<p><strong>ಬೆಂಗಳೂರು:</strong> ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಮೇಲೆ ₹1 ಸೆಸ್ ವಿಧಿಸುವ ಕಾರ್ಮಿಕ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದೆ.</p>.<p>ಆದರೆ, ಈ ಪ್ರಸ್ತಾವ ಅನುಷ್ಠಾನಕ್ಕೆ ಸೂಕ್ತವಾಗಿಲ್ಲ ಎಂದು ಹೇಳಿರುವ ಆರ್ಥಿಕ ಇಲಾಖೆ, ಪ್ರಸ್ತಾವವನ್ನು ತಿರಸ್ಕರಿಸಿದೆ.</p>.<p>‘ಅಸಂಘಟಿತ ವಲಯದಲ್ಲಿ ಸುಮಾರು 1.30 ಕೋಟಿ ಕಾರ್ಮಿಕರು ಇದ್ದಾರೆ. ಇಂತಹ ಕಾರ್ಮಿಕರ ಕಲ್ಯಾಣ ಹಾಗೂ ಅವರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ದೊಡ್ಡ ಮೊತ್ತದ ಸಂಪನ್ಮೂಲದ ಅಗತ್ಯವಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಥೆನಾಲ್ ಮೇಲೆ ಸೆಸ್ ವಿಧಿಸುವುದರಿಂದ ವಾರ್ಷಿಕ ಸುಮಾರು ₹2,120 ಕೋಟಿ ಸಂಗ್ರಹವಾಗುತ್ತದೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಗಳಾದ ಆರೋಗ್ಯ ಸೌಲಭ್ಯ, ಅಪಘಾತ ಪರಿಹಾರ, ಮಕ್ಕಳ ಶಿಕ್ಷಣಕ್ಕೆ ನೆರವು ನೀಡಲು ಬಳಸಲಾಗುವುದು’ ಎಂದು ಮುಖ್ಯಮಂತ್ರಿಗೆ ಸಲ್ಲಿಸಿದ ಪ್ರಸ್ತಾವದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವರಿಸಿದ್ದಾರೆ. </p>.<p>‘ಅಸಂಘಟಿತ ವಲಯಕ್ಕೆ ಪ್ರತ್ಯೇಕ ಸೆಸ್ ಸಂಗ್ರಹಿಸಿದರೆ ಆರೋಗ್ಯ ಸೌಲಭ್ಯಕ್ಕೆ ₹1,772 ಕೋಟಿ ವಿನಿಯೋಗಿಸಲಾಗುವುದು. ಉಳಿದ ಹಣವನ್ನು 62 ಲಕ್ಷ ಕಾರ್ಮಿಕ ಕುಟುಂಬಗಳ ಕಲ್ಯಾಣ ಕಾರ್ಯಗಳಿಗೆ ಬಳಸಲಾಗುವುದು. ಮೃತ ಕಾರ್ಮಿಕರ ಅಂತ್ಯ ಸಂಸ್ಕಾರಕ್ಕೂ ಹಣ ನೀಡಲಾಗುವುದು’ ಎಂದು ಲಾಡ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಮೇಲೆ ₹1 ಸೆಸ್ ವಿಧಿಸುವ ಕಾರ್ಮಿಕ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದೆ.</p>.<p>ಆದರೆ, ಈ ಪ್ರಸ್ತಾವ ಅನುಷ್ಠಾನಕ್ಕೆ ಸೂಕ್ತವಾಗಿಲ್ಲ ಎಂದು ಹೇಳಿರುವ ಆರ್ಥಿಕ ಇಲಾಖೆ, ಪ್ರಸ್ತಾವವನ್ನು ತಿರಸ್ಕರಿಸಿದೆ.</p>.<p>‘ಅಸಂಘಟಿತ ವಲಯದಲ್ಲಿ ಸುಮಾರು 1.30 ಕೋಟಿ ಕಾರ್ಮಿಕರು ಇದ್ದಾರೆ. ಇಂತಹ ಕಾರ್ಮಿಕರ ಕಲ್ಯಾಣ ಹಾಗೂ ಅವರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ದೊಡ್ಡ ಮೊತ್ತದ ಸಂಪನ್ಮೂಲದ ಅಗತ್ಯವಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಥೆನಾಲ್ ಮೇಲೆ ಸೆಸ್ ವಿಧಿಸುವುದರಿಂದ ವಾರ್ಷಿಕ ಸುಮಾರು ₹2,120 ಕೋಟಿ ಸಂಗ್ರಹವಾಗುತ್ತದೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಗಳಾದ ಆರೋಗ್ಯ ಸೌಲಭ್ಯ, ಅಪಘಾತ ಪರಿಹಾರ, ಮಕ್ಕಳ ಶಿಕ್ಷಣಕ್ಕೆ ನೆರವು ನೀಡಲು ಬಳಸಲಾಗುವುದು’ ಎಂದು ಮುಖ್ಯಮಂತ್ರಿಗೆ ಸಲ್ಲಿಸಿದ ಪ್ರಸ್ತಾವದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವರಿಸಿದ್ದಾರೆ. </p>.<p>‘ಅಸಂಘಟಿತ ವಲಯಕ್ಕೆ ಪ್ರತ್ಯೇಕ ಸೆಸ್ ಸಂಗ್ರಹಿಸಿದರೆ ಆರೋಗ್ಯ ಸೌಲಭ್ಯಕ್ಕೆ ₹1,772 ಕೋಟಿ ವಿನಿಯೋಗಿಸಲಾಗುವುದು. ಉಳಿದ ಹಣವನ್ನು 62 ಲಕ್ಷ ಕಾರ್ಮಿಕ ಕುಟುಂಬಗಳ ಕಲ್ಯಾಣ ಕಾರ್ಯಗಳಿಗೆ ಬಳಸಲಾಗುವುದು. ಮೃತ ಕಾರ್ಮಿಕರ ಅಂತ್ಯ ಸಂಸ್ಕಾರಕ್ಕೂ ಹಣ ನೀಡಲಾಗುವುದು’ ಎಂದು ಲಾಡ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>