<p><strong>ಚಿತ್ರದುರ್ಗ:</strong> ‘ಒಳ ಮೀಸಲಾತಿ ಅನ್ವಯ ವಿಶ್ವವಿದ್ಯಾಲಯದ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುವಾಗ ಇಡೀ ವಿ.ವಿ.ಯನ್ನೇ ಘಟಕವನ್ನಾಗಿ ಪರಿಗಣಿಸುವ ನಿರ್ಧಾರ ಕೈಗೊಂಡಿರುವುದು ಸಂವಿಧಾನ ವಿರೋಧಿ ನಡೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಟೀಕಿಸಿದ್ದಾರೆ.</p>.<p>‘ವಿ.ವಿ.ಯನ್ನೇ ಘಟಕವಾಗಿ ಪರಿಗಣಿಸುವ ಕುರಿತು ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಕಟಿಸಿದ್ದಾರೆ. ಸಂಪುಟ ಉಪ ಸಮಿತಿಯ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದುಕೊಳ್ಳಬೇಕು’ ಎಂದು ಬುಧವಾರ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಲವು ದಶಕಗಳ ಹೋರಾಟದ ನಂತರ ಈಗಷ್ಟೇ ಒಳಮೀಸಲಾತಿ ಪಡೆದುಕೊಳ್ಳಲಾಗಿದೆ. ‘ಎ’ ವರ್ಗದಲ್ಲಿರುವ ದಲಿತ ಎಡಗೈ ಸಮುದಾಯದವರಿಗೆ ನ್ಯಾಯಯುತವಾಗಿ ಹುದ್ದೆಗಳು ದೊರೆತರೆ ಕೊಟ್ಟೆಕಿಚ್ಚು ಪಡುವುದು ಸಾಮಾಜಿಕ ನ್ಯಾಯವಲ್ಲ’ ಎಂದರು.</p>.<p>‘ರಾಜ್ಯದ ವಿ.ವಿ.ಗಳಲ್ಲಿ ಯಾವ ಜಾತಿಯವರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಬಹಿರಂಗಗೊಳಿಸಿದರೆ ಸತ್ಯ ತಿಳಿಯುತ್ತದೆ. ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾದಿಗ ವಿರೋಧಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಯು ಕೂಡಲೇ ಮಧ್ಯಪ್ರವೇಶಿಸಿ ಗೊಂದಲ ಸರಿಪಡಿಸಬೇಕು’ ಎಂದು ಕೋರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಒಳ ಮೀಸಲಾತಿ ಅನ್ವಯ ವಿಶ್ವವಿದ್ಯಾಲಯದ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುವಾಗ ಇಡೀ ವಿ.ವಿ.ಯನ್ನೇ ಘಟಕವನ್ನಾಗಿ ಪರಿಗಣಿಸುವ ನಿರ್ಧಾರ ಕೈಗೊಂಡಿರುವುದು ಸಂವಿಧಾನ ವಿರೋಧಿ ನಡೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಟೀಕಿಸಿದ್ದಾರೆ.</p>.<p>‘ವಿ.ವಿ.ಯನ್ನೇ ಘಟಕವಾಗಿ ಪರಿಗಣಿಸುವ ಕುರಿತು ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಕಟಿಸಿದ್ದಾರೆ. ಸಂಪುಟ ಉಪ ಸಮಿತಿಯ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದುಕೊಳ್ಳಬೇಕು’ ಎಂದು ಬುಧವಾರ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಲವು ದಶಕಗಳ ಹೋರಾಟದ ನಂತರ ಈಗಷ್ಟೇ ಒಳಮೀಸಲಾತಿ ಪಡೆದುಕೊಳ್ಳಲಾಗಿದೆ. ‘ಎ’ ವರ್ಗದಲ್ಲಿರುವ ದಲಿತ ಎಡಗೈ ಸಮುದಾಯದವರಿಗೆ ನ್ಯಾಯಯುತವಾಗಿ ಹುದ್ದೆಗಳು ದೊರೆತರೆ ಕೊಟ್ಟೆಕಿಚ್ಚು ಪಡುವುದು ಸಾಮಾಜಿಕ ನ್ಯಾಯವಲ್ಲ’ ಎಂದರು.</p>.<p>‘ರಾಜ್ಯದ ವಿ.ವಿ.ಗಳಲ್ಲಿ ಯಾವ ಜಾತಿಯವರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಬಹಿರಂಗಗೊಳಿಸಿದರೆ ಸತ್ಯ ತಿಳಿಯುತ್ತದೆ. ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾದಿಗ ವಿರೋಧಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಯು ಕೂಡಲೇ ಮಧ್ಯಪ್ರವೇಶಿಸಿ ಗೊಂದಲ ಸರಿಪಡಿಸಬೇಕು’ ಎಂದು ಕೋರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>