<p><strong>ಬೆಂಗಳೂರು</strong>: ‘ಕಬಿನಿ, ಬಂಡೀಪುರ ಸೇರಿದಂತೆ ಹುಲಿ ಸಂರಕ್ಷಿತ ಪ್ರದೇಶ ಗಳಲ್ಲಿ ಸಫಾರಿ ಬಂದ್ ಮಾಡಿರುವಂತೆ ಅರಣ್ಯ ಪ್ರದೇಶದಲ್ಲಿರುವ ಅಕ್ರಮ ರೆಸಾರ್ಟ್ಗಳನ್ನು ತೆರವುಗೊಳಿಸಬೇಕು’ ಎಂದು ಅರಣ್ಯ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ಸಮಾಜದ ಉಪಾಧ್ಯಕ್ಷ ವಲ್ಲಿಶ್ರೀ ವಾಸುಕಿ, ಕಾರ್ಯದರ್ಶಿ ಶಿವರಾಜ್ ಆಗ್ರಹಿಸಿದರು. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಬಿನಿ, ಬಂಡೀಪುರದ ವ್ಯಾಪ್ತಿ ಯಲ್ಲಿರುವ ಬಹುತೇಕ ರೆಸಾರ್ಟ್ಗಳು ರಾಜಕಾರಣಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೇರಿವೆ. ಈ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆಯಲ್ಲಿ ಫೈರ್ ಕ್ಯಾಂಪ್ ಮಾಡಿ ವನ್ಯಜೀವಿಗಳಿಗೆ ತೊಂದರೆ ಕೊಡುವ ಕೆಲಸಗಳು ನಡೆಯುತ್ತಿವೆ. ಆದ್ದರಿಂದ ಈ ಭಾಗದಲ್ಲಿ ಮಾನವ ವನ್ಯಜೀವಿಗಳ ಸಂಘರ್ಷಗಳು ಹೆಚ್ಚಾಗುತ್ತಿವೆ’ ಎಂದು ದೂರಿದರು. </p><p>‘ಎಚ್.ಡಿ. ಕೋಟೆ ಭಾಗದಲ್ಲಿ ಇತ್ತೀಚೆಗೆ ಮಾನವನ ಮೇಲೆ ದಾಳಿ ಮಾಡಿದ ಹುಲಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಅವುಗಳನ್ನು ಮತ್ತೆ ಕಾಡಿನಲ್ಲಿ ಬಿಡಲಾಗುತ್ತದೆಯೇ? ಆ ಹುಲಿಗಳ ಜೊತೆಗೆ ಏನು ಮಾಡುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಬಿನಿ, ಬಂಡೀಪುರ ಸೇರಿದಂತೆ ಹುಲಿ ಸಂರಕ್ಷಿತ ಪ್ರದೇಶ ಗಳಲ್ಲಿ ಸಫಾರಿ ಬಂದ್ ಮಾಡಿರುವಂತೆ ಅರಣ್ಯ ಪ್ರದೇಶದಲ್ಲಿರುವ ಅಕ್ರಮ ರೆಸಾರ್ಟ್ಗಳನ್ನು ತೆರವುಗೊಳಿಸಬೇಕು’ ಎಂದು ಅರಣ್ಯ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ಸಮಾಜದ ಉಪಾಧ್ಯಕ್ಷ ವಲ್ಲಿಶ್ರೀ ವಾಸುಕಿ, ಕಾರ್ಯದರ್ಶಿ ಶಿವರಾಜ್ ಆಗ್ರಹಿಸಿದರು. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಬಿನಿ, ಬಂಡೀಪುರದ ವ್ಯಾಪ್ತಿ ಯಲ್ಲಿರುವ ಬಹುತೇಕ ರೆಸಾರ್ಟ್ಗಳು ರಾಜಕಾರಣಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೇರಿವೆ. ಈ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆಯಲ್ಲಿ ಫೈರ್ ಕ್ಯಾಂಪ್ ಮಾಡಿ ವನ್ಯಜೀವಿಗಳಿಗೆ ತೊಂದರೆ ಕೊಡುವ ಕೆಲಸಗಳು ನಡೆಯುತ್ತಿವೆ. ಆದ್ದರಿಂದ ಈ ಭಾಗದಲ್ಲಿ ಮಾನವ ವನ್ಯಜೀವಿಗಳ ಸಂಘರ್ಷಗಳು ಹೆಚ್ಚಾಗುತ್ತಿವೆ’ ಎಂದು ದೂರಿದರು. </p><p>‘ಎಚ್.ಡಿ. ಕೋಟೆ ಭಾಗದಲ್ಲಿ ಇತ್ತೀಚೆಗೆ ಮಾನವನ ಮೇಲೆ ದಾಳಿ ಮಾಡಿದ ಹುಲಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಅವುಗಳನ್ನು ಮತ್ತೆ ಕಾಡಿನಲ್ಲಿ ಬಿಡಲಾಗುತ್ತದೆಯೇ? ಆ ಹುಲಿಗಳ ಜೊತೆಗೆ ಏನು ಮಾಡುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>