕು. ಕೊಡುವ ಭರವಸೆಗಳಿಗೆ ಪೂರವಾಗಿ ಸ್ಪಂದಿಸಬೇಕು. ಈ ವಿಚಾರಗಳಿಗೆ ಸಂಬಂಧಿಸಿದಂತೆ ಕಂಪನಿಗಳ ಜೊತೆ ಚರ್ಚೆ ನಡೆಸಲು ಯಾವುದೇ ಸಮಸ್ಯೆಗಳಿಲ್ಲ’ ಎಂದಿದ್ದಾರೆ.</p>.<p>‘ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನ ಬಳಕೆಯಿಂದ ಕೆಲವು ಸಮಸ್ಯೆಗಳನ್ನು ನಿಭಾಯಿಸಬಹುದು. ಆದರೆ, ನಿಜವಾದ ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸಲು ತಂತ್ರಜ್ಞಾನ ವಿಫಲವಾಗುತ್ತಿದೆ. ಸ್ವಿಗ್ಗಿ, ಜೊಮಾಟೊ ಸೇರಿದಂತೆ ಇತರ ತ್ವರಿತ ವಾಣಿಜ್ಯ ಮತ್ತು ಇ-ಕಾಮರ್ಸ್ ವೇದಿಕೆಗಳು ತಮ್ಮ ಗ್ರಾಹಕ ಸೇವೆಯನ್ನು ಸುಧಾರಿಸಿಕೊಳ್ಳದಿದ್ದರೆ, ಉತ್ತಮ ಸೇವೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ನಿಯಮಗಳನ್ನು ರೂಪಿಸಬೇಕಾದೀತು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಆನ್ಲೈನ್ ಮೂಲಕ ಆಹಾರ ಪದಾರ್ಥ ಪೂರೈಸುವ ಸ್ವಿಗ್ಗಿ, ಜೊಮಾಟೊ ಕಂಪನಿಗಳು ಗ್ರಾಹಕರಿಗೆ ಉತ್ತಮ ಸೇವೆ ನೀಡುವ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳದಿದ್ದರೆ ಸರ್ಕಾರ ಮಧ್ಯಪ್ರವೇಶಿಸಬೇಕಾಗುತ್ತದೆ’ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.</p>.<p>ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಕಂಪನಿಗಳು ಗ್ರಾಹಕರಿಗೆ ಸೇವೆ ನೀಡುವ ವೇಳೆ ನಿರ್ಲಕ್ಷ್ಯ ವಹಿಸುತ್ತಿರುವ ಮತ್ತು ತಂತ್ರಜ್ಞಾನ ಬಳಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಸಾಕಷ್ಟು ದೂರುಗಳು ಬರುತ್ತಿವೆ’ ಎಂದಿದ್ದಾರೆ.</p>.<p>‘ತಮ್ಮ ಸೇವಾ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಲು ಈ ಕಂಪನಿಗಳು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು. ಆ ಮೂಲಕ, ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕು. ಕೊಡುವ ಭರವಸೆಗಳಿಗೆ ಪೂರವಾಗಿ ಸ್ಪಂದಿಸಬೇಕು. ಈ ವಿಚಾರಗಳಿಗೆ ಸಂಬಂಧಿಸಿದಂತೆ ಕಂಪನಿಗಳ ಜೊತೆ ಚರ್ಚೆ ನಡೆಸಲು ಯಾವುದೇ ಸಮಸ್ಯೆಗಳಿಲ್ಲ’ ಎಂದಿದ್ದಾರೆ.</p>.<p>‘ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನ ಬಳಕೆಯಿಂದ ಕೆಲವು ಸಮಸ್ಯೆಗಳನ್ನು ನಿಭಾಯಿಸಬಹುದು. ಆದರೆ, ನಿಜವಾದ ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸಲು ತಂತ್ರಜ್ಞಾನ ವಿಫಲವಾಗುತ್ತಿದೆ. ಸ್ವಿಗ್ಗಿ, ಜೊಮಾಟೊ ಸೇರಿದಂತೆ ಇತರ ತ್ವರಿತ ವಾಣಿಜ್ಯ ಮತ್ತು ಇ-ಕಾಮರ್ಸ್ ವೇದಿಕೆಗಳು ತಮ್ಮ ಗ್ರಾಹಕ ಸೇವೆಯನ್ನು ಸುಧಾರಿಸಿಕೊಳ್ಳದಿದ್ದರೆ, ಉತ್ತಮ ಸೇವೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ನಿಯಮಗಳನ್ನು ರೂಪಿಸಬೇಕಾದೀತು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>