<p><strong>ಮೈಸೂರು: </strong>ಕೋವಿಡ್-19 ಲಾಕ್ಡೌನ್ನಿಂದಾಗಿ ಮುಚ್ಚಿರುವ ಶಾಲೆಗಳನ್ನು ಮೂರು ತಿಂಗಳು ತೆರೆಯಬೇಡಿ. ಅಕ್ಟೋಬರ್ನಿಂದ ಎರಡು ಶಿಫ್ಟ್ನಲ್ಲಿ ಶಾಲೆ ನಡೆಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಕೋವಿಡ್ ತಗುಲದಂತೆ ಎಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಿ. ಈ ವಿಷಯದಲ್ಲಿ ಆತುರ ಬೇಡ. ಕೊರೊನಾ ವೈರಸ್ಗೆ ಇನ್ನೂ ಲಸಿಕೆ ಸಿಕ್ಕಿಲ್ಲ. ದೈಹಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದೇ ಸದ್ಯಕ್ಕಿರುವ ಮದ್ದು ಎಂದರು.</p>.<p>ಕೋವಿಡ್-19 ಪೀಡಿತರಿಗೆ ಮಲೇರಿಯಾ ಔಷಧಿ ಕೊಡುತ್ತಿದ್ದಾರೆ. ಶಾಲೆ ತೆರೆದ ಫ್ರಾನ್ಸ್ನಲ್ಲಿ ಮಕ್ಕಳಿಗೆ ಕೋವಿಡ್ ಬಂದಿದೆ. ಎಚ್ಚರಿಕೆಯಿರಲಿ ಎಂದು ತಿಳಿಸಿದರು.</p>.<p>ಈ ಕಠಿಣ ಪರಿಸ್ಥಿತಿಯಲ್ಲಿ ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದರೆ 1 ಕೋಟಿ ಕುಟುಂಬಗಳಿಗೆ ತಲಾ ₹10 ಸಾವಿರ ನೀಡುತ್ತಿದ್ದೆ. ಪರಿವಾರ, ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಯತ್ನ ಆರಂಭವಾಗಿದ್ದು ಕೂಡ ನನ್ನ ಅವಧಿಯಲ್ಲೇ ಎಂದರು.</p>.<p>ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ ಕುರಿತಂತೆ ಹೈಕಮಾಂಡ್ ಜತೆ ಚರ್ಚಿಸಿರುವೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ಗೆ ನನ್ನ ವೈಯಕ್ತಿಕ ಅಭಿಪ್ರಾಯ ಹೇಳಿರುವೆ. ಎಚ್.ಡಿ. ದೇವೇಗೌಡರನ್ನು ಬೆಂಬಲಿಸುವ ಬಗ್ಗೆ ನಾನು ಏನು ಹೇಳುವುದಿಲ್ಲ. ಪಕ್ಷದಲ್ಲಿ ಈ ಬಗ್ಗೆ ಚರ್ಚೆಯೇ ನಡೆದಿಲ್ಲ. ಈ ವಿಷಯದಲ್ಲಿ ನಾನು ಹೈಕಮಾಂಡ್ ನಿಲುವಿಗೆ ಬದ್ಧನಾಗಿದ್ದೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕೋವಿಡ್-19 ಲಾಕ್ಡೌನ್ನಿಂದಾಗಿ ಮುಚ್ಚಿರುವ ಶಾಲೆಗಳನ್ನು ಮೂರು ತಿಂಗಳು ತೆರೆಯಬೇಡಿ. ಅಕ್ಟೋಬರ್ನಿಂದ ಎರಡು ಶಿಫ್ಟ್ನಲ್ಲಿ ಶಾಲೆ ನಡೆಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಕೋವಿಡ್ ತಗುಲದಂತೆ ಎಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಿ. ಈ ವಿಷಯದಲ್ಲಿ ಆತುರ ಬೇಡ. ಕೊರೊನಾ ವೈರಸ್ಗೆ ಇನ್ನೂ ಲಸಿಕೆ ಸಿಕ್ಕಿಲ್ಲ. ದೈಹಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದೇ ಸದ್ಯಕ್ಕಿರುವ ಮದ್ದು ಎಂದರು.</p>.<p>ಕೋವಿಡ್-19 ಪೀಡಿತರಿಗೆ ಮಲೇರಿಯಾ ಔಷಧಿ ಕೊಡುತ್ತಿದ್ದಾರೆ. ಶಾಲೆ ತೆರೆದ ಫ್ರಾನ್ಸ್ನಲ್ಲಿ ಮಕ್ಕಳಿಗೆ ಕೋವಿಡ್ ಬಂದಿದೆ. ಎಚ್ಚರಿಕೆಯಿರಲಿ ಎಂದು ತಿಳಿಸಿದರು.</p>.<p>ಈ ಕಠಿಣ ಪರಿಸ್ಥಿತಿಯಲ್ಲಿ ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದರೆ 1 ಕೋಟಿ ಕುಟುಂಬಗಳಿಗೆ ತಲಾ ₹10 ಸಾವಿರ ನೀಡುತ್ತಿದ್ದೆ. ಪರಿವಾರ, ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಯತ್ನ ಆರಂಭವಾಗಿದ್ದು ಕೂಡ ನನ್ನ ಅವಧಿಯಲ್ಲೇ ಎಂದರು.</p>.<p>ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ ಕುರಿತಂತೆ ಹೈಕಮಾಂಡ್ ಜತೆ ಚರ್ಚಿಸಿರುವೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ಗೆ ನನ್ನ ವೈಯಕ್ತಿಕ ಅಭಿಪ್ರಾಯ ಹೇಳಿರುವೆ. ಎಚ್.ಡಿ. ದೇವೇಗೌಡರನ್ನು ಬೆಂಬಲಿಸುವ ಬಗ್ಗೆ ನಾನು ಏನು ಹೇಳುವುದಿಲ್ಲ. ಪಕ್ಷದಲ್ಲಿ ಈ ಬಗ್ಗೆ ಚರ್ಚೆಯೇ ನಡೆದಿಲ್ಲ. ಈ ವಿಷಯದಲ್ಲಿ ನಾನು ಹೈಕಮಾಂಡ್ ನಿಲುವಿಗೆ ಬದ್ಧನಾಗಿದ್ದೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>