<p><strong>ಬೆಂಗಳೂರು: </strong>ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿ ಎಂದು ವಿಚಾರಣಾ ನ್ಯಾಯಾಲಯದಿಂದ ನಿರ್ಣಯಗೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, "ನನ್ನ ರಾಜಕೀಯ ಜೀವನ ಮತ್ತು ಭವಿಷ್ಯ ಹಾಳುಮಾಡಲು ಸಂಚು ರೂಪಿಸಿ ಈ ಪ್ರಕರಣವನ್ನು ದಾಖಲಿಸಲಾಗಿದೆ' ಎಂದು ವಿಚಾರಣಾ ನ್ಯಾಯಾಲಯಕ್ಕೆ ಅಲವತ್ತುಕೊಂಡರು.</p><p>ಪ್ರಕರಣದ ವಿಚಾರಣೆ ನಡೆಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಮಾನಿಸಿರುವ, "ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ" ನಡೆಸುವ ವಿಶೇಷ ನ್ಯಾಯಾಲಯ ಶನಿವಾರ ಶಿಕ್ಷೆಯ ಪ್ರಮಾಣವನ್ನು ನಿಗದಿಪಡಿಸಬೇಕಿದ್ದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಶನಿವಾರ ಬೆಳಿಗ್ಗೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.</p><p>ಈ ವೇಳೆ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ, ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ಪ್ರಜ್ವಲ್ ಮನವಿ ಮಾಡಿದರು.</p><p>"2024ರ ಪಾರ್ಲಿಮೆಂಟ್ ಚುನಾವಣೆಯ ಮತದಾನಕ್ಕೆ 6 ದಿನ ಬಾಕಿ ಇದೆ ಎನ್ನುವಾಗ ನನ್ನ ವಿರುದ್ಧ ದೂರು ದಾಖಲು ಮಾಡಲಾಯಿತು. ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಈ ರೀತಿ ಮಾಡಲಾಗಿದೆ" ಎಂದು ಪ್ರತಿಪಾದಿಸಿದರು.</p><p>"ನಾನು ನನ್ನ ತಂದೆ ತಾಯಿಯ ಮುಖ ನೋಡಿ 6 ತಿಂಗಳಾಗಿದೆ" ಎಂದು ಕಣ್ಣೀರಿಟ್ಟರು. </p><p>ಇದಕ್ಕೆ ನ್ಯಾಯಾಧೀಶರು, "ನಿಮ್ಮ ವಿದ್ಯಾರ್ಹತೆ ಏನು ಪ್ರಶ್ನಿಸಿದರು. ಉತ್ತರಿಸಿದ ಪ್ರಜ್ವಲ್, "ಬಿ.ಇ ಇನ್ ಮೆಕ್ಯಾನಿಕಲ್" ಎಂದು ಉತ್ತರಿಸಿದರು. </p><p>ಇದೇ ವೇಳೆ ಪ್ರಜ್ವಲ್ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲೆ ನಳಿನಾ ಮಾಯೇಗೌಡ, "ಪ್ರಜ್ವಲ್ ರೇವಣ್ಣ ಅವರ ತಾತ ಮಾಜಿ ಪ್ರಧಾನಿ. ಚುನಾವಣೆ ಸಂದರ್ಭದಲ್ಲಿ ಆರೋಪದ ವಿಡಿಯೋ ವೈರಲ್ ಮಾಡಲಾಗಿದೆ. ಇದರ ಹಿಂದೆ</p><p>ರಾಜಕೀಯ ದುರುದ್ದೇಶ ಅಡಗಿದೆ. ಸಂತ್ರಸ್ತ ಮಹಿಳೆಯ ಸಾಮಾನ್ಯ ಜೀವನಕ್ಕೆ ಯಾವುದೇ ತೊಂದರೆ ಆಗಿಲ್ಲ. ಇಂತಹ ಯುವ ರಾಜಕಾರಣಿಯನ್ನು ಜೀವನ ಪರ್ಯಂತ ಜೈಲಿನಲ್ಲಿ ಇಡುವುದು ಸರಿಯಲ್ಲ. ಹೀಗಾಗಿ, ಕನಿಷ್ಠ ಪ್ರಮಾಣದ ಶಿಕ್ಷೆ ವಿಧಿಸಬೇಕು" ಎಂದು ಮನವಿ ಮಾಡಿದರು. </p><p>ಇದನ್ನು ಆಲಿಸಿದ ನ್ಯಾಯಾಧೀಶರು ಮಧ್ಯಾಹ್ನ 2.45ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿ ಎಂದು ವಿಚಾರಣಾ ನ್ಯಾಯಾಲಯದಿಂದ ನಿರ್ಣಯಗೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, "ನನ್ನ ರಾಜಕೀಯ ಜೀವನ ಮತ್ತು ಭವಿಷ್ಯ ಹಾಳುಮಾಡಲು ಸಂಚು ರೂಪಿಸಿ ಈ ಪ್ರಕರಣವನ್ನು ದಾಖಲಿಸಲಾಗಿದೆ' ಎಂದು ವಿಚಾರಣಾ ನ್ಯಾಯಾಲಯಕ್ಕೆ ಅಲವತ್ತುಕೊಂಡರು.</p><p>ಪ್ರಕರಣದ ವಿಚಾರಣೆ ನಡೆಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಮಾನಿಸಿರುವ, "ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ" ನಡೆಸುವ ವಿಶೇಷ ನ್ಯಾಯಾಲಯ ಶನಿವಾರ ಶಿಕ್ಷೆಯ ಪ್ರಮಾಣವನ್ನು ನಿಗದಿಪಡಿಸಬೇಕಿದ್ದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಶನಿವಾರ ಬೆಳಿಗ್ಗೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.</p><p>ಈ ವೇಳೆ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ, ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ಪ್ರಜ್ವಲ್ ಮನವಿ ಮಾಡಿದರು.</p><p>"2024ರ ಪಾರ್ಲಿಮೆಂಟ್ ಚುನಾವಣೆಯ ಮತದಾನಕ್ಕೆ 6 ದಿನ ಬಾಕಿ ಇದೆ ಎನ್ನುವಾಗ ನನ್ನ ವಿರುದ್ಧ ದೂರು ದಾಖಲು ಮಾಡಲಾಯಿತು. ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಈ ರೀತಿ ಮಾಡಲಾಗಿದೆ" ಎಂದು ಪ್ರತಿಪಾದಿಸಿದರು.</p><p>"ನಾನು ನನ್ನ ತಂದೆ ತಾಯಿಯ ಮುಖ ನೋಡಿ 6 ತಿಂಗಳಾಗಿದೆ" ಎಂದು ಕಣ್ಣೀರಿಟ್ಟರು. </p><p>ಇದಕ್ಕೆ ನ್ಯಾಯಾಧೀಶರು, "ನಿಮ್ಮ ವಿದ್ಯಾರ್ಹತೆ ಏನು ಪ್ರಶ್ನಿಸಿದರು. ಉತ್ತರಿಸಿದ ಪ್ರಜ್ವಲ್, "ಬಿ.ಇ ಇನ್ ಮೆಕ್ಯಾನಿಕಲ್" ಎಂದು ಉತ್ತರಿಸಿದರು. </p><p>ಇದೇ ವೇಳೆ ಪ್ರಜ್ವಲ್ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲೆ ನಳಿನಾ ಮಾಯೇಗೌಡ, "ಪ್ರಜ್ವಲ್ ರೇವಣ್ಣ ಅವರ ತಾತ ಮಾಜಿ ಪ್ರಧಾನಿ. ಚುನಾವಣೆ ಸಂದರ್ಭದಲ್ಲಿ ಆರೋಪದ ವಿಡಿಯೋ ವೈರಲ್ ಮಾಡಲಾಗಿದೆ. ಇದರ ಹಿಂದೆ</p><p>ರಾಜಕೀಯ ದುರುದ್ದೇಶ ಅಡಗಿದೆ. ಸಂತ್ರಸ್ತ ಮಹಿಳೆಯ ಸಾಮಾನ್ಯ ಜೀವನಕ್ಕೆ ಯಾವುದೇ ತೊಂದರೆ ಆಗಿಲ್ಲ. ಇಂತಹ ಯುವ ರಾಜಕಾರಣಿಯನ್ನು ಜೀವನ ಪರ್ಯಂತ ಜೈಲಿನಲ್ಲಿ ಇಡುವುದು ಸರಿಯಲ್ಲ. ಹೀಗಾಗಿ, ಕನಿಷ್ಠ ಪ್ರಮಾಣದ ಶಿಕ್ಷೆ ವಿಧಿಸಬೇಕು" ಎಂದು ಮನವಿ ಮಾಡಿದರು. </p><p>ಇದನ್ನು ಆಲಿಸಿದ ನ್ಯಾಯಾಧೀಶರು ಮಧ್ಯಾಹ್ನ 2.45ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>