<p><strong>ದಾವಣಗೆರೆ:</strong> ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ (90) ಅವರು ಶನಿವಾರ ಬೆಳಿಗ್ಗೆ ನಿಧನರಾದರು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. </p><p>ಇವರಿಗೆ ಚಿತ್ರ ನಿರ್ಮಾಪಕ ಯಜಮಾನ್ ಮೋತಿ ರಾಜೇಂದ್ರ ಸೇರಿದಂತೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. </p><p>1989ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ 29 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.</p><p>2004ರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. </p><p>ಮೋತಿ ವೀರಣ್ಣ ಅವರ ಶಿಸ್ತು, ನಡವಳಿಕೆ ಮತ್ತು ಜಮೀನ್ದಾರಿ ಮನೆತನದ ಹಿನ್ನೆಲೆಯ ಕಾರಣಕ್ಕೆ ಅವರ ಹೆಸರಿನೊಂದಿಗೆ ‘ಯಜಮಾನ್’ ಎಂಬ ವಿಶೇಷಣ ಸೇರಿಕೊಂಡಿತ್ತು. </p><p>ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. </p><p>ದಾವಣಗೆರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷರಾಗಿ, ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ನ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.</p><p><strong>ಅಂತ್ಯಕ್ರಿಯೆ:</strong></p><p>ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಅವರ ಮಾತೆ ಗೌರಿ ನಿವಾಸದಲ್ಲಿ ಮೃತದೇಹದ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶನಿವಾರ ಸಂಜೆ ನಾಲ್ಕು ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.</p>.ಉಡುಪಿ: ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ (90) ಅವರು ಶನಿವಾರ ಬೆಳಿಗ್ಗೆ ನಿಧನರಾದರು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. </p><p>ಇವರಿಗೆ ಚಿತ್ರ ನಿರ್ಮಾಪಕ ಯಜಮಾನ್ ಮೋತಿ ರಾಜೇಂದ್ರ ಸೇರಿದಂತೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. </p><p>1989ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ 29 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.</p><p>2004ರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. </p><p>ಮೋತಿ ವೀರಣ್ಣ ಅವರ ಶಿಸ್ತು, ನಡವಳಿಕೆ ಮತ್ತು ಜಮೀನ್ದಾರಿ ಮನೆತನದ ಹಿನ್ನೆಲೆಯ ಕಾರಣಕ್ಕೆ ಅವರ ಹೆಸರಿನೊಂದಿಗೆ ‘ಯಜಮಾನ್’ ಎಂಬ ವಿಶೇಷಣ ಸೇರಿಕೊಂಡಿತ್ತು. </p><p>ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. </p><p>ದಾವಣಗೆರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷರಾಗಿ, ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ನ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.</p><p><strong>ಅಂತ್ಯಕ್ರಿಯೆ:</strong></p><p>ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಅವರ ಮಾತೆ ಗೌರಿ ನಿವಾಸದಲ್ಲಿ ಮೃತದೇಹದ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶನಿವಾರ ಸಂಜೆ ನಾಲ್ಕು ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.</p>.ಉಡುಪಿ: ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>