<p><strong>ಬೆಂಗಳೂರು:</strong> ‘ಖಡಕ್ ಆಗಿದ್ದ ಕಾರಣಕ್ಕೆ ನಾನು ಹಿಂದಕ್ಕೆ (ವಿಧಾನಸಭೆಯಲ್ಲಿ ಮೊದಲ ಸಾಲಿನಿಂದ ಎರಡನೇ ಸಾಲಿಗೆ) ಬಂದಿದ್ದೇನೆ’ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಕೋಪದಿಂದ ಹೇಳಿದರು.</p>.<p>ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಶಿವಾನಂದ ಪಾಟೀಲ, ‘ಮುಳವಾಡ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆಯನ್ನು ಕಾರ್ಯನಿರ್ವಾಹಕ ಎಂಜಿನಿಯರ್ ಅಕ್ರಮವಾಗಿ ಒಡೆಸಿದ್ದಾರೆ. ಈ ಬಗ್ಗೆ ವರ್ಷದ ಹಿಂದೆಯೇ ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.</p>.<p>ಆಗ ಎದ್ದು ನಿಂತ ಮಾಧುಸ್ವಾಮಿ, ‘ಸಭಾಧ್ಯಕ್ಷರೇ, ಇದಕ್ಕೆ ಉತ್ತರ ನೀಡುವಂತೆ ನಿಮ್ಮ ಕಚೇರಿಯ ಸಿಬ್ಬಂದಿ ನನಗೆ ಪತ್ರ ಕಳುಹಿಸಿದ್ದಾರೆ. ನಿಮ್ಮ ಕಚೇರಿಯಿಂದ ಲೋಪ ಆಗಿದೆ’ ಎಂದರು.</p>.<p>ಆಗ ಶಿವಾನಂದ ಪಾಟೀಲ, ‘ನೀವು ಖಡಕ್ ಇದ್ದೀರಿ. ಇದಕ್ಕೆ ನೀವೇ ಉತ್ತರ ಕೊಟ್ಟುಬಿಡಿ’ ಎಂದು ಹೇಳಿದರು.</p>.<p>‘ಖಡಕ್ ಇದ್ದರೆ ಏನೂ ಪ್ರಯೋಜನ ಇಲ್ಲ. ಈಗ ಇಲ್ಲಿಗೆ ಬಂದಿದ್ದೇನಲ್ಲ’ ಎಂದು ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಖಡಕ್ ಆಗಿದ್ದ ಕಾರಣಕ್ಕೆ ನಾನು ಹಿಂದಕ್ಕೆ (ವಿಧಾನಸಭೆಯಲ್ಲಿ ಮೊದಲ ಸಾಲಿನಿಂದ ಎರಡನೇ ಸಾಲಿಗೆ) ಬಂದಿದ್ದೇನೆ’ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಕೋಪದಿಂದ ಹೇಳಿದರು.</p>.<p>ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಶಿವಾನಂದ ಪಾಟೀಲ, ‘ಮುಳವಾಡ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆಯನ್ನು ಕಾರ್ಯನಿರ್ವಾಹಕ ಎಂಜಿನಿಯರ್ ಅಕ್ರಮವಾಗಿ ಒಡೆಸಿದ್ದಾರೆ. ಈ ಬಗ್ಗೆ ವರ್ಷದ ಹಿಂದೆಯೇ ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆದರೂ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.</p>.<p>ಆಗ ಎದ್ದು ನಿಂತ ಮಾಧುಸ್ವಾಮಿ, ‘ಸಭಾಧ್ಯಕ್ಷರೇ, ಇದಕ್ಕೆ ಉತ್ತರ ನೀಡುವಂತೆ ನಿಮ್ಮ ಕಚೇರಿಯ ಸಿಬ್ಬಂದಿ ನನಗೆ ಪತ್ರ ಕಳುಹಿಸಿದ್ದಾರೆ. ನಿಮ್ಮ ಕಚೇರಿಯಿಂದ ಲೋಪ ಆಗಿದೆ’ ಎಂದರು.</p>.<p>ಆಗ ಶಿವಾನಂದ ಪಾಟೀಲ, ‘ನೀವು ಖಡಕ್ ಇದ್ದೀರಿ. ಇದಕ್ಕೆ ನೀವೇ ಉತ್ತರ ಕೊಟ್ಟುಬಿಡಿ’ ಎಂದು ಹೇಳಿದರು.</p>.<p>‘ಖಡಕ್ ಇದ್ದರೆ ಏನೂ ಪ್ರಯೋಜನ ಇಲ್ಲ. ಈಗ ಇಲ್ಲಿಗೆ ಬಂದಿದ್ದೇನಲ್ಲ’ ಎಂದು ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>