<p><strong>ಬೆಂಗಳೂರು:</strong> ಸಮ್ಮಿಶ್ರ ಸರ್ಕಾರದ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ದಲ್ಲಿ (ಸಿಎಂಪಿ) ರೈತರ ಸಾಲಮನ್ನಾ ವಿಷಯಕ್ಕೆ ಆದ್ಯತೆ ನೀಡಲು ಜೆಡಿಎಸ್– ಕಾಂಗ್ರೆಸ್ ಹಿರಿಯ ನಾಯಕರನ್ನೊಳಗೊಂಡ ಸಿಎಂಪಿ ಸಮಿತಿ ಒಮ್ಮತಕ್ಕೆ ಬಂದಿದೆ.</p>.<p>ಸಮಿತಿ ಅಧ್ಯಕ್ಷ ವೀರಪ್ಪ ಮೊಯಿಲಿ ಅಧ್ಯಕ್ಷತೆಯಲ್ಲಿ ಸಮಿತಿಯ ಮೊದಲ ಸಭೆ ಬುಧವಾರ ಸಂಜೆ ಇಲ್ಲಿ ನಡೆಯಿತು.</p>.<p>ಸುಮಾರು ಒಂದು ಗಂಟೆ ನಡೆದ ಸಭೆಯಲ್ಲಿ, ಎರಡೂ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಅಂಶಗಳನ್ನು ಸೇರಿಸಿ ಸಿಎಂಪಿ ಕರಡು ರಚಿಸುವ ಕುರಿತು ಉಭಯ ಪಕ್ಷಗಳ ನಾಯಕರು ಚರ್ಚೆ ನಡೆಸಿದರು.</p>.<p>ಸಭೆ ಬಳಿಕ ಮಾತನಾಡಿದ ಮೊಯಿಲಿ, ‘ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ. ಪಂಜಾಬ್ ಮತ್ತು ಕರ್ನಾಟಕದಲ್ಲಿ ಈಗಾಗಲೇ ಸಾಲಮನ್ನಾ ಮಾಡಲಾಗಿದೆ. ಪಂಜಾಬ್ನಲ್ಲಿ ಸಾಲ ಮನ್ನಾ ಸಂಪೂರ್ಣ ಯಶಸ್ವಿಯಾಗಿದ್ದು, ಅಲ್ಲಿಂದಲೂ ಮಾಹಿತಿ ಪಡೆಯುತ್ತೇವೆ’ ಎಂದರು.</p>.<p>‘ಸಮ್ಮಿಶ್ರ ಸರ್ಕಾರ ಒತ್ತು ನೀಡಬೇಕಾದ ವಿಷಯಗಳನ್ನು ಸೇರಿಸಿ ಕರಡು ಪ್ರಣಾಳಿಕೆ ರಚಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಎಲ್ಲ ಯೋಜನೆಗಳು ಮುಂದುವರಿಸುವ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ. ಇದೇ 25ರಂದು ಮತ್ತೆ ಸಭೆ ಸೇರಲಿದ್ದೇವೆ’ ಎಂದರು.</p>.<p>ಸಹಕಾರ ವಲಯದಲ್ಲಿನ ರೈತರ ₹9,000 ಕೋಟಿ ಸಾಲವನ್ನು ಮೊದಲ ಹಂತದಲ್ಲೆ ಮನ್ನಾ ಮಾಡಿದರೆ 40 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಹಿರಿಯ ನಾಗರಿಕರಿಗೆ ₹ 6,000 ಮಾಸಾಶನ ಜಾರಿಗೆ ಒತ್ತಾಯಿಸಿದ ಜೆಡಿಎಸ್ ನಾಯಕರು, ಗರ್ಭಿಣಿಯರ ಮತ್ತು ಬಾಣಂತಿಯರ ₹ 6,000 ಭತ್ಯೆ ನೀಡುವ ಬಗ್ಗೆಯೂ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಯಾಗಿ, ಈ ಹಿಂದಿನ ಸರ್ಕಾರದ ಎಲ್ಲ ಯೋಜನೆಗಳನ್ನು ಮುಂದುವರಿಸಲು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದರು ಎಂದೂ ಗೊತ್ತಾಗಿದೆ.</p>.<p>ಸಚಿವರಾದ ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್, ಎಚ್.ಡಿ. ರೇವಣ್ಣ, ಬಂಡೆಪ್ಪ ಕಾಶೆಂಪೂರ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಮ್ಮಿಶ್ರ ಸರ್ಕಾರದ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ದಲ್ಲಿ (ಸಿಎಂಪಿ) ರೈತರ ಸಾಲಮನ್ನಾ ವಿಷಯಕ್ಕೆ ಆದ್ಯತೆ ನೀಡಲು ಜೆಡಿಎಸ್– ಕಾಂಗ್ರೆಸ್ ಹಿರಿಯ ನಾಯಕರನ್ನೊಳಗೊಂಡ ಸಿಎಂಪಿ ಸಮಿತಿ ಒಮ್ಮತಕ್ಕೆ ಬಂದಿದೆ.</p>.<p>ಸಮಿತಿ ಅಧ್ಯಕ್ಷ ವೀರಪ್ಪ ಮೊಯಿಲಿ ಅಧ್ಯಕ್ಷತೆಯಲ್ಲಿ ಸಮಿತಿಯ ಮೊದಲ ಸಭೆ ಬುಧವಾರ ಸಂಜೆ ಇಲ್ಲಿ ನಡೆಯಿತು.</p>.<p>ಸುಮಾರು ಒಂದು ಗಂಟೆ ನಡೆದ ಸಭೆಯಲ್ಲಿ, ಎರಡೂ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಅಂಶಗಳನ್ನು ಸೇರಿಸಿ ಸಿಎಂಪಿ ಕರಡು ರಚಿಸುವ ಕುರಿತು ಉಭಯ ಪಕ್ಷಗಳ ನಾಯಕರು ಚರ್ಚೆ ನಡೆಸಿದರು.</p>.<p>ಸಭೆ ಬಳಿಕ ಮಾತನಾಡಿದ ಮೊಯಿಲಿ, ‘ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ. ಪಂಜಾಬ್ ಮತ್ತು ಕರ್ನಾಟಕದಲ್ಲಿ ಈಗಾಗಲೇ ಸಾಲಮನ್ನಾ ಮಾಡಲಾಗಿದೆ. ಪಂಜಾಬ್ನಲ್ಲಿ ಸಾಲ ಮನ್ನಾ ಸಂಪೂರ್ಣ ಯಶಸ್ವಿಯಾಗಿದ್ದು, ಅಲ್ಲಿಂದಲೂ ಮಾಹಿತಿ ಪಡೆಯುತ್ತೇವೆ’ ಎಂದರು.</p>.<p>‘ಸಮ್ಮಿಶ್ರ ಸರ್ಕಾರ ಒತ್ತು ನೀಡಬೇಕಾದ ವಿಷಯಗಳನ್ನು ಸೇರಿಸಿ ಕರಡು ಪ್ರಣಾಳಿಕೆ ರಚಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಎಲ್ಲ ಯೋಜನೆಗಳು ಮುಂದುವರಿಸುವ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ. ಇದೇ 25ರಂದು ಮತ್ತೆ ಸಭೆ ಸೇರಲಿದ್ದೇವೆ’ ಎಂದರು.</p>.<p>ಸಹಕಾರ ವಲಯದಲ್ಲಿನ ರೈತರ ₹9,000 ಕೋಟಿ ಸಾಲವನ್ನು ಮೊದಲ ಹಂತದಲ್ಲೆ ಮನ್ನಾ ಮಾಡಿದರೆ 40 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಹಿರಿಯ ನಾಗರಿಕರಿಗೆ ₹ 6,000 ಮಾಸಾಶನ ಜಾರಿಗೆ ಒತ್ತಾಯಿಸಿದ ಜೆಡಿಎಸ್ ನಾಯಕರು, ಗರ್ಭಿಣಿಯರ ಮತ್ತು ಬಾಣಂತಿಯರ ₹ 6,000 ಭತ್ಯೆ ನೀಡುವ ಬಗ್ಗೆಯೂ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಯಾಗಿ, ಈ ಹಿಂದಿನ ಸರ್ಕಾರದ ಎಲ್ಲ ಯೋಜನೆಗಳನ್ನು ಮುಂದುವರಿಸಲು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದರು ಎಂದೂ ಗೊತ್ತಾಗಿದೆ.</p>.<p>ಸಚಿವರಾದ ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್, ಎಚ್.ಡಿ. ರೇವಣ್ಣ, ಬಂಡೆಪ್ಪ ಕಾಶೆಂಪೂರ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>