<p><strong>ಹಾವೇರಿ:</strong> ‘ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಬೇಕು. ಏಕೆಂದರೆ, ಬಡ ಕುಟುಂಬದ ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಾರೆ’ ಎಂದುವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.</p>.<p>‘ಶ್ರೀಮಂತರ ಮಕ್ಕಳು ಇಂಗ್ಲಿಷ್ ಮೀಡಿಯಂ ನಲ್ಲಿ ಕಲಿಯುತ್ತಿದ್ದಾರೆ. ಪಾಸ್ ವಿತರಣೆಯ ಕುರಿತು ಸಿಎಂ ಎಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸುತ್ತೇನೆ’ ಎಂದರು.</p>.<p>‘ಪ್ರತ್ಯೇಕಉತ್ತರ ಕರ್ನಾಟಕ ರಾಜ್ಯದ ಕೂಗು ಅಸಂಭದ್ಧ’ ಎಂದು ಸುದ್ದಿಗಾರರೊಂದಿಗೆ ಇಲ್ಲಿ ಗುರುವಾರ ಮಾತನಾಡಿದ ಅವರು, ಈ ಕುರಿತು ‘ಆಭಾಗದ ಶಾಸಕರು, ಸಚಿವರ ಜೊತೆ ಸಭೆ ಸೇರಿ ಚರ್ಚಿಸುತ್ತೇನೆ. ಆ ಬಳಿಕ ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲೇ ಸಭೆ ಮಾಡಿ ಆಭಾಗದ ಬೇಡಿಕೆಗಳ ಬಗ್ಗೆ ಚರ್ಚಿಸುತ್ತೇವೆ. ಅಲ್ಲದೇ, ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು’ ಎಂದರು.</p>.<p>‘ಸರ್ಕಾರಿ ಶಾಲೆ ಅಕ್ಕಪಕ್ಕದಲ್ಲೇ ಖಾಸಗಿ ಶಾಲೆ ತೆರೆಯಲು ಅವಕಾಶ ನೀಡಿರುವುದು ತಪ್ಪು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p>.<p>‘ವಿಧಾನ ಸಭೆಯ ಮಾಜಿ ವಿಧಾನ ಸಭಾಧ್ಯಕ್ಷ ಕೆ. ಬಿ. ಕೋಳಿವಾಡ ಅವರು ಸರ್ಕಾರಿ ಪೀಠೋಪಕರಣ ಮನೆಗೆ ಒಯ್ದಿರುವುದು ತಪ್ಪು. ಕಾನೂನು ಪ್ರಕಾರ ಹಣ ಪಾವತಿ ಮಾಡಿ ಕೊಂಡೊಯ್ದಿದ್ದರೆ ತಪ್ಪಾಗುತ್ತಿರಲಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಬೇಕು. ಏಕೆಂದರೆ, ಬಡ ಕುಟುಂಬದ ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುತ್ತಾರೆ’ ಎಂದುವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.</p>.<p>‘ಶ್ರೀಮಂತರ ಮಕ್ಕಳು ಇಂಗ್ಲಿಷ್ ಮೀಡಿಯಂ ನಲ್ಲಿ ಕಲಿಯುತ್ತಿದ್ದಾರೆ. ಪಾಸ್ ವಿತರಣೆಯ ಕುರಿತು ಸಿಎಂ ಎಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚಿಸುತ್ತೇನೆ’ ಎಂದರು.</p>.<p>‘ಪ್ರತ್ಯೇಕಉತ್ತರ ಕರ್ನಾಟಕ ರಾಜ್ಯದ ಕೂಗು ಅಸಂಭದ್ಧ’ ಎಂದು ಸುದ್ದಿಗಾರರೊಂದಿಗೆ ಇಲ್ಲಿ ಗುರುವಾರ ಮಾತನಾಡಿದ ಅವರು, ಈ ಕುರಿತು ‘ಆಭಾಗದ ಶಾಸಕರು, ಸಚಿವರ ಜೊತೆ ಸಭೆ ಸೇರಿ ಚರ್ಚಿಸುತ್ತೇನೆ. ಆ ಬಳಿಕ ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲೇ ಸಭೆ ಮಾಡಿ ಆಭಾಗದ ಬೇಡಿಕೆಗಳ ಬಗ್ಗೆ ಚರ್ಚಿಸುತ್ತೇವೆ. ಅಲ್ಲದೇ, ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು’ ಎಂದರು.</p>.<p>‘ಸರ್ಕಾರಿ ಶಾಲೆ ಅಕ್ಕಪಕ್ಕದಲ್ಲೇ ಖಾಸಗಿ ಶಾಲೆ ತೆರೆಯಲು ಅವಕಾಶ ನೀಡಿರುವುದು ತಪ್ಪು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p>.<p>‘ವಿಧಾನ ಸಭೆಯ ಮಾಜಿ ವಿಧಾನ ಸಭಾಧ್ಯಕ್ಷ ಕೆ. ಬಿ. ಕೋಳಿವಾಡ ಅವರು ಸರ್ಕಾರಿ ಪೀಠೋಪಕರಣ ಮನೆಗೆ ಒಯ್ದಿರುವುದು ತಪ್ಪು. ಕಾನೂನು ಪ್ರಕಾರ ಹಣ ಪಾವತಿ ಮಾಡಿ ಕೊಂಡೊಯ್ದಿದ್ದರೆ ತಪ್ಪಾಗುತ್ತಿರಲಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>