<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ‘ಅರಣ್ಯ ಪ್ರದೇಶ ಒತ್ತುವರಿ ಒಂದು ದೊಡ್ಡ ಸಮಸ್ಯೆ. ಆ ಒತ್ತುವರಿಗಳನ್ನು ತೆರವು ಮಾಡಿಸಲು ಆದ್ಯತೆ ನೀಡಿ’ ಎಂದು ನೂತನವಾಗಿ ನೇಮಕಗೊಂಡ 21 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ (ಎಸಿಎಫ್) ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಕಿವಿಮಾತು ಹೇಳಿದರು.</p><p>ನೂತನವಾಗಿ ನೇಮಕಗೊಂಡು ತರಬೇತಿ ಪೂರೈಸಿ, ಸೇವೆಗೆ ಲಭ್ಯವಾದ 21 ಎಸಿಎಫ್ಗಳಿಗೆ ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ನಿಷ್ಠೆ ಮತ್ತು ದಕ್ಷತೆಯ ಪ್ರಮಾಣವಚನ ಬೋಧಿಸಿ ಅವರು ಮಾತನಾಡಿದರು.</p><p>‘ಎಲ್ಲ ಪದವೀಧರರಿಗೂ ಸರ್ಕಾರಿ ನೌಕರಿಯ ಅವಕಾಶ ಸಿಗುವುದಿಲ್ಲ. ನಿಮಗೆ ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು, ಅರಣ್ಯ ಸಂರಕ್ಷಣೆಗೆ ಶ್ರಮಿಸಿ. ಇದು ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ಪ್ರಕೃತಿ, ಪರಿಸರ, ಪಕ್ಷಿ-ಪ್ರಾಣಿ-ಕೀಟ ಸಂಕುಲ ಉಳಿಸುವ ಮತ್ತು ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸುವ ಅವಕಾಶ ನಿಮಗೆ ಸಿಕ್ಕಿದೆ. ಅರಣ್ಯವನ್ನು ರಕ್ಷಿಸಿ’ ಎಂದು ಕರೆ ನೀಡಿದರು.</p>.<p>ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌವ್ಹಾಣ್ ಕಾರ್ಯಕ್ರಮದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ‘ಅರಣ್ಯ ಪ್ರದೇಶ ಒತ್ತುವರಿ ಒಂದು ದೊಡ್ಡ ಸಮಸ್ಯೆ. ಆ ಒತ್ತುವರಿಗಳನ್ನು ತೆರವು ಮಾಡಿಸಲು ಆದ್ಯತೆ ನೀಡಿ’ ಎಂದು ನೂತನವಾಗಿ ನೇಮಕಗೊಂಡ 21 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ (ಎಸಿಎಫ್) ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಕಿವಿಮಾತು ಹೇಳಿದರು.</p><p>ನೂತನವಾಗಿ ನೇಮಕಗೊಂಡು ತರಬೇತಿ ಪೂರೈಸಿ, ಸೇವೆಗೆ ಲಭ್ಯವಾದ 21 ಎಸಿಎಫ್ಗಳಿಗೆ ಸುವರ್ಣ ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ನಿಷ್ಠೆ ಮತ್ತು ದಕ್ಷತೆಯ ಪ್ರಮಾಣವಚನ ಬೋಧಿಸಿ ಅವರು ಮಾತನಾಡಿದರು.</p><p>‘ಎಲ್ಲ ಪದವೀಧರರಿಗೂ ಸರ್ಕಾರಿ ನೌಕರಿಯ ಅವಕಾಶ ಸಿಗುವುದಿಲ್ಲ. ನಿಮಗೆ ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು, ಅರಣ್ಯ ಸಂರಕ್ಷಣೆಗೆ ಶ್ರಮಿಸಿ. ಇದು ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ಪ್ರಕೃತಿ, ಪರಿಸರ, ಪಕ್ಷಿ-ಪ್ರಾಣಿ-ಕೀಟ ಸಂಕುಲ ಉಳಿಸುವ ಮತ್ತು ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸುವ ಅವಕಾಶ ನಿಮಗೆ ಸಿಕ್ಕಿದೆ. ಅರಣ್ಯವನ್ನು ರಕ್ಷಿಸಿ’ ಎಂದು ಕರೆ ನೀಡಿದರು.</p>.<p>ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌವ್ಹಾಣ್ ಕಾರ್ಯಕ್ರಮದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>