<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ’ಯಡಿ ಮೂರು ತಿಂಗಳು ಉಚಿತವಾಗಿ ಅಡುಗೆ ಅನಿಲ ಸಿಲಿಂಡರ್ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಕೋವಿಡ್–19 ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಅಡುಗೆ ಅನಿಲದ ಉಚಿತ ವಿತರಣೆಗೆ ಕ್ರಮ ತೆಗೆದುಕೊಂಡಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರವೂ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ವಿತರಿಸಲಿದೆ ಎಂದರು.</p>.<p>ಇದಕ್ಕಾಗಿ ಸರ್ಕಾರ ₹27.52 ಕೋಟಿ ಭರಿಸಲಿದ್ದು, ಸುಮಾರು 1 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದೆ ಎಂದು ಮಾಧುಸ್ವಾಮಿ ತಿಳಿಸಿದರು.</p>.<p class="Subhead">ಏಳನೇ ವೇತನ ಆಯೋಗದ ಶಿಫಾರಸ್ಸು ಜಾರಿ: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ<br />ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ಬೊಕ್ಕಸಕ್ಕೆ ₹137 ಕೋಟಿ ಹೊರೆಯಾಗಲಿದೆ. ಸುಮಾರು 2,800 ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಇದರ ಪ್ರಯೋಜನ ಸಿಗಲಿದೆ ಎಂದು ಅವರು ಹೇಳಿದರು.</p>.<p class="Subhead"><strong>ಸಂಪುಟ ಸಭೆಯ ಮುಖ್ಯಾಂಶಗಳು</strong></p>.<p><span class="Bullet">*</span>ಮೈಸೂರು ಮಿನರಲ್ಸ್ ಲಿಮಿಟೆಡ್ಗೆ ಸೇರಿದ ಜಾಗವು ಕಂದಾಯ ಇಲಾಖೆಗೆ ಸೇರಿದ್ದೋ ಅಥವಾ ಅರಣ್ಯ ಇಲಾಖೆಗೆ ಸೇರಿದ್ದೋ ಎಂಬ ದಾವೆ ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥವಾಗಿದೆ. ಈ ಜಾಗ ಕಂದಾಯ ಇಲಾಖೆಗೆ ಸೇರಿದ್ದು ಎಂಬ ತೀರ್ಪನ್ನು ಸಂಪುಟ ಸಭೆ ಅಂಗೀಕರಿಸಿದೆ.</p>.<p>* ಜೀವಾವಧಿ ಶಿಕ್ಷೆಗೊಳಗಾಗಿ 14 ವರ್ಷ ಶಿಕ್ಷೆ ಪೂರ್ಣಗೊಳಿಸಿದ ಅಥವಾ 10 ವರ್ಷ ಶಿಕ್ಷೆ ಅನುಭವಿಸಿದ ಕೈದಿಗಳಿಗೆ<br />ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ನಿಯಮಕ್ಕೆ ಸಚಿವ ಸಂಪುಟ ಅನುಮೋದಿಸಿದೆ.</p>.<p>* ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕು ದರೋಜಿ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹23.40 ಕೋಟಿ ಮಂಜೂರು.</p>.<p>* ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಲ್ಲಿ ಕೇರಳ– ಕರ್ನಾಟಕ ಗಡಿ ರಸ್ತೆ ಅಭಿವೃದ್ಧಿ. ಇದಕ್ಕಾಗಿ ಕೇಂದ್ರದ ಪಾಲು ₹1,274 ಕೋಟಿ ಒಳಗೊಂಡಂತೆ ₹2,729.66 ಕೋಟಿ ವೆಚ್ಚಕ್ಕೆ ಒಪ್ಪಿಗೆ.</p>.<p>* ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿದ ವಿಮೆಗೆ ರಾಜ್ಯ ಸರ್ಕಾರದ ಪಾಲಿನ 2016 ರ ಸಾಲಿನ ವಿಮಾ ಮೊತ್ತ ₹18.59 ಕೋಟಿ ಭರಿಸಲು ಒಪ್ಪಿಗೆ.</p>.<p><strong>ಟಿಪ್ಪು ಜಯಂತಿ ಗಲಾಟೆ: ಮೊಕದ್ದಮೆ ವಾಪಸ್</strong></p>.<p>ಟಿಪ್ಪು ಜಯಂತಿ, ಗಣೇಶೋತ್ಸವ ವೇಳೆ ನಡೆದ ಗಲಾಟೆಯಲ್ಲಿ ಭಾಗಿಯಾದವರ ಮೇಲೆ ಇದ್ದ ಮೊಕದ್ದಮಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ.</p>.<p>ನದಿ ನೀರಿನ ಹಂಚಿಕೆ ವಿರುದ್ಧದ ಹೋರಾಟ, ಟಿಪ್ಪುಜಯಂತಿ ಸಂದರ್ಭದಲ್ಲಿ ನಡೆದ ಗಲಭೆ, ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಗಲಭೆ, ಕನ್ನಡ ಪರ ಹೋರಾಟಗಳ ವೇಳೆ ದಾಖಲಾಗಿದ್ದ ಮೊಕದ್ದಮೆಗಳ ಪೈಕಿ 152 ಮೊಕದ್ದಮೆ ಹಿಂದಕ್ಕೆ ಪಡೆಯಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಹಿಂದೆ 46 ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತು.</p>.<p><strong>ನಿಗಮ–ಮಂಡಳಿ: ಸರ್ಕಾರಿ ನೌಕರರಲ್ಲ</strong></p>.<p>ನಿಗಮ–ಮಂಡಳಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಇನ್ನು ಮುಂದೆ ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಸೌಲಭ್ಯಗಳು ಸಿಗುವುದಿಲ್ಲ. ಇನ್ನು ಮುಂದೆ ನಿಗಮ–ಮಂಡಳಿಗಳ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದಿಲ್ಲ.ಈ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ’ಯಡಿ ಮೂರು ತಿಂಗಳು ಉಚಿತವಾಗಿ ಅಡುಗೆ ಅನಿಲ ಸಿಲಿಂಡರ್ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಕೋವಿಡ್–19 ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಅಡುಗೆ ಅನಿಲದ ಉಚಿತ ವಿತರಣೆಗೆ ಕ್ರಮ ತೆಗೆದುಕೊಂಡಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರವೂ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ವಿತರಿಸಲಿದೆ ಎಂದರು.</p>.<p>ಇದಕ್ಕಾಗಿ ಸರ್ಕಾರ ₹27.52 ಕೋಟಿ ಭರಿಸಲಿದ್ದು, ಸುಮಾರು 1 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದೆ ಎಂದು ಮಾಧುಸ್ವಾಮಿ ತಿಳಿಸಿದರು.</p>.<p class="Subhead">ಏಳನೇ ವೇತನ ಆಯೋಗದ ಶಿಫಾರಸ್ಸು ಜಾರಿ: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ<br />ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ಬೊಕ್ಕಸಕ್ಕೆ ₹137 ಕೋಟಿ ಹೊರೆಯಾಗಲಿದೆ. ಸುಮಾರು 2,800 ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಇದರ ಪ್ರಯೋಜನ ಸಿಗಲಿದೆ ಎಂದು ಅವರು ಹೇಳಿದರು.</p>.<p class="Subhead"><strong>ಸಂಪುಟ ಸಭೆಯ ಮುಖ್ಯಾಂಶಗಳು</strong></p>.<p><span class="Bullet">*</span>ಮೈಸೂರು ಮಿನರಲ್ಸ್ ಲಿಮಿಟೆಡ್ಗೆ ಸೇರಿದ ಜಾಗವು ಕಂದಾಯ ಇಲಾಖೆಗೆ ಸೇರಿದ್ದೋ ಅಥವಾ ಅರಣ್ಯ ಇಲಾಖೆಗೆ ಸೇರಿದ್ದೋ ಎಂಬ ದಾವೆ ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥವಾಗಿದೆ. ಈ ಜಾಗ ಕಂದಾಯ ಇಲಾಖೆಗೆ ಸೇರಿದ್ದು ಎಂಬ ತೀರ್ಪನ್ನು ಸಂಪುಟ ಸಭೆ ಅಂಗೀಕರಿಸಿದೆ.</p>.<p>* ಜೀವಾವಧಿ ಶಿಕ್ಷೆಗೊಳಗಾಗಿ 14 ವರ್ಷ ಶಿಕ್ಷೆ ಪೂರ್ಣಗೊಳಿಸಿದ ಅಥವಾ 10 ವರ್ಷ ಶಿಕ್ಷೆ ಅನುಭವಿಸಿದ ಕೈದಿಗಳಿಗೆ<br />ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ನಿಯಮಕ್ಕೆ ಸಚಿವ ಸಂಪುಟ ಅನುಮೋದಿಸಿದೆ.</p>.<p>* ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕು ದರೋಜಿ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹23.40 ಕೋಟಿ ಮಂಜೂರು.</p>.<p>* ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಲ್ಲಿ ಕೇರಳ– ಕರ್ನಾಟಕ ಗಡಿ ರಸ್ತೆ ಅಭಿವೃದ್ಧಿ. ಇದಕ್ಕಾಗಿ ಕೇಂದ್ರದ ಪಾಲು ₹1,274 ಕೋಟಿ ಒಳಗೊಂಡಂತೆ ₹2,729.66 ಕೋಟಿ ವೆಚ್ಚಕ್ಕೆ ಒಪ್ಪಿಗೆ.</p>.<p>* ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿದ ವಿಮೆಗೆ ರಾಜ್ಯ ಸರ್ಕಾರದ ಪಾಲಿನ 2016 ರ ಸಾಲಿನ ವಿಮಾ ಮೊತ್ತ ₹18.59 ಕೋಟಿ ಭರಿಸಲು ಒಪ್ಪಿಗೆ.</p>.<p><strong>ಟಿಪ್ಪು ಜಯಂತಿ ಗಲಾಟೆ: ಮೊಕದ್ದಮೆ ವಾಪಸ್</strong></p>.<p>ಟಿಪ್ಪು ಜಯಂತಿ, ಗಣೇಶೋತ್ಸವ ವೇಳೆ ನಡೆದ ಗಲಾಟೆಯಲ್ಲಿ ಭಾಗಿಯಾದವರ ಮೇಲೆ ಇದ್ದ ಮೊಕದ್ದಮಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ.</p>.<p>ನದಿ ನೀರಿನ ಹಂಚಿಕೆ ವಿರುದ್ಧದ ಹೋರಾಟ, ಟಿಪ್ಪುಜಯಂತಿ ಸಂದರ್ಭದಲ್ಲಿ ನಡೆದ ಗಲಭೆ, ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಗಲಭೆ, ಕನ್ನಡ ಪರ ಹೋರಾಟಗಳ ವೇಳೆ ದಾಖಲಾಗಿದ್ದ ಮೊಕದ್ದಮೆಗಳ ಪೈಕಿ 152 ಮೊಕದ್ದಮೆ ಹಿಂದಕ್ಕೆ ಪಡೆಯಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಹಿಂದೆ 46 ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತು.</p>.<p><strong>ನಿಗಮ–ಮಂಡಳಿ: ಸರ್ಕಾರಿ ನೌಕರರಲ್ಲ</strong></p>.<p>ನಿಗಮ–ಮಂಡಳಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಇನ್ನು ಮುಂದೆ ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಸೌಲಭ್ಯಗಳು ಸಿಗುವುದಿಲ್ಲ. ಇನ್ನು ಮುಂದೆ ನಿಗಮ–ಮಂಡಳಿಗಳ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದಿಲ್ಲ.ಈ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>