ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ವಾಡಿಕೆಯ ಅಂದಾಜಿನ ಪ್ರಕಾರ, ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ 1.11 ಕೋಟಿ ಟನ್ಗಳಷ್ಟು ಆಹಾರ ಧಾನ್ಯದ ಉತ್ಪಾದನೆ ಆಗಬೇಕಿತ್ತು. ಆದರೆ, ಬರದಿಂದ ಆಹಾರ ಧಾನ್ಯಗಳ ಬೆಳೆಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಉತ್ಪಾದನೆಯಲ್ಲಿ ಶೇಕಡ 52ರಷ್ಟು ಕುಸಿತ ಆಗುವ ಸಾಧ್ಯತೆಯನ್ನು ಅಂದಾಜು ಮಾಡಲಾಗಿದೆ’ ಎಂದರು.