<p><strong>ಬೆಂಗಳೂರು</strong>: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಲೋಕಾಯುಕ್ತ ಪೋಲೀಸರು ತನಿಖೆ ತೀವ್ರಗೊಳಿಸಿದ್ದು, ಲಂಚ ನೀಡಿದ್ದ ಅಧಿಕಾರಿಗಳ ವಿವರವನ್ನು ಕಲೆ ಹಾಕಿದ್ದಾರೆ.</p>.<p>‘ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ಹಣ ನೀಡಿದರೆ ಮುಚ್ಚಿಹಾಕುತ್ತೇವೆ ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಮಿಷ ಒಡ್ಡಲಾಗುತ್ತಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನಿವೃತ್ತ ಹೆಡ್ಕಾನ್ಸ್ಟೆಬಲ್ ನಿಂಗಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಲಂಚ ನೀಡಿರುವ ಅಧಿಕಾರಿಗಳನ್ನು ಗುರುತಿಸಿದ್ದು, ವಿಚಾರಣೆಗೆ ಕರೆಯಲು ಸಿದ್ಧತೆ ನಡೆಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಕೆಲವು ಅಧಿಕಾರಿಗಳು ಪರಸ್ಪರರ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಎಲ್ಲರನ್ನೂ ಕರೆದು ಲೋಕಾಯುಕ್ತರು ಮಾತನಾಡಿದ್ದು, ‘ಪ್ರಾಮಾಣಿಕವಾಗಿ ಕೆಲಸ ಮಾಡುವುದಿದ್ದರಷ್ಟೇ ಈ ಸಂಸ್ಥೆಯಲ್ಲಿರಿ' ಎಂದು ತಾಕೀತು ಮಾಡಿದ್ದಾರೆ. ಕೆಲ ಅಧಿಕಾರಿಗಳು ತಮ್ಮನ್ನು ಲೋಕಾಯುಕ್ತದ ಸೇವೆಯಿಂದ ಬಿಡುಗಡೆಗೊಳಿಸಿ ಎಂದು ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ’ ಎಂದು ಮಾಹಿತಿ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಲೋಕಾಯುಕ್ತ ಪೋಲೀಸರು ತನಿಖೆ ತೀವ್ರಗೊಳಿಸಿದ್ದು, ಲಂಚ ನೀಡಿದ್ದ ಅಧಿಕಾರಿಗಳ ವಿವರವನ್ನು ಕಲೆ ಹಾಕಿದ್ದಾರೆ.</p>.<p>‘ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ಹಣ ನೀಡಿದರೆ ಮುಚ್ಚಿಹಾಕುತ್ತೇವೆ ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಮಿಷ ಒಡ್ಡಲಾಗುತ್ತಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನಿವೃತ್ತ ಹೆಡ್ಕಾನ್ಸ್ಟೆಬಲ್ ನಿಂಗಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಲಂಚ ನೀಡಿರುವ ಅಧಿಕಾರಿಗಳನ್ನು ಗುರುತಿಸಿದ್ದು, ವಿಚಾರಣೆಗೆ ಕರೆಯಲು ಸಿದ್ಧತೆ ನಡೆಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಕೆಲವು ಅಧಿಕಾರಿಗಳು ಪರಸ್ಪರರ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಎಲ್ಲರನ್ನೂ ಕರೆದು ಲೋಕಾಯುಕ್ತರು ಮಾತನಾಡಿದ್ದು, ‘ಪ್ರಾಮಾಣಿಕವಾಗಿ ಕೆಲಸ ಮಾಡುವುದಿದ್ದರಷ್ಟೇ ಈ ಸಂಸ್ಥೆಯಲ್ಲಿರಿ' ಎಂದು ತಾಕೀತು ಮಾಡಿದ್ದಾರೆ. ಕೆಲ ಅಧಿಕಾರಿಗಳು ತಮ್ಮನ್ನು ಲೋಕಾಯುಕ್ತದ ಸೇವೆಯಿಂದ ಬಿಡುಗಡೆಗೊಳಿಸಿ ಎಂದು ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ’ ಎಂದು ಮಾಹಿತಿ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>