‘ಈ ಅಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ 2022ರ ಮಾರ್ಚ್ 4ರಂದು ಸಚಿವಾಲಯ ಸೂಚಿಸಿತ್ತು. ಆದರೆ, ಅರಣ್ಯ ಇಲಾಖೆ ವರದಿ ಸಲ್ಲಿಸಿರಲಿಲ್ಲ. ಮತ್ತೊಮ್ಮೆ ಜ್ಞಾಪನಾ ಪತ್ರವನ್ನೂ ಕಳುಹಿಸಲಾಗಿತ್ತು’ ಎಂದು ಅವರು ಹೇಳಿದ್ದರು. ಬಳಿಕ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದ ಅರಣ್ಯ ಇಲಾಖೆ, ಲೋಪ ಎಸಗಿದ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕು ಎಂದು ಕೋರಿತ್ತು.