<p><strong>ಬೆಂಗಳೂರು</strong>: ದೇವನಹಳ್ಳಿ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಫಾಕ್ಸ್ಕಾನ್ ಘಟಕ ಉದ್ಘಾಟನೆಗೆ ಸಿದ್ಧವಾಗಿದ್ದು, ಜೂನ್ ತಿಂಗಳ ಮೊದಲ ವಾರ ಐಫೋನ್ಗಳ ಪೂರೈಕೆ ಆರಂಭಿಸಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.</p>.<p>ಇದು ಕೇವಲ ಉತ್ಪಾದನಾ ಘಟಕವಲ್ಲ, ಒಂದು ಕಾರ್ಯತಂತ್ರದ ಬದಲಾವಣೆಯ ಸಂಕೇತ. ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಹಾಗೂ ಸುಂಕದ ಒತ್ತಡಗಳ ನಡುವೆಯೂ ಭಾರತವು ಆ್ಯಪಲ್ನ ಆದ್ಯತೆಯ ಉತ್ಪಾದನಾ ಕೇಂದ್ರವಾಗಿ ಬದಲಾಗುತ್ತಿದೆ. ಈ ಬೆಳವಣಿಗೆ ಜಾಗತಿಕ ಉತ್ಪಾದನೆಯಲ್ಲಿ ಕರ್ನಾಟಕದ ಸ್ಥಾನವನ್ನು ಬಲಪಡಿಸುತ್ತದೆ. ಪಾಲುದಾರರ ಹಿತಾಸಕ್ತಿಗೆ ಧಕ್ಕೆಯಾಗದ ರೀತಿಯಲ್ಲಿ ಹೆಚ್ಚಿನ ವಿದೇಶಿ ಹೂಡಿಕೆಗೆ ಬಾಗಿಲು ತೆರೆಯುತ್ತದೆ ಎಂದಿದ್ದಾರೆ.</p>.<p>‘ಜೂನ್ ನಂತರ ಅಮೆರಿಕದಲ್ಲಿ ಮಾರಾಟವಾಗುವ ಹೆಚ್ಚಿನ ಐಫೋನ್ಗಳು ಭಾರತದಲ್ಲಿ ತಯಾರಿಸಲ್ಪಡುತ್ತವೆ’ ಎನ್ನುವುದನ್ನು ಆ್ಯಪಲ್ ಸಿಇಒ ಟಿಮ್ಕುಕ್ ಅವರು ದೃಢಪಡಿಸಿದ್ದಾರೆ. ಒಬ್ಬ ಕನ್ನಡಿಗನಾಗಿ, ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ’ ಎಂದು ಸಚಿವ ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇವನಹಳ್ಳಿ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಫಾಕ್ಸ್ಕಾನ್ ಘಟಕ ಉದ್ಘಾಟನೆಗೆ ಸಿದ್ಧವಾಗಿದ್ದು, ಜೂನ್ ತಿಂಗಳ ಮೊದಲ ವಾರ ಐಫೋನ್ಗಳ ಪೂರೈಕೆ ಆರಂಭಿಸಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.</p>.<p>ಇದು ಕೇವಲ ಉತ್ಪಾದನಾ ಘಟಕವಲ್ಲ, ಒಂದು ಕಾರ್ಯತಂತ್ರದ ಬದಲಾವಣೆಯ ಸಂಕೇತ. ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಹಾಗೂ ಸುಂಕದ ಒತ್ತಡಗಳ ನಡುವೆಯೂ ಭಾರತವು ಆ್ಯಪಲ್ನ ಆದ್ಯತೆಯ ಉತ್ಪಾದನಾ ಕೇಂದ್ರವಾಗಿ ಬದಲಾಗುತ್ತಿದೆ. ಈ ಬೆಳವಣಿಗೆ ಜಾಗತಿಕ ಉತ್ಪಾದನೆಯಲ್ಲಿ ಕರ್ನಾಟಕದ ಸ್ಥಾನವನ್ನು ಬಲಪಡಿಸುತ್ತದೆ. ಪಾಲುದಾರರ ಹಿತಾಸಕ್ತಿಗೆ ಧಕ್ಕೆಯಾಗದ ರೀತಿಯಲ್ಲಿ ಹೆಚ್ಚಿನ ವಿದೇಶಿ ಹೂಡಿಕೆಗೆ ಬಾಗಿಲು ತೆರೆಯುತ್ತದೆ ಎಂದಿದ್ದಾರೆ.</p>.<p>‘ಜೂನ್ ನಂತರ ಅಮೆರಿಕದಲ್ಲಿ ಮಾರಾಟವಾಗುವ ಹೆಚ್ಚಿನ ಐಫೋನ್ಗಳು ಭಾರತದಲ್ಲಿ ತಯಾರಿಸಲ್ಪಡುತ್ತವೆ’ ಎನ್ನುವುದನ್ನು ಆ್ಯಪಲ್ ಸಿಇಒ ಟಿಮ್ಕುಕ್ ಅವರು ದೃಢಪಡಿಸಿದ್ದಾರೆ. ಒಬ್ಬ ಕನ್ನಡಿಗನಾಗಿ, ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ’ ಎಂದು ಸಚಿವ ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>