<p><strong>ನವದೆಹಲಿ</strong>: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ₹4100 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಮೈಸೂರು-ಕುಶಾಲನಗರ ಚತುಷ್ಪಥ/ಆರು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ 140 ಎಕರೆ ಕಾಡು ಬಳಸಲು ಕೇಂದ್ರ ಅರಣ್ಯ ಇಲಾಖೆಯ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಆರ್ಇಸಿ) ಷರತ್ತುಬದ್ಧ ಅನುಮತಿ ನೀಡಿದೆ. </p>.<p>ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲ್ಲೂಕು ವ್ಯಾಪ್ತಿಗಳಲ್ಲಿ ನಾಗರಹೊಳೆ ಹುಲಿ ಅಭಯಾರಣ್ಯ ಹಾಗೂ ಹುಣಸೂರು ಅರಣ್ಯ ವಿಭಾಗದ ಕಾಡನ್ನು ಹೆದ್ದಾರಿ ವಿಸ್ತರಣೆಗೆ ಬಳಸಿಕೊಳ್ಳಲಾಗುತ್ತದೆ. ಈ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 2023ರಲ್ಲಿ ಚಾಲನೆ ನೀಡಿದ್ದರು. </p>.<p>ಯೋಜನೆಗೆ ಕಾಡು ಬಳಕೆಗಾಗಿ ಹೆದ್ದಾರಿ ಪ್ರಾಧಿಕಾರವು 2024ರ ಜುಲೈನಲ್ಲಿ ಪ್ರಸ್ತಾವ ಸಲ್ಲಿಸಿತ್ತು. ಹುಣಸೂರು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ಹೆದ್ದಾರಿ ವಿಸ್ತರಣೆಗಾಗಿ ಹುಣಸೂರು ವಿಭಾಗದಲ್ಲಿ 571 ಮರಗಳನ್ನು ಕಡಿಯಲಾಗುತ್ತದೆ. ಈ ಅರಣ್ಯವು ರಾಷ್ಟ್ರೀಯ ಉದ್ಯಾನ ಅಥವಾ ವನ್ಯಜೀವಿಧಾಮದ ಭಾಗವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ನಾಗರಹೊಳೆ ಹುಲಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಈ ಯೋಜನೆಗಾಗಿ 40 ಎಕರೆ ಅರಣ್ಯ ಬಳಸಿಕೊಳ್ಳಲಾಗುತ್ತದೆ. ಇಲ್ಲಿನ ಡಿಸಿಎಫ್ ಪ್ರಕಾರ, ಈ ಪ್ರದೇಶವು ಕಾವೇರಿ ಅಧಿಸೂಚಿತ ಅರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ.</p>.<p>40 ಎಕರೆ ಅರಣ್ಯವು ಅಭಯಾರಣ್ಯದ ಮೀಸಲು ಪ್ರದೇಶದ ಕಾವೇರಿ ಭಾಗದಲ್ಲಿ ಬರುತ್ತದೆಯೇ ಇಲ್ಲವೇ ಎಂಬ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು. ಅಭಯಾರಣ್ಯದ ಮೀಸಲು ಪ್ರದೇಶದಲ್ಲಿ ಬಂದರೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಪಡೆಯಬೇಕು ಎಂದು ಉನ್ನತಾಧಿಕಾರ ಸಮಿತಿ ಷರತ್ತು ವಿಧಿಸಿದೆ. </p>.<p>ಕಾಡು ಬಳಕೆಗೆ ಅನುಮೋದನೆ ಕೋರಿರುವ ಪ್ರದೇಶವು ರಂಗನತಿಟ್ಟು ಪಕ್ಷಿಧಾಮದ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯಲ್ಲಿದ್ದು, ರಾಷ್ಟ್ರೀಯ ವನ್ಯಜೀವಿಧಾಮದಿಂದ ಅಗತ್ಯ ಅನುಮೋದನೆ ಪಡೆಯಬೇಕು ಎಂದು ಸಮಿತಿ ಸೂಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ₹4100 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಮೈಸೂರು-ಕುಶಾಲನಗರ ಚತುಷ್ಪಥ/ಆರು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ 140 ಎಕರೆ ಕಾಡು ಬಳಸಲು ಕೇಂದ್ರ ಅರಣ್ಯ ಇಲಾಖೆಯ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಆರ್ಇಸಿ) ಷರತ್ತುಬದ್ಧ ಅನುಮತಿ ನೀಡಿದೆ. </p>.<p>ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲ್ಲೂಕು ವ್ಯಾಪ್ತಿಗಳಲ್ಲಿ ನಾಗರಹೊಳೆ ಹುಲಿ ಅಭಯಾರಣ್ಯ ಹಾಗೂ ಹುಣಸೂರು ಅರಣ್ಯ ವಿಭಾಗದ ಕಾಡನ್ನು ಹೆದ್ದಾರಿ ವಿಸ್ತರಣೆಗೆ ಬಳಸಿಕೊಳ್ಳಲಾಗುತ್ತದೆ. ಈ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 2023ರಲ್ಲಿ ಚಾಲನೆ ನೀಡಿದ್ದರು. </p>.<p>ಯೋಜನೆಗೆ ಕಾಡು ಬಳಕೆಗಾಗಿ ಹೆದ್ದಾರಿ ಪ್ರಾಧಿಕಾರವು 2024ರ ಜುಲೈನಲ್ಲಿ ಪ್ರಸ್ತಾವ ಸಲ್ಲಿಸಿತ್ತು. ಹುಣಸೂರು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ಹೆದ್ದಾರಿ ವಿಸ್ತರಣೆಗಾಗಿ ಹುಣಸೂರು ವಿಭಾಗದಲ್ಲಿ 571 ಮರಗಳನ್ನು ಕಡಿಯಲಾಗುತ್ತದೆ. ಈ ಅರಣ್ಯವು ರಾಷ್ಟ್ರೀಯ ಉದ್ಯಾನ ಅಥವಾ ವನ್ಯಜೀವಿಧಾಮದ ಭಾಗವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ನಾಗರಹೊಳೆ ಹುಲಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಈ ಯೋಜನೆಗಾಗಿ 40 ಎಕರೆ ಅರಣ್ಯ ಬಳಸಿಕೊಳ್ಳಲಾಗುತ್ತದೆ. ಇಲ್ಲಿನ ಡಿಸಿಎಫ್ ಪ್ರಕಾರ, ಈ ಪ್ರದೇಶವು ಕಾವೇರಿ ಅಧಿಸೂಚಿತ ಅರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ.</p>.<p>40 ಎಕರೆ ಅರಣ್ಯವು ಅಭಯಾರಣ್ಯದ ಮೀಸಲು ಪ್ರದೇಶದ ಕಾವೇರಿ ಭಾಗದಲ್ಲಿ ಬರುತ್ತದೆಯೇ ಇಲ್ಲವೇ ಎಂಬ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು. ಅಭಯಾರಣ್ಯದ ಮೀಸಲು ಪ್ರದೇಶದಲ್ಲಿ ಬಂದರೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಪಡೆಯಬೇಕು ಎಂದು ಉನ್ನತಾಧಿಕಾರ ಸಮಿತಿ ಷರತ್ತು ವಿಧಿಸಿದೆ. </p>.<p>ಕಾಡು ಬಳಕೆಗೆ ಅನುಮೋದನೆ ಕೋರಿರುವ ಪ್ರದೇಶವು ರಂಗನತಿಟ್ಟು ಪಕ್ಷಿಧಾಮದ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯಲ್ಲಿದ್ದು, ರಾಷ್ಟ್ರೀಯ ವನ್ಯಜೀವಿಧಾಮದಿಂದ ಅಗತ್ಯ ಅನುಮೋದನೆ ಪಡೆಯಬೇಕು ಎಂದು ಸಮಿತಿ ಸೂಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>