ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ರಷ್ಯಾ–ಉಕ್ರೇನ್ ಬಿಕ್ಕಟ್ಟು ಸೇರಿ ವಿವಿಧ ವಿಷಯಗಳ ಕುರಿತ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಲೆಕ್ಕಾಚಾರ, ಅನುಭವ ಮತ್ತು ದೇಶದ ಹಿತಾಸಕ್ತಿ ಅನುಸಾರ ಕಾರ್ಯತಂತ್ರಗಳನ್ನು ರೂಪಿಸಿ ದೃಢವಾದ ನಿಲುವು ಕೈಗೊಂಡಿದ್ದೇವೆ. ಇದರಿಂದ, ನಮ್ಮ ಹಿತಾಸಕ್ತಿಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗಿಲ್ಲ’ ಎಂದು ಪ್ರತಿಪಾದಿಸಿದರು.