<p><strong>ಯಾದಗಿರಿ:</strong>‘ಶಹಾಪುರ ಬಸ್ ನಿಲ್ದಾಣದಿಂದ ತನ್ನನ್ನು ಬಲವಂತವಾಗಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ನಗ್ನಗೊಳಿಸಿ ನಾಲ್ವರು ಹಲ್ಲೆ ಮಾಡಿದ್ದಾರೆ. ಅವರಲ್ಲಿ ಇಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಈ ಘಟನೆ ನಡೆದಿದೆ ಎಂದುಸಂತ್ರಸ್ತ ಮಹಿಳೆ ಹೇಳಿದ್ದಾಳೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ತಿಳಿಸಿದರು.</p>.<p>ಸಂತ್ರಸ್ತ ಮಹಿಳೆಯನ್ನು ಬುಧವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಿಂದ ₹3 ಲಕ್ಷ ಸಾಲ ಕೊಡಿಸಿ ಜೀವನ ನಿರ್ವಹಣೆಗೆ ಆ ಮಹಿಳೆಗೆ ಅನುಕೂಲ ಮಾಡಿಕೊಡಲಾಗುವುದು’ ಎಂದರು.</p>.<p>‘ಜಿಲ್ಲಾಧಿಕಾರಿ ಅವರು ಸಂತ್ರಸ್ತೆಗೆ ಸಹಾಯಧನ ನೀಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಎಸ್ಪಿ ಅವರಿಗೆ ತಿಳಿಸಿದ್ದೇನೆ’ ಎಂದು ಹೇಳಿದರು.</p>.<p>ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ವಿಡಿಯೊ ಇತ್ತೀಚಿಗಷ್ಟೇ ವೈರಲ್ ಆಗಿತ್ತು. ಪೊಲೀಸರು ಸಂತ್ರಸ್ತೆಯನ್ನು ಪತ್ತೆಹಚ್ಚಿ, ನಾಲ್ವರು ಆರೋ<br />ಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ.</p>.<p class="Subhead">416 ಸ್ವಯಂ ಪ್ರೇರಿತ ದೂರು ದಾಖಲು:</p>.<p>‘ರಾಜ್ಯದಲ್ಲಿ ಮಾರ್ಚ್ನಿಂದ ಸೆಪ್ಟೆಂಬರ್ ವರೆಗೆ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ416 ಸ್ವಯಂ ಪ್ರೇರಿತ ಪ್ರಕರಣಗಳನ್ನು ರಾಜ್ಯಮಹಿಳಾ ಅಯೋಗ ದಾಖಲಿಸಿಕೊಂಡಿದೆ. ಒಂದು ವರ್ಷದಲ್ಲಿ 1,600 ಪ್ರಕರಣ ಇತ್ಯರ್ಥ ಪಡಿಸಲಾಗಿದೆ’ ಎಂದುಆರ್. ಪ್ರಮೀಳಾ ನಾಯ್ಡು ತಿಳಿಸಿದರು.</p>.<p>‘ದೌರ್ಜನ್ಯ, ಪ್ರೇಮ ಪ್ರಕರಣಗಳು ಸೇರಿವೆ. ಬೆಂಗಳೂರಿನ ಕೆಲಸದ ಸ್ಥಳದಲ್ಲಿ ಮಹಿಳೆ ಮೇಲೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದ ಅವರು, ‘ಮಹಿಳೆಯರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಮಹಿಳಾ ಆಯೋಗವನ್ನು ತಕ್ಷಣವೇ ಸಂಪರ್ಕಿಸಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong>‘ಶಹಾಪುರ ಬಸ್ ನಿಲ್ದಾಣದಿಂದ ತನ್ನನ್ನು ಬಲವಂತವಾಗಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ನಗ್ನಗೊಳಿಸಿ ನಾಲ್ವರು ಹಲ್ಲೆ ಮಾಡಿದ್ದಾರೆ. ಅವರಲ್ಲಿ ಇಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಈ ಘಟನೆ ನಡೆದಿದೆ ಎಂದುಸಂತ್ರಸ್ತ ಮಹಿಳೆ ಹೇಳಿದ್ದಾಳೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ತಿಳಿಸಿದರು.</p>.<p>ಸಂತ್ರಸ್ತ ಮಹಿಳೆಯನ್ನು ಬುಧವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಿಂದ ₹3 ಲಕ್ಷ ಸಾಲ ಕೊಡಿಸಿ ಜೀವನ ನಿರ್ವಹಣೆಗೆ ಆ ಮಹಿಳೆಗೆ ಅನುಕೂಲ ಮಾಡಿಕೊಡಲಾಗುವುದು’ ಎಂದರು.</p>.<p>‘ಜಿಲ್ಲಾಧಿಕಾರಿ ಅವರು ಸಂತ್ರಸ್ತೆಗೆ ಸಹಾಯಧನ ನೀಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಎಸ್ಪಿ ಅವರಿಗೆ ತಿಳಿಸಿದ್ದೇನೆ’ ಎಂದು ಹೇಳಿದರು.</p>.<p>ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ವಿಡಿಯೊ ಇತ್ತೀಚಿಗಷ್ಟೇ ವೈರಲ್ ಆಗಿತ್ತು. ಪೊಲೀಸರು ಸಂತ್ರಸ್ತೆಯನ್ನು ಪತ್ತೆಹಚ್ಚಿ, ನಾಲ್ವರು ಆರೋ<br />ಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ.</p>.<p class="Subhead">416 ಸ್ವಯಂ ಪ್ರೇರಿತ ದೂರು ದಾಖಲು:</p>.<p>‘ರಾಜ್ಯದಲ್ಲಿ ಮಾರ್ಚ್ನಿಂದ ಸೆಪ್ಟೆಂಬರ್ ವರೆಗೆ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ416 ಸ್ವಯಂ ಪ್ರೇರಿತ ಪ್ರಕರಣಗಳನ್ನು ರಾಜ್ಯಮಹಿಳಾ ಅಯೋಗ ದಾಖಲಿಸಿಕೊಂಡಿದೆ. ಒಂದು ವರ್ಷದಲ್ಲಿ 1,600 ಪ್ರಕರಣ ಇತ್ಯರ್ಥ ಪಡಿಸಲಾಗಿದೆ’ ಎಂದುಆರ್. ಪ್ರಮೀಳಾ ನಾಯ್ಡು ತಿಳಿಸಿದರು.</p>.<p>‘ದೌರ್ಜನ್ಯ, ಪ್ರೇಮ ಪ್ರಕರಣಗಳು ಸೇರಿವೆ. ಬೆಂಗಳೂರಿನ ಕೆಲಸದ ಸ್ಥಳದಲ್ಲಿ ಮಹಿಳೆ ಮೇಲೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದ ಅವರು, ‘ಮಹಿಳೆಯರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಮಹಿಳಾ ಆಯೋಗವನ್ನು ತಕ್ಷಣವೇ ಸಂಪರ್ಕಿಸಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>