<p><strong>ಮೈಸೂರು:</strong> ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.</p>.<p>‘ಪ್ರತಿಭಟನೆಯಲ್ಲಿ ಭಾಗಿಯಾದ ಹಾಗೂ ವಿಶ್ವವಿದ್ಯಾಲಯದ ಹಾಸ್ಟೆಲ್ಗಳಲ್ಲಿ ಅನಧಿಕೃತವಾಗಿ ವಾಸವಾಗಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಸಿಂಡಿಕೇಟ್ನ ಕೆಲ ಸದಸ್ಯರು ಒತ್ತಾಯಿಸಿದರು. ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸಲು ಸಮಿತಿ ರಚಿಸಲು ನಿರ್ಧರಿಸಲಾಗಿದೆ’ ಎಂದು ಕುಲಸಚಿವ ಪ್ರೊ.ಆರ್.ಶಿವಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>ಇದುವರೆಗೆ ಪೊಲೀಸರ ವಿಚಾರಣೆಗೆ ಹಾಜರಾಗದ, ಪ್ರತಿಭಟನೆಯ ಆಯೋಜಕರಲ್ಲಿ ಒಬ್ಬರಾದ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ, ನಿರೀಕ್ಷಣಾ ಜಾಮೀನು ಪಡೆದು ವಿಚಾರಣೆಗೆ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ದೇಶದ್ರೋಹ ಪ್ರಕರಣದಲ್ಲಿ ವಕಾಲತು ವಹಿಸಬಾರದೆಂಬ ನಿರ್ಣಯವನ್ನು ವಾಪಸ್ ಪಡೆಯಬೇಕೆಂದು ಕೆಲ ವಕೀಲರು ಸಲ್ಲಿಸಿರುವ ಮನವಿ ಕುರಿತು ಚರ್ಚಿಸಲು ಕಾರ್ಯಕಾರಿ ಸಮಿತಿ ಸಭೆಯನ್ನು ಜ. 18 ಇಲ್ಲವೇ 20ರಂದು ಕರೆಯಲಾಗುವುದು ಎಂದು ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.</p>.<p>‘ಪ್ರತಿಭಟನೆಯಲ್ಲಿ ಭಾಗಿಯಾದ ಹಾಗೂ ವಿಶ್ವವಿದ್ಯಾಲಯದ ಹಾಸ್ಟೆಲ್ಗಳಲ್ಲಿ ಅನಧಿಕೃತವಾಗಿ ವಾಸವಾಗಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಸಿಂಡಿಕೇಟ್ನ ಕೆಲ ಸದಸ್ಯರು ಒತ್ತಾಯಿಸಿದರು. ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸಲು ಸಮಿತಿ ರಚಿಸಲು ನಿರ್ಧರಿಸಲಾಗಿದೆ’ ಎಂದು ಕುಲಸಚಿವ ಪ್ರೊ.ಆರ್.ಶಿವಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>ಇದುವರೆಗೆ ಪೊಲೀಸರ ವಿಚಾರಣೆಗೆ ಹಾಜರಾಗದ, ಪ್ರತಿಭಟನೆಯ ಆಯೋಜಕರಲ್ಲಿ ಒಬ್ಬರಾದ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ, ನಿರೀಕ್ಷಣಾ ಜಾಮೀನು ಪಡೆದು ವಿಚಾರಣೆಗೆ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ದೇಶದ್ರೋಹ ಪ್ರಕರಣದಲ್ಲಿ ವಕಾಲತು ವಹಿಸಬಾರದೆಂಬ ನಿರ್ಣಯವನ್ನು ವಾಪಸ್ ಪಡೆಯಬೇಕೆಂದು ಕೆಲ ವಕೀಲರು ಸಲ್ಲಿಸಿರುವ ಮನವಿ ಕುರಿತು ಚರ್ಚಿಸಲು ಕಾರ್ಯಕಾರಿ ಸಮಿತಿ ಸಭೆಯನ್ನು ಜ. 18 ಇಲ್ಲವೇ 20ರಂದು ಕರೆಯಲಾಗುವುದು ಎಂದು ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>