<p><strong>ಬೆಂಗಳೂರು:</strong> ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯ ಎಫ್ಎಸ್ಎಲ್ ವರದಿ ಬಿಡುಗಡೆ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.</p>.<p>‘ಖಾಸಗಿಯವರು ಯಾರು? ಎಫ್ಎಸ್ಎಲ್ ವರದಿ ತಯಾರಿಸಲು ಅವರಿಗೆ ನಿರಾಕ್ಷೇಪಣಾ ಪತ್ರ ಯಾರು ಕೊಟ್ಟಿದ್ದಾರೆ? ಈ ರೀತಿ ವರದಿ ಕೊಡಲು ಅವರಿಗೆ ಅನುಮತಿ ಇದೆಯೇ? ಎಲ್ಲವನ್ನೂ ಪರಿಶೀಲಿಸುತ್ತೇನೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>‘ಖಾಸಗಿ ಸಂಸ್ಥೆ ತಯಾರಿಸಿದ ಎಫ್ಎಸ್ಎಲ್ ವರದಿಯನ್ನು ಬಿಜೆಪಿಯವರು ಬಹಿರಂಗಪಡಿಸಿರುವುದು ದೇಶದ್ರೋಹದ ಕೆಲಸ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.</p>.<p>‘ಕ್ಲೂ 4 ಎವಿಡೆನ್ಸ್ ಪ್ರಯೋಗಾಲಯದ ವಿಶ್ವಾಸಾರ್ಹತೆ ಏನು? ಖಾಸಗಿಯಾಗಿ ಅವರು ಏನಾದರೂ ಮಾಡಿಕೊಳ್ಳಲಿ. ಆ ಸಂಸ್ಥೆಗೆ ಸರ್ಕಾರದ ಪ್ರಮಾಣಪತ್ರ ಇದ್ದರೆ, ಅವರು ಸ್ಥಳೀಯ ಪೊಲೀಸರಿಗೆ ವರದಿ ನೀಡಬೇಕು. ಬಿಜೆಪಿಯವರು ಪ್ರಯೋಗಾಲಯಕ್ಕೆ ನೀಡಿರುವ ವಿಡಿಯೊ ತುಣುಕು ಯಾವುದು’ ಎಂದು ಪ್ರಶ್ನಿಸಿದರು.</p>.<p>‘ಖಾಸಗಿ ಸಂಸ್ಥೆಗಳಿಂದ ನಾನೂ ವರದಿ ತೆಗೆದುಕೊಂಡಿದ್ದೇನೆ. ಅದನ್ನು ಬಹಿರಂಗಪಡಿಸಬಹುದಿತ್ತು ಅಲ್ಲವೇ? ಆದರೆ, ನಾನು ಹಾಗೆ ಮಾಡಿಲ್ಲ. ಬಿಜೆಪಿಯವರು ಮಾಡಿರುವುದು ನಿಜವಾದ ದೇಶದ್ರೋಹ. ಸಂವಾದ ಫೌಂಡೇಷನ್ ವರದಿ ತೆಗೆದುಕೊಳ್ಳಲು ಬಿಜೆಪಿಯವರಿಗೇನು ಆಸಕ್ತಿ?’ ಎಂದರು.</p>.<p>ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ‘ಪಾಕಿಸ್ತಾನ ಪರ ಘೋಷಣೆ ಕೂಗಿದ ಸಂಬಂಧ ವರದಿ ನೀಡಿರುವ ಖಾಸಗಿ ಸಂಸ್ಥೆ ಯಾರ ಪರ ಕೆಲಸ ಮಾಡುತ್ತಿದೆ ಎನ್ನುವುದು ಗೊತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಈ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ಮಾಡಲು ಬಿಡೋಣ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯ ಎಫ್ಎಸ್ಎಲ್ ವರದಿ ಬಿಡುಗಡೆ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.</p>.<p>‘ಖಾಸಗಿಯವರು ಯಾರು? ಎಫ್ಎಸ್ಎಲ್ ವರದಿ ತಯಾರಿಸಲು ಅವರಿಗೆ ನಿರಾಕ್ಷೇಪಣಾ ಪತ್ರ ಯಾರು ಕೊಟ್ಟಿದ್ದಾರೆ? ಈ ರೀತಿ ವರದಿ ಕೊಡಲು ಅವರಿಗೆ ಅನುಮತಿ ಇದೆಯೇ? ಎಲ್ಲವನ್ನೂ ಪರಿಶೀಲಿಸುತ್ತೇನೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>‘ಖಾಸಗಿ ಸಂಸ್ಥೆ ತಯಾರಿಸಿದ ಎಫ್ಎಸ್ಎಲ್ ವರದಿಯನ್ನು ಬಿಜೆಪಿಯವರು ಬಹಿರಂಗಪಡಿಸಿರುವುದು ದೇಶದ್ರೋಹದ ಕೆಲಸ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.</p>.<p>‘ಕ್ಲೂ 4 ಎವಿಡೆನ್ಸ್ ಪ್ರಯೋಗಾಲಯದ ವಿಶ್ವಾಸಾರ್ಹತೆ ಏನು? ಖಾಸಗಿಯಾಗಿ ಅವರು ಏನಾದರೂ ಮಾಡಿಕೊಳ್ಳಲಿ. ಆ ಸಂಸ್ಥೆಗೆ ಸರ್ಕಾರದ ಪ್ರಮಾಣಪತ್ರ ಇದ್ದರೆ, ಅವರು ಸ್ಥಳೀಯ ಪೊಲೀಸರಿಗೆ ವರದಿ ನೀಡಬೇಕು. ಬಿಜೆಪಿಯವರು ಪ್ರಯೋಗಾಲಯಕ್ಕೆ ನೀಡಿರುವ ವಿಡಿಯೊ ತುಣುಕು ಯಾವುದು’ ಎಂದು ಪ್ರಶ್ನಿಸಿದರು.</p>.<p>‘ಖಾಸಗಿ ಸಂಸ್ಥೆಗಳಿಂದ ನಾನೂ ವರದಿ ತೆಗೆದುಕೊಂಡಿದ್ದೇನೆ. ಅದನ್ನು ಬಹಿರಂಗಪಡಿಸಬಹುದಿತ್ತು ಅಲ್ಲವೇ? ಆದರೆ, ನಾನು ಹಾಗೆ ಮಾಡಿಲ್ಲ. ಬಿಜೆಪಿಯವರು ಮಾಡಿರುವುದು ನಿಜವಾದ ದೇಶದ್ರೋಹ. ಸಂವಾದ ಫೌಂಡೇಷನ್ ವರದಿ ತೆಗೆದುಕೊಳ್ಳಲು ಬಿಜೆಪಿಯವರಿಗೇನು ಆಸಕ್ತಿ?’ ಎಂದರು.</p>.<p>ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ‘ಪಾಕಿಸ್ತಾನ ಪರ ಘೋಷಣೆ ಕೂಗಿದ ಸಂಬಂಧ ವರದಿ ನೀಡಿರುವ ಖಾಸಗಿ ಸಂಸ್ಥೆ ಯಾರ ಪರ ಕೆಲಸ ಮಾಡುತ್ತಿದೆ ಎನ್ನುವುದು ಗೊತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಈ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ಮಾಡಲು ಬಿಡೋಣ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>