ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಇಲಾಖೆ ಸಚಿವ ಸಿ.ಟಿ.ರವಿ, ‘ಬಜೆಟ್ ಪ್ರಸ್ತಾವ ಸಿದ್ಧಪಡಿಸುವಾಗ ಶೇ 30ರಷ್ಟು ಕಡಿತಗೊಳಿಸುವಂತೆ ಹಣಕಾಸು ಇಲಾಖೆ ಹೇಳಿದೆ. ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಆಗದಿರುವುದು, ಕೇಂದ್ರದಿಂದಲೂ ಅನುದಾನ ಬಾರದಿರುವುದು, ಅತಿವೃಷ್ಟಿ, ರೈತರ ಸಾಲ ಮನ್ನಾಗೆ ಹಣ ಹೊಂದಿಸಬೇಕಿದೆ. ಹಾಗಾಗಿ ಅನುದಾನ ಕಡಿತಕ್ಕೆ ಸಲಹೆ ಮಾಡಲಾಗಿದೆ ಎಂದು ಹೇಳಿದರು.